ಉಡುಪಿ ಅಕ್ರಮ ಮರಳುಗಾರಿಕೆ ಬಹುಕೋಟಿ ಹಗರಣ ತನಿಖೆಗೆ ಕಾಂಗ್ರೆಸ್ ಆಗ್ರಹ
Team Udayavani, May 27, 2020, 12:29 PM IST
ಉಡುಪಿ: ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಗೆ ನಡೆಯುತ್ತಿದ್ದು, ಬಹುಕೋಟಿ ಹಗರಣ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ ಅಮೀನ್ ಪಡುಕರೆ ಮರಳುಗಾರಿಕೆ ಟೆಂಡರ್ ಪ್ರಕ್ರಿಯೆಯಲ್ಲಿ ಗ ಕಾನೂನು ಕಟ್ಟಲೆಗಳನ್ನು ಮೀರಿ ಗುತ್ತಿಗೆ ನೀಡಲಾಗಿದೆ.
ಕೋವಿಡ್ ವೈರಸ್ ದುರ್ಲಾಭ ಮಾಡಿಕೊಂಡು ಭಾರಿ ಅಕ್ರಮಕ್ಕೆ ಅವಕಾಶ ನೀಡಲಾಗಿದೆ.ಅಕ್ರಮ ಮರಳುಗಾರಿಕೆ ಕುರಿತು ಲೋಕಯುಕ್ತಕ್ಕೂ ದೂರು ನೀಡಲಾಗಿದ್ದು.ಸೂಕ್ತರೀತಿಯಲ್ಲಿ ತನಿಖೆ ನಡೆದು ಅಕ್ರಮದ ಪೂರ್ಣ ಚಿತ್ರಣ ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.
ಅಕ್ರಮಕ್ಕೆ ಸಂಬಂಧಿಸಿ ಕೆಲ ದಾಖಲೆಗಳಿರುವ ಪೆನ್ ಡ್ರೈವ್ ಬಿಡುಗಡೆಗೊಳಿಸಿದರು. ನಗರ ಸಭೆ ಸದಸ್ಯ ರಮೇಶ್ ಕಾಂಚನ್. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ್ ಭಂಡಾರ್ ಕಾರ್.ಪ್ರಶಾಂತ ಪೂಜಾರಿ. ವಿಜಯ ಕುಮಾರ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್