ಸ್ಯಾಮ್ ಸಂಗ್ ಗೆಲಾಕ್ಸಿ ಎಸ್23 ಸರಣಿ ಭಾರತದಲ್ಲಿ ಬಿಡುಗಡೆ

ಅತ್ಯುನ್ನತ ಎಸ್ ಸರಣಿ ಮೇಡ್ ಇನ್ ಇಂಡಿಯಾ ಹೆಗ್ಗಳಿಕೆ

Team Udayavani, Feb 3, 2023, 8:31 PM IST

ಸ್ಯಾಮ್ ಸಂಗ್ ಗೆಲಾಕ್ಸಿ ಎಸ್23 ಸರಣಿ ಭಾರತದಲ್ಲಿ ಬಿಡುಗಡೆ

ಗುರುಗ್ರಾಮ: ಸ್ಯಾಮ್ ಸಂಗ್ ಕಂಪೆನಿ ಅತ್ಯುನ್ನತ ಶ್ರೇಣಿಯಾದ ಎಸ್ ಸರಣಿಯಲ್ಲಿ ವರ್ಷಕ್ಕೊಮ್ಮೆ ಮೊಬೈಲ್ ಗಳನ್ನು ವಿಶ್ವ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತದೆ. ಇದೀಗ ಗೆಲಾಕ್ಸಿ ಎಸ್ 23 ಸರಣಿಯ 3 ಫೋನ್ ಗಳನ್ನು ಭಾರತ ಸೇರಿ ಅನೇಕ ದೇಶಗಳಲ್ಲಿ ಬಿಡುಗಡೆ ಮಾಡಲಾಯಿತು. ಗೆಲಾಕ್ಸಿ ಎಸ್ 23 ಅಲ್ಟ್ರಾ, ಎಸ್ 23 ಪ್ಲಸ್ ಹಾಗೂ ಎಸ್ 23 ಈ ಹೊಸ ಮೊಬೈಲ್‌ಗಳು.

ಈ ಫೋನ್ ಗಳು ಭಾರತದ ನೋಯ್ಡಾದಲ್ಲಿರುವ ಸ್ಯಾಮ್ ಸಂಗ್ ಕಾರ್ಖಾನೆಯಲ್ಲಿ ತಯಾರಾಗಿವೆ ಎಂದು ಕಂಪೆನಿ ತಿಳಿಸಿದೆ. ಎಸ್ 23 ಸರಣಿಯ ಫೋನ್ ಗಳನ್ನು ಭಾರತದಲ್ಲೇ ತಯಾರಿಸಬೇಕೆಂಬ ಬದ್ಧತೆಯನ್ನು ಸ್ಯಾಮ್ ಸಂಗ್ ಹೊಂದಿತ್ತು ಎಂದು ಕಂಪೆನಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದಲ್ಲೇ ಅತಿ ದೊಡ್ಡದಾದ ಮೊಬೈಲ್ ತಯಾರಿಕಾ ಕಾರ್ಖಾನೆಯನ್ನು 2018ರಲ್ಲಿ ಉದ್ಘಾಟಿಸಿದ್ದರು. ವಿಶ್ವದಲ್ಲೇ ದೊಡ್ಡದಾದ ಮೊಬೈಲ್ ಎಕ್‌ಸ್ಪೀರಿಯನ್‌ಸ್ ಕೇಂದ್ರವಾದ ಸ್ಯಾಮ್ ಸಂಗ್ ಒಪೆರಾ ಹೌಸ್ ಬೆಂಗಳೂರಿನಲ್ಲಿದೆ ಎಂದು ಕಂಪೆನಿ ತಿಳಿಸಿದೆ.
ಎಸ್23 ಸರಣಿಯ ಫೋನ್‌ಗಳ ತಯಾರಿಕೆಗೆ ಪುನರ್ ಬಳಕೆ ಮಾಡಲಾದ ಅಲ್ಯೂಮಿನಿಯಂ, ಗ್ಲಾಸ್ ಹಾಗೂ ಪ್ಲಾಸ್ಟಿಕ್ ಅನ್ನು ಬಳಸಲಾಗಿದ್ದು, ಇದು ಪರಿಸರ ಸ್ನೇಹಿಯಾಗಿದೆ ಎಂದು ತಿಳಿಸಿದೆ.

ಫೋನ್‌ಗಳು ಅತ್ಯುತ್ತಮ ಕ್ಯಾಮರಾ ಅನುಭವ ನೀಡುತ್ತವೆ ಎಂದು ಕಂಪೆನಿ ತಿಳಿಸಿದೆ. ಈ ಫೋನ್‌ಗಳು ಸ್ನಾಪ್‌ಡ್ರಾಗನ್ 8 ಜನರೇಷನ್ 2 ಪ್ರೊಸೆಸರ್ ಹೊಂದಿವೆ.

ಮೂರು ಮಾದರಿಗಳು ಸಹ ಅಮೋಲೆಡ್ 2 ಎಕ್‌ಸ್ ಡಿಸ್‌ಪ್ಲೇ, 120 ಹರ್ಟ್‌ಜ್ ರಿಫ್ರೆಶ್ ರೇಟ್, ಐಪಿ68 ನೀರು ಮತ್ತು ಧೂಳು ನಿರೋಧಕ, ಗೊರಿಲ್ಲಾ ಗ್ಲಾಸ್ ವೆಕ್ಟಸ್ 2 ರಕ್ಷಣೆ, ಆರ್ಮರ್ ಅಲ್ಯುಮಿನಿಯಂ ಕವಚ ಮತ್ತು ಫ್ರೇಂ ಹೊಂದಿದೆ. ಎಸ್ 23 ಅಲ್ಟ್ರಾ ಮಾದರಿಗೆ ಎಂದಿನಂತೆ ಎಸ್ ಪೆನ್ ಇದೆ.

ಎಸ್ 23 ಅಲ್ಟ್ರಾ 6.8 ಇಂಚಿನ ಕ್ಯೂಎಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದರೆ, ಎಸ್ 23 ಪ್ಲಸ್ 6.6 ಇಂಚಿನ ಎಫ್‌ಎಚ್ ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಎಸ್23 ಮಾದರಿಯು 6.1 ಇಂಚಿನ ಎಪ್‌ಎಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ.
ಈ ಪೈಕಿ ಎಸ್ 23 ಅಲ್ಟ್ರಾ 200 ಮೆ.ಪಿ. ಕ್ಯಾಮರಾ ಹೊಂದಿದೆ. ಮಂದ ಬೆಳಕಿನಲ್ಲೂ ಸೆಲ್ಫೀ ಅತ್ಯುತ್ತಮವಾಗಿ ಮೂಡಿಬರುತ್ತದೆ. ಡ್ಯುಯಲ್ ಪಿಕ್ಸಲ್ ಆಟೋ ಫೋಕಸ್ ತಂತ್ರಜ್ಞಾನದಿಂದ ಮುಖ್ಯ ಕ್ಯಾಮರಾ ಶೇ 60ರಷ್ಟು ವೇಗವಾಗಿ ಫೋಕಸ್ ಮಾಡುತ್ತದೆ.

ಬುಕಿಂಗ್ ಆರಂಭ: ಗೆಲಾಕ್ಸಿ ಎಸ್ 23 ಸರಣಿಯ ಫೋನ್‌ಗಳ ಮುಂಗಡ ಬುಕಿಂಗ್ ಇದೀಗ ಪ್ರಮುಖ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್ ಗಳಲ್ಲಿ ಆರಂಭವಾಗಿದೆ. ಇವು ಫೆಬ್ರವರಿ 23 ರಿಂದ ಗ್ರಾಹಕರಿಗೆ ಲಭ್ಯವಾಗಲಿವೆ.

ಬೆಲೆ :
ಎಸ್ 23 ಅಲ್ಟ್ರಾ : 12 ಜಿಬಿ ರ್ಯಾಮ್, 1ಟಿಬಿ ಮೆಮೊರಿ 1,54,999 ರೂ. 12+512 ಜಿಬಿ 1,34,999 ರೂ., 12+256 ಜಿಬಿ 1,24,999 ರೂ. (ಫ್ಯಾಂಟಮ್ ಬ್ಲ್ಯಾಕ್, ಕ್ರೀಮ್ ಮತ್ತು ಗ್ರೀನ್ ಬಣ್ಣದಲ್ಲಿ ಲಭ್ಯ)

ಎಸ್ 23ಪ್ಲಸ್: 8+512 ಜಿಬಿ ಆವೃತ್ತಿಗೆ 1,04,999 ರೂ., 8+256 ಆವೃತ್ತಿಗೆ 94,999 ರೂ. (ಫ್ಯಾಂಟಮ್ ಬ್ಲ್ಯಾಕ್ ಮತ್ತು ಕ್ರೀಂ ಬಣ್ಣದಲ್ಲಿ ಲಭ್ಯ)

ಎಸ್ 23 : 8+256 ಜಿಬಿ ಆವೃತ್ತಿಗೆ 79,999 ರೂ. , 8+128 ಜಿಬಿ ಆವೃತ್ತಿಗೆ 74,999 ರೂ. (ಫ್ಯಾಂಟಮ್ ಬ್ಲ್ಯಾಕ್, ಗ್ರೀನ್, ಕ್ರೀಮ್ ಮತ್ತು ಲ್ಯಾವೆಂಡರ್ ಬಣ್ಣದಲ್ಲಿ ಲಭ್ಯ.)

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.