ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ

ಕಾರ್ಯಪಡೆ ಸಮಿತಿ ಸಭೆಯಲ್ಲಿ ಡಿಸಿ ಸೂಚನೆ

Team Udayavani, Jan 6, 2022, 5:50 AM IST

ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ

ಉಡುಪಿ: ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳಿನ ದಾಸ್ತಾನು ಇದೆ. ಸಾರ್ವಜನಿಕರು ಸ್ಯಾಂಡ್‌ ಆ್ಯಪ್‌ ಮೂಲಕ ಬೇಡಿಕೆಗಳನ್ನು ಸಲ್ಲಿಸಿ ಮರಳು ಪಡೆಯಬಹುದು ಎಂದು ಜಿಲ್ಲಾಧಿ
ಕಾರಿ ಕೂರ್ಮಾರಾವ್‌ ಎಂ. ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ಬುಧವಾರ ಮರಳು ವಿತರಣೆ ಕುರಿತು ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ವಿತರಿಸಲು ಜಿಲ್ಲಾ ಕಾರ್ಯಪಡೆ ಸಮಿತಿಯು ಸ್ಯಾಂಡ್‌ ಆ್ಯಪ್‌ಗ್ಳಲ್ಲಿನ ಬೇಡಿಕೆಗೆ ಅನುಗುಣವಾಗಿ ವಿತರಿಸಲು ಮುಂದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಮರಳು ಸಾಗಾಣಿಕೆ ವಾಹನ ಹಾಗೂ ದೋಣಿಗಳಲ್ಲಿ ಅಳವಡಿಸಿರುವ ಜಿಪಿಎಸ್‌ ಪರಿಶೀಲಿಸಿ, ಅದರ ಚಲನ ವಲನಗಳ ಮೇಲೆ ನಿಗಾ ವಹಿಸಬೇಕು. ನಿಯಮ ಉಲ್ಲಂಘಿಸಿದ್ದಲ್ಲಿ ಅಂತ ಹವರ ಮೇಲೆ ನಿರ್ದಾಕ್ಷಿಣ್ಯವಾಗಿ ದಂಡ ವಸೂಲಿ ಮಾಡಬೇಕು. ಮರಳು ತೆಗೆಯುವ ಧಕ್ಕೆ ಹಾಗೂ ದಾಸ್ತಾನು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಸೂಚನೆ ನೀಡಿದರು.

ಕುಂದಾಪುರ ವ್ಯಾಪ್ತಿಯಲ್ಲಿ ಜಿಪಿಎಸ್‌ ಉಲ್ಲಂಘನೆ ಮಾಡಿದ ಮರಳು ಪರವಾನಗಿದಾರರ ವಿರುದ್ಧ 16 ಪ್ರಕರಣ ದಾಖಲಿಸಿ 8 ಲಕ್ಷ ರೂ. ದಂಡ ವಿಧಿಸಲಾಗಿದೆ. ಉಡುಪಿ ಮತ್ತು ಬ್ರಹ್ಮಾವರದಲ್ಲಿ 3 ಪ್ರಕರಣ ದಾಖಲಿಸಿ 50,000 ಸಾವಿರ ರೂ. ದಂಡ ವಿಧಿಸಿ, ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿ ಮರಳು ದಾಸ್ತಾನು ಮಾಡಿದವರ ವಿರುದ್ಧ 34 ಪ್ರಕರಣ ದಾಖಲಿಸಿ 13 ಲಕ್ಷ ರೂ.ಗಳಿಗೂ ಹೆಚ್ಚು ದಂಡ ವಿಧಿಸಲಾಗಿದೆ. ವಾಹನ ಜಿಪಿಎಸ್‌ ಉಲ್ಲಂ ಸಿದ 76 ಪ್ರಕರಣ ದಾಖಲಿಸಿ 5 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದರು.

ನ. 24ರಿಂದ ಡಿ. 31ರ ವರೆಗೆ ಕಂಟ್ರೋಲ್‌ ರೂಂನಲ್ಲಿ 125 ದೂರುಗಳು ಸ್ವೀಕೃತವಾಗಿದೆ. ಅವುಗಳಲ್ಲಿ 123 ವಿಲೇವಾರಿ ಮಾಡಲಾಗಿದೆ. ಲಿಖಿತ ಅಥವಾ ದೂರವಾಣಿ ಮೂಲಕ ಬರುವ ದೂರುಗಳನ್ನು ನಿರ್ಲಕ್ಷಿಸದೇ ಅವುಗಳ ಬಗ್ಗೆ
ತನಿಖೆ ಕೈಗೊಂಡು ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಜಾಬ್ರಾ ಎಲೈಟ್‌ 4 ಆ್ಯಕ್ಟಿವ್‌ ಬಿಡುಗಡೆ; 7 ಗಂಟೆ ಬ್ಯಾಟರಿ ಲೈಫ್ ಇರುವ ಇಯರ್‌ಬಡ್‌

ಕಲ್ಲು ಗಣಿಗಾರಿಕೆ ಹಾಗೂ ಕಲ್ಲು ಪುಡಿ ಮಾಡುವ ಘಟಕಗಳಿಗೆ ಪರವಾನಗಿ ನೀಡುವ ಸಂದರ್ಭ ಸರಕಾರ ಸೂಚಿಸಿರುವ ನಿಯವåಗಳು ಸರಿಯಾಗಿ ಪಾಲನೆಯಾಗಿದೆಯೇ ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸುವುದರೊಂದಿಗೆ ಕಾನೂನಿನ ಅಡಿಯಲ್ಲಿ ಅವರಿಗೆ ಲೈಸೆನ್ಸ್‌ ನೀಡಬೇಕು. ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ. ಆದರೂ ಗಣಿಗಾರಿಕೆ ಯನ್ನು ಪುನಃ ಮಾಡುತ್ತಿರುವುದು ಕಂಡುಬರುತ್ತಿದೆ. ಅಂತಹವರ ವಿರುದ್ಧ ಕಂದಾಯ ಇಲಾಖೆ ಅಧಿಕಾರಿಗಳು ಭೂ ಕಬಳಿಕೆ ಅಧಿನಿಯಮದಡಿ ಪ್ರಕರಣ ದಾಖಲಿಸಬೇಕು ಎಂಬ ಸೂಚನೆ ನೀಡಿದರು.

ಸರಕಾರಿ ಜಾಗದಲ್ಲಿ ಸಿಗುವ ಎಲ್ಲ ರೀತಿಯ ಖನಿಜಗಳ ಬ್ಲಾಕ್‌ ಗುರುತಿಸುವುದರೊಂದಿಗೆ ಗಣಿಗಾರಿಕೆ ಕೈಗೊಳ್ಳಲು ಬ್ಲಾಕ್‌ಗಳ ಹರಾಜು ಪ್ರಕ್ರಿಯೆ ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು. ಕುಂದಾಪುರ ಡಿಎಫ್ಒ ಆಶೀಶ್‌ ರೆಡ್ಡಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಸಿಆರ್‌ಝಡ್‌ನ‌ ಪ್ರಾದೇಶಿಕ ನಿರ್ದೇಶಕ ಶ್ರೀಪತಿ, ಹಿರಿಯ ಭೂ ವಿಜ್ಞಾನಿ ಸಂದೀಪ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.