ಸನಾತನ , ಶ್ರೀಮಂತ ಕೊಂಕಣಿ ಭಾಷೆ – ಸಾಹಿತ್ಯ – ಸಂಸ್ಕೃತಿ


Team Udayavani, Feb 21, 2020, 6:30 AM IST

sanatana

ಕೊಂಕಣಿ ಭಾಷೆ, ಸಾಹಿತ್ಯ , ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಶ್ರಮಿಸುತ್ತಿರುವ ಕೊಂಕಣಿ ಅಕಾಡೆಮಿಗೆ ಈಗ ಬೆಳ್ಳಿ ಹಬ್ಬದ ಸಂಭ್ರಮ. ಈ ನಿಮಿತ್ತ ಕೊಂಕಣಿ ಅಕಾಡೆಮಿಯ ಕಾರ್ಯಚಟುವಟಿಕೆಗಳು ಮತ್ತು ಕೊಂಕಣಿ ಭಾಷೆ ಮತ್ತು ಸಂಸ್ಕೃತಿಯ ಮೇಲೆ ಬೆಳಕು ಚೆಲ್ಲುವ ಪ್ರಯತ್ನವಿದು.

ಆಂಗ್ಲ ಭಾಷೆಯ ಪ್ರಭಾವದಿಂದ ಎಷ್ಟೋ ಭಾಷೆಗಳು ಅವನತಿಯತ್ತ ಸಾಗುತ್ತಿದೆ. ಇದಕ್ಕೆ ಕೊಂಕಣಿ ಭಾಷೆಯೂ ಹೊರತಾಗಿಲ್ಲ . ಈ ದೃಷ್ಟಿಯಿಂದ ಕೊಂಕಣಿ ಭಾಷೆಯನ್ನು ಉಳಿಸಿ, ಬೆಳೆಸಬೇಕು, ಕೊಂಕಣಿ ಭಾಷೆಯಲ್ಲಿ ಸಾಹಿತ್ಯದ ಕೃಷಿ ನಿರಂತರವಾಗಿ ನಡೆಯಬೇಕು, ಕೊಂಕಣಿ ಸಮುದಾಯದ ಕಲೆ – ಸಂಸ್ಕೃತಿ ಉಳಿಯಬೇಕೆಂಬ ಸದಾಶಯದಿಂದ 21-4-1994ರಂದು “ಕೊಂಕಣಿ ಸಾಹಿತ್ಯ ಅಕಾಡೆಮಿ’ ಕರ್ನಾಟಕ ಸರಕಾರದಿಂದ ಸ್ಥಾಪನೆಯಾಯಿತು.

ಭಾರತದ ಸಂವಿಧಾನವು 22 ಭಾಷೆಗಳಿಗೆ 8ನೇ ಪರಿಚ್ಛೇದದಲ್ಲಿ ಮಾನ್ಯತೆ ನೀಡಿದೆ. ಅವುಗಳಲ್ಲಿ ಕೊಂಕಣಿಯೂ ಒಂದು. ಕೊಂಕಣಿ ಭಾರತದ ಪಶ್ಚಿಮ ಮತ್ತು ಕೊಂಕಣ ಪ್ರದೇಶದಲ್ಲಿ ಬಳಕೆಯಲ್ಲಿದೆ. ಕೊಂಕಣಿ ಎಂಬ ಶಬ್ದದ ಉತ್ಪತ್ತಿ “ಕೊಂಕಣ್‌’ ಎಂಬ ಶಬ್ದದಿಂದಾಗಿದೆ. ಸಂಸ್ಕೃತದಲ್ಲಿ “ಕುಹು’ ಎಂದರೆ ಭೂಮಿ ಮತ್ತು “ಕೋನಾ’ ಎಂದರೆ ಮೂಲೆ. ಈ ಶಬ್ದಗಳಿಂದ ಭೂಮೂಲೆಯ ಪ್ರದೇಶ ಎಂಬ ಅರ್ಥದಲ್ಲಿ ಈ ಶಬ್ದ ಬಂದಿದೆ. ದಕ್ಷಿಣ ಏಷ್ಯಾದ ಮೂಲ ನಿವಾಸಿ ಜನರ ಆಡುಭಾಷೆಯ ಮೇಲೆ ಕ್ರಮೇಣ ವಿವಿಧ ಭಾಷೆಗಳ ಪ್ರಭಾವವಿದ್ದು ಹೊಸ ಭಾಷೆಗಳು ರೂಪುಗೊಂಡಂತೆ ಕೊಂಕಣ ತೀರದ ಕೊಂಗ (ಕೊಂಕು) ಜನರ ಆಡು ನುಡಿಯ ಮೇಲೆ ಪ್ರಾಕೃತ ಹಾಗೂ ಉತ್ತರ ಮಹಾರಾಷ್ಟ್ರದ ಭಾಷೆಗಳ ಪ್ರಭಾವ ಬೀಳುತ್ತಾ ಸರಿಸುಮಾರು ಹತ್ತನೇ ಶತಮಾನದಲ್ಲಿ ಕೊಂಕಣಿ ಭಾಷೆ ಉದಯಿಸಿತು.

ಕೊಂಕಣಿಯು ಒಂದು ಸಾವಿರ ವರ್ಷಗಳಿಂದ ಲಿಖೀತ ರೂಪದಲ್ಲಿ ಬಳಕೆಯಲ್ಲಿದೆ. ಗುಜರಾತ್‌ನಿಂದ ಕೇರಳದ ತುದಿಯ ತನಕ 5 ರಾಜ್ಯಗಳ ಕರಾವಳಿಯಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಮ್‌ ಹೀಗೆ 3 ಧರ್ಮಗಳ, 41 ಉಪಜಾತಿಗಳ ಜನರ ಆಡು ಭಾಷೆಯಾಗಿರುವ ಕೊಂಕಣಿಗೆ ನಿರ್ದಿಷ್ಟ ಏಕ ಲಿಪಿ ಇಲ್ಲ. ಈ ಪ್ರದೇಶದ ಜನ ಕೊಂಕಣಿಯನ್ನು ಬರೆಯಲು ದೇವನಾಗರಿ, ಕನ್ನಡ, ರೋಮನ್‌, ಮಲಯಾಳಂ ಹಾಗೂ ಪಸೋì – ಅರೇಬಿಕ್‌ ಲಿಪಿಗಳ ಬಳಕೆ ಮಾಡುತ್ತಿದ್ದಾರೆ.

ಸಾಂಸ್ಕೃತಿಕ – ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕೊಂಕಣಿ ಗರು ಸಂಗೀತ, ಗಾಯನಕ್ಕೆ ವಿಶೇಷ ಸ್ಥಾನ ನೀಡಿದ್ದಾರೆ. ಬನಾ³ಡಾ, ವಳಿxಕೆ ಗೀತೆಗಳು, ಪಾಳಾ¡éಗಿತಾಂ, ಬೆಳಾಗಿತಾಂ, ಧಾಲೋ, ದರ್ಜಸ್‌, ದುಲೊ³ಡ್‌, ದುವಾಳೊ, ಫೇಲ್‌, ದೆಕ್ಲಿ …ಇತ್ಯಾದಿ “ಗುಮಟೆ’ ಎಂಬ ವಾದನ ಕೊಂಕಣಿ ಸಂಸ್ಕೃತಿಯ ಸ್ವಂತ ಅನನ್ಯವಾದನ. ಮಣ್ಣಿನ, ಸಣ್ಣ ಕಂಠದ ವೃತ್ತಾಕಾರದ ಮಡಿಕೆಯ ಬಾಯಿಗೆ ಉಡದ ಚರ್ಮವನ್ನು ಕಟ್ಟಿ ಇದನ್ನು ಸಿದ್ಧಪಡಿಸಲಾಗುತ್ತದೆ.

ಕೊಂಕಣಿ ಸಾಹಿತ್ಯ, ಸಂಸ್ಕೃತಿ, ಭಾಷೆ, ಶಿಕ್ಷಣ, ಸಮುದಾಯದ ಬೆಳವಣಿಗೆಗೆ 25 ವರ್ಷಗಳಿಂದ “ಕೊಂಕಣಿ ಸಾಹಿತ್ಯ ಅಕಾಡೆಮಿ’ ನಿರಂತರವಾಗಿ ಶ್ರಮಿಸುತ್ತಿದೆ. ಪ್ರತಿ ವರ್ಷ ಅಕಾಡೆಮಿ ಕೊಂಕಣಿ ಸಾಹಿತ್ಯ, ಕಲೆ ಹಾಗೂ ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಸಾಧಕರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವನ್ನು ಅಕಾಡೆಮಿಯು ರಾಜ್ಯಾದ್ಯಂತ ನಡೆಸಿಕೊಂಡು ಬರುತ್ತಿದೆ. 1995ರಿಂದ 2018ರ ವರೆಗೆ ಒಟ್ಟು 97 ಸಾಧಕರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ವರೆಗೆ ಒಟ್ಟು 62 ಪುಸ್ತಕಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಅಕಾಡೆಮಿಯ ಸತತ ಪ್ರಯತ್ನದಿಂದ ಕರ್ನಾಟಕದಲ್ಲಿ ಕೊಂಕಣಿ ಕಲಿಕೆ ಅಭಿವೃದ್ಧಿಯಲ್ಲಿದೆ. 6ನೇ ತರಗತಿಯಿಂದ 10ನೇ ತರಗತಿವರೆಗೆ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ವಿದ್ಯಾರ್ಥಿಗಳು ಕೊಂಕಣಿಯನ್ನು ಐಚ್ಛಿಕ ಭಾಷೆಯಾಗಿ ಕಲಿಯುತ್ತಿದ್ದಾರೆ. ಹಂಪನ ಕಟ್ಟೆಯ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಸ್ನಾತಕೋತ್ತರದಲ್ಲಿ ಕೊಂಕಣಿ ಮೊಳಕೆಯೊಡೆದಿದೆ. ಅಕಾಡೆಮಿ ವತಿಯಿಂದ ಕೊಂಕಣಿ ಎಂ.ಎ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸುತ್ತಿದೆ.

ಅಕಾಡೆಮಿ ವತಿಯಿಂದ ಪುಸ್ತಕ ಪ್ರಕಟನೆ ಮತ್ತು ಮಾರಾಟ, ಗ್ರಂಥಾಲಯ ಅಭಿವೃದ್ಧಿ ಇತ್ಯಾದಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಸಾಹಿತ್ಯದ ವಿವಿಧ ಪ್ರಕಾರಗಳಾದ ಕತೆ, ಕಾದಂಬರಿ, ಮಹಾಕಾವ್ಯ, ಕವಿತೆ, ಲೇಖನ ಸಂಗ್ರಹ, ಜೀವನ ಚರಿತ್ರೆ, ಫೆಲೋಶಿಪ್‌ ಅಧ್ಯಯನ, ವ್ಯಾಕರಣ, ಪ್ರವಾಸ ಸಾಹಿತ್ಯ, ಆರ್ಥಿಕ ಮಾಹಿತಿ, ಶಿಶು ಸಾಹಿತ್ಯ, ಸ್ತ್ರೀಯರ ಸಾಹಿತ್ಯ, ಅನುವಾದ, ವಿಜ್ಞಾನ, ಜನಪದ ಹಾಡುಗಳು, ಗಮಕ ಹಾಡುಗಳು, ಕೃಷಿ ಮಾಹಿತಿ, ನಾಟಕ, ಸಮುದಾಯ ಅಧ್ಯಯನ, ದಿನಬಳಕೆಯ ಪದಕೋಶ ಹೀಗೆ ವಿವಿಧ ಪ್ರಕಾರಗಳ ವೈವಿಧ್ಯತೆಯನ್ನು ಅಳವಡಿಸಿ ಪುಸ್ತಕ ಪ್ರಕಟಿಸಲಾಗುತ್ತಿದೆ.
ಇದುವರೆಗೆ ಅಕಾಡೆಮಿ ವತಿಯಿಂದ 263 ಪುಸ್ತಕಗಳನ್ನು ಪ್ರಕಟಿಸಲಾಗಿದೆ.

ಲೇಖಕರಿಗೆ ಗೌರವ ಧನದ ಜೊತೆಗೆ 25 ಪುಸ್ತಕಗಳನ್ನು ಹಾಗೂ ಮಾರಾಟಕ್ಕೆ ಶೇ. 50 ರಿಯಾಯಿತಿಯಲ್ಲಿ 100 ಪುಸ್ತಕಗಳನ್ನು ನೀಡಲಾಗುತ್ತಿದೆ. ಕೊಂಕಣಿ ಸಾಹಿತಿಗಳು ಮುದ್ರಿಸಿ ಪ್ರಕಟಿಸಿರುವ ಪುಸ್ತಕಗಳನ್ನು ಸಹ ಅಕಾಡೆಮಿ ವತಿಯಿಂದ ಶೇ. 20 ರಿಯಾಯಿತಿಯೊಂದಿಗೆ ರೂ.2000 ಮೌಲ್ಯದ ಪುಸ್ತಕಗಳನ್ನು ಖರೀದಿಸಿ ಪ್ರೋತ್ಸಾಹಿಸಲಾಗುತ್ತಿದೆ. ಕೊಂಕಣಿ ಸಮುದಾಯದ ಅನುಪಮ ಜನಪದ ಹಾಡು, ನೃತ್ಯಗಳು ನಶಿಸಿ ಹೋಗದೆ ಅವುಗಳನ್ನು ಮೂಲರೂಪದಲ್ಲಿ ಉಳಿಸಿ ಬೆಳೆಸುವ, ಅರಿವು ಮೂಡಿಸುವ ಕೆಲಸ ಕಾರ್ಯಗಳು ಅಕಾಡೆಮಿಯಿಂದ ನಡೆಯುತ್ತಿವೆ.

ಈ ರೀತಿ ಬಹು ಆಯಾಮಗಳಿಂದ ಜನೋಪಯೋಗಿ ಕೆಲಸ ಮಾಡುತ್ತಿರುವ “ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ’ಗೆ ಈಗ 25ರ ಹರೆಯ. ಅಕಾಡೆಮಿಯ ಈ ಬೆಳ್ಳಿಹಬ್ಬವನ್ನು ಹಾಗೂ ಕೊಂಕಣಿ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕಾರ್ಕಳದ ಶಾಲೆಯ ಆವರಣದಲ್ಲಿ ಫೆ. 22 ಮತ್ತು 23ರಂದು ಆಚರಿಸಬೇಕೆಂದು ಅಕಾಡೆಮಿ ನಿರ್ಧರಿಸಿದೆ. ಫೆ.23 ಸಾಯಂಕಾಲ 4.30ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಾಹಿತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಬೆಳ್ಳಿಹಬ್ಬದ ಸಂದರ್ಭದಲ್ಲಿ 25 ಕೊಂಕಣಿ ಸಾಧಕರನ್ನು ಹಾಗೂ ಅಕಾಡೆಮಿಯ 6 ಜನ ಪೂರ್ವ ಅಧ್ಯಕ್ಷರನ್ನು ಸಮ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳನ್ನು ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಪ್ರತಿನಿಧಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ, ಆಯುರ್ವೇದ ಗಿಡಮೂಲಿಕೆಗಳ ಹಾಗೂ ದೇಶಿಯ ಗೋತಳಿಗಳ ಪ್ರದರ್ಶನಗಳನ್ನೂ ಏರ್ಪಡಿಸಲಾಗಿದೆ. ರೆಡ್‌ಕ್ರಾಸ್‌ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

– ಡಾ| ಕೆ. ಜಗದೀಶ ಪೈ

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ಧೀರೋದಾತ್ತ ಕೆದಂಬಾಡಿ ರಾಮಯ್ಯ ಗೌಡ

ಧೀರೋದಾತ್ತ ಕೆದಂಬಾಡಿ ರಾಮಯ್ಯ ಗೌಡ

ನವ ನಾಮ, ನವ ರೂಪ ಧಾರಿಣೀ ನಮೋಸ್ತುತೇ

ನವ ನಾಮ, ನವ ರೂಪ ಧಾರಿಣೀ ನಮೋಸ್ತುತೇ

ಸಮಗ್ರ ಕರ್ನಾಟಕದ ಸಾಕ್ಷಿ ಪ್ರಜ್ಞೆ ಕಯ್ಯಾರ ರ ಕಿಂಞಣ್ಣ ರೈ

ಸಮಗ್ರ ಕರ್ನಾಟಕದ ಸಾಕ್ಷಿ ಪ್ರಜ್ಞೆ ಕಯ್ಯಾರ ರ ಕಿಂಞಣ್ಣ ರೈ

ಸತ್ಯಜ್ಞಾನದ ಶಕ್ತಿಯಿಂದ ರಾರಾಜಿಸುತ್ತಿದ್ದ ಯತೀಶ್ವರ

ಸತ್ಯಜ್ಞಾನದ ಶಕ್ತಿಯಿಂದ ರಾರಾಜಿಸುತ್ತಿದ್ದ ಯತೀಶ್ವರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.