ಮಳೆಗಾಲ ಸಮೀಪಿಸಿದರೂ ಮುಗಿಯದ ಮರಳು ಗೋಳು
ಕಟ್ಟಡ ನಿರ್ಮಾಣ ಕಾಮಗಾರಿ ಸಂಪೂರ್ಣ ಸ್ಥಗಿತದ ಆತಂಕ
Team Udayavani, May 28, 2020, 9:33 AM IST
ಮಂಗಳೂರು: ಇನ್ನೇನು ಮಳೆಗಾಲ ಕಾಲಿಡುತ್ತಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಕೊರತೆ ಇನ್ನೂ ನೀಗಿಲ್ಲ. ಇದರ ಜತೆ ಕಾರ್ಮಿಕರ ಕೊರತೆಯಿಂದಾಗಿ ಕಟ್ಟಡ ನಿರ್ಮಾಣ ಕ್ಷೇತ್ರ ಪೂರ್ಣ ಸ್ತಬ್ಧವಾಗುವ ಹಂತಕ್ಕೆ ತಲುಪಿದೆ.
ಸಿಆರ್ಝೆಡ್ ವಲಯದ ಮರಳುಗಾರಿಕೆಯ ಪರವಾನಿಗೆ ಮುಗಿದು ನಾಲ್ಕು ತಿಂಗಳಾದರೂ ಹೊಸ ಪರವಾನಿಗೆ ಲಭ್ಯವಾಗದ ಹಿನ್ನೆಲೆಯಲ್ಲಿ ಮರಳಿನ ಕೊರತೆ ಹೆಚ್ಚಾಗಿದೆ. ನಾನ್ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ನಡೆಯುತ್ತಿದೆಯಾದರೂ ಕಾರ್ಮಿಕರ ಕೊರತೆಯಿಂದಾಗಿ ಬೇಡಿಕೆ ಇರುವಷ್ಟು ಮರಳು ದೊರೆಯುತ್ತಿಲ್ಲ ಎಂದು ಕಟ್ಟಡ ನಿರ್ಮಾಣ ಕ್ಷೇತ್ರದವರು ದೂರಿದ್ದಾರೆ.
ಬೆಂಗಳೂರಿನಲ್ಲಿ ಬಾಕಿ
ಸಿಆರ್ಝಡ್ ವ್ಯಾಪ್ತಿಯ ಮರಳು ದಿಬ್ಬಗಳನ್ನು ಗುರುತಿಸಿ ಜಿಲ್ಲಾ ಮಟ್ಟದ ಅಗತ್ಯ ಪ್ರಕ್ರಿಯೆಗಳನ್ನು ನಡೆಸಿ ಕರ್ನಾಟಕ ಕರಾವಳಿ ವಲಯ ನಿಯಂತ್ರಣ ಪ್ರಾಧಿಕಾರಕ್ಕೆ (ಕೆಸಿಝಡ್ಎಂಎ) ಕಳುಹಿಸಿಕೊಡಲಾಗಿದೆ. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಸಿಝೆಡ್ಎಂಎಗೆ ಕಳುಹಿಸುವಾಗಲೂ ವಿಳಂಬವಾಗಿತ್ತು. ಇದೀಗ ಬೆಂಗಳೂರು ಮಟ್ಟದಲ್ಲಿ ಬಾಕಿಯಾಗಿದೆ.
13 ಬ್ಲಾಕ್ಗಳು
ಸಿಆರ್ಝಡ್ ವ್ಯಾಪ್ತಿಯಲ್ಲಿ 13 ಬ್ಲಾಕ್ಗಳನ್ನು ಗುರುತಿಸಲಾಗಿದೆ. ಕಳೆದ ಬಾರಿ 105 ಮಂದಿ ಪರವಾನಿಗೆದಾರರಿಗೆ ಅನುಮತಿ ನೀಡಲಾಗಿತ್ತು. ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ 15 ಸಾರ್ವಜನಿಕ ಮತ್ತು 6 ಸರಕಾರಿ ಬ್ಲಾಕ್ ಸೇರಿದಂತೆ ಒಟ್ಟು 21 ಬ್ಲಾಕ್ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿ ದ್ದಾರೆ. ಆದರೆ ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಮರಳುಗಾರಿಕೆ ಸಮರ್ಪಕವಾಗಿ ನಡೆಯುತ್ತಿಲ್ಲ. ನಾನ್ ಸಿಆರ್ಝಡ್ ಮರಳಿನ ದರವೂ ಹೆಚ್ಚಾಗಿದೆ. ಸಿಆರ್ಝಡ್ ಮರಳಿನಂತೆ ನಾನ್ಸಿಆರ್ಝಡ್ ಮರಳನ್ನು ಕೂಡ ಆ್ಯಪ್ ಮೂಲಕವೇ ವಿತರಿಸಬೇಕು ಎಂಬುದು ಬಿಲ್ಡರ್ಗಳ ಒತ್ತಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್