‘ಬಂಗಾರ ಸಿಗ್ತೀನೋ ತಮ್ಮಾ..’ ಎಂದಿದ್ದ ಶ್ರೀಧರರು

ಸ್ವಾಮೀಜಿ ಪಾದದ ಮೇಲೆ ಮಗಳನ್ನು ಹಾಕಿ ಬೇಡಿಕೊಂಡಿದ್ದ ಹಿರಣ್ಣಯ್ಯ ; ಶ್ರೀಗಳಿಂದ ದಿವ್ಯಾನುಗ್ರಹದ ಪಾದುಕೆ ಪಡೆದಿದ್ದರು

Team Udayavani, May 3, 2019, 6:00 AM IST

2BNP-(14)

ಸಾಗರ: ಮಾಸ್ಟರ್‌ ಹಿರಣ್ಣಯ್ಯ ನಿಧನರಾದ ಸುದ್ದಿ ಗುರುವಾರ ಪ್ರಕಟವಾಗುತ್ತಿದ್ದಂತೆ ಹಿರಿಯ ರಂಗಾಸಕ್ತರು ಅವರ ಸಾಗರದ ಒಡನಾಟದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

1959ರ ಸಮಯದಲ್ಲಿ ಸಾಗರಕ್ಕೆ ನಾಟಕ ಪ್ರದರ್ಶನಕ್ಕಾಗಿ ತಮ್ಮ ಮಿತ್ರಮಂಡಳಿಯ ಜತೆಗೆ ಕುಟುಂಬ ಸಮೇತ ಬಂದಿದ್ದ ಹಿರಣ್ಣಯ್ಯ ವರದಪುರದ ಶ್ರೀಧರ ಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಸಂದರ್ಭದ ಕಪ್ಪು ಬಿಳುಪು ಚಿತ್ರವನ್ನು ಬೆಂಗಳೂರಿನ ಶಿವಕುಮಾರ್‌ ಶ್ರೀಧರಾಶ್ರಮದ ವಾಟ್ಸ್‌ ಆ್ಯಪ್‌ ಗ್ರೂಪಿನಲ್ಲಿ ಪೋಸ್ಟ್‌ ಮಾಡಿ, ಸಂದರ್ಭ ಸಹಿತ ವಿವರಣೆ ನೀಡಿದ್ದಾರೆ.

ಸ್ವಾಮೀಜಿ ಹಿರಣ್ಣಯ್ಯ ಆಹ್ವಾನ ಪಡೆದು ಬೆಂಗಳೂರಿಗೆ ತೆರಳಿದ ಸಂದರ್ಭದಲ್ಲಿ ಅವರ ಸುಭದ್ರಾ ಪರಿಣಯ ನಾಟಕವನ್ನು ನೋಡಿದರು ಹಾಗೂ ನಾಟಕದ ನಂತರ ನಾಟಕ ವೀಕ್ಷಕರಿಗಾಗಿ ರಂಗಭೂಮಿ ಯಲ್ಲಿಯೇ 1ಗಂಟೆ ಪ್ರವಚನ ನೀಡಿದರು ಎಂಬ
ಕಥೆಯೂ ಹಲವರ ನೆನಪಿನಲ್ಲಿದೆ. ಶ್ರೀಧರ ಸ್ವಾಮಿಗಳನ್ನು ತಮ್ಮ ಮನೆಗೆ ಕರೆಸಿ ಪಾದಪೂಜೆ ಮಾಡಿ,ಅವರ ಪಾದದ ಮೇಲೆ ತಮ್ಮ ಹೆಣ್ಣು ಮಗುವನ್ನು ಹಾಕಿ “ನಮ್ಮ ಮನೆಯಲ್ಲಿ ಹೆಣ್ಣು ಮಕ್ಕಳು ಉಳಿಯುವುದಿಲ್ಲ.

ನಮ್ಮ ಮನೆಯಲ್ಲಿ ಸಾಯುವುದರ ಬದಲು ನಿಮ್ಮ ಪಾದದ ಮೇಲೆ ಸಾಯಲಿ’ ಎಂದು ಹೇಳಿದರು. ಶ್ರೀಗಳವರು ಮಗುವನ್ನೆತ್ತಿಕೊಂಡು ಹಿರಣ್ಣಯ್ಯನವರ ಪತ್ನಿಯ ಮಡಿಲಿಗೆ ಹಾಕಿ, “ಇದು ನಿಮ್ಮ ಮನೆತನದ ಅದೃಷ್ಟದ ಕೂಸು. ಇನ್ನೊಂದು ಹೆಣ್ಣು ಮಗು ಆಗುತ್ತದೆ,ಘಾಟಿ ಸುಬ್ರಹ್ಮಣ್ಯಕ್ಕೆ ಹೋಗಿ ನಾಗಪ್ರತಿಷ್ಠೆ ಮಾಡಿಸಿಕೊಂಡು ಬನ್ನಿ ಸಾಕು’ ಎಂದು ಹೇಳಿದರು.

ಶ್ರೀಗಳವರು ಅಲ್ಲಿಂದ ತೆರಳುವಾಗ ಹಿರಣ್ಣಯ್ಯನವರು ಶ್ರೀಗಳಲ್ಲಿ ಪೂಜೆಗಾಗಿ ಒಂದು ಚರಣಪಾದುಕೆ ನೀಡುವಂತೆ ಕೇಳಿದಾಗ ಶ್ರೀಗಳು ನಕ್ಕು “ಬಂಗಾರದ ಪಾದುಕೆ ಮಾಡಿಸಿಕೊಂಡು ಬಾ, ಅನುಗ್ರಹಿಸಿ ಕೊಡುತ್ತೇನೆ’ ಅಂದರು. “ಬಂಗಾರದ ಪಾದುಕೆ, ನನ್ನಿಂದಾಗುತ್ತದೆಯೆ? ನನ್ನಲ್ಲೇನಿದೆ’ ಎಂದು ಹಿರಣ್ಣಯ್ಯನವರು ಸುಮ್ಮನಾದರು. ಮಾರನೇ ದಿನ “ದೇವದಾಸಿ’ ನಾಟಕಕ್ಕೆ ಎಂದಿಗಿಂತ ಹೆಚ್ಚು ಜನ ಬಂದಿದ್ದರು. ಶ್ರೀಗಳ ಪಾದಧೂಳಿನ ಮಹಿಮೆಯೇ ಇರಬಹುದೆಂದುಕೊಂಡರು ಹಿರಣ್ಣಯ್ಯನವರು.

ಅಂದಿನ ನಾಟಕ ನೋಡಿದ ದಾವಣಗೆರೆಯ ವ್ಯಕ್ತಿಯೊಬ್ಬರು ಬಹುವಾಗಿ ಮೆಚ್ಚಿ, ದಾವಣಗೆರೆಗೆ ಬಂದರೆ ಮೊದಲ ಹತ್ತು ನಾಟಕಗಳನ್ನು ತನಗೇ ಕಂಟ್ರಾಕ್ಟ್ ಕೊಡಬೇಕೆಂದು ಹೇಳಿ ಮುಂಗಡವಾಗಿ ತಮ್ಮ ಕೈಯಲ್ಲಿದ್ದ ಚಿನ್ನದ ಉಂಗುರವನ್ನು ಹಿರಣ್ಣ ಯ್ಯನವರ ಬೆರಳಿಗೆ ಹಾಕಿಬಿಟ್ಟರು!. ಆ ಉಂಗುರ ದಿಂದಲೇ ಪಾದುಕೆ ತಯಾರಿಸಿ ವರದಳ್ಳಿಗೆ ಹೋಗಿ ಗುರುಗಳ ಮುಂದಿಟ್ಟು ನಮಸ್ಕರಿಸಿದಾಗ ಗುರುಗಳು “ಬಂಗಾರ ಸಿಗ್ತೀನೋ….ತಮ್ಮಾ..’ ಎಂದು ನಕ್ಕು 14 ದಿನಗಳ ನಂತರ ಬರುವಂತೆ ಹೇಳಿದರು. 14 ದಿನಗಳ ನಂತರ ಹೋದಾಗ ತಮ್ಮ ದಿವ್ಯಾನುಗ್ರಹ ತುಂಬಿದ ಪಾದುಕೆ ನೀಡಿ ಹರಸಿದರು. ಇಂದಿಗೂ ಅದೇ ನನ್ನ ಸರ್ವಸ್ವ ಎನ್ನುತ್ತಿದ್ದರು ಮಾಸ್ಟರ್‌ ಹಿರಣ್ಣಯ್ಯ. ಈ ಕುರಿತು ಗುರುಪಾದ ಸಚ್ಚಿದಾನಂದ ಸ್ವಾಮಿ ರಚಿಸಿದ ಸದ್ಗುರು ಶ್ರೀಧರ ಚರಿತ್ರೆಯಲ್ಲಿ ಸವಿವರವಾದ ಚಿತ್ರಣವಿದೆ.

ರವೀಂದ್ರ ಕಲಾಕ್ಷೇತ್ರಕ್ಕೆ ಬೇಡ
ಹಿರಣ್ಣಯ್ಯ ಅವರ ನಿಧನ ಸುದ್ದಿ ತಿಳಿದಾಗ ಅವರ ಸ್ವಗೃಹಕ್ಕೆ ಧಾವಿಸಿದ ಹಿರಿಯ ಕಲಾವಿದರು ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಕುರಿತು ಕುಟುಂಬ ಸದಸ್ಯರ ಬಳಿ ಪ್ರಸ್ತಾಪ ಮಾಡಿದ್ದಾರೆ. ಅದನ್ನು ನಿರಾಕರಿಸಿದ ಕುಟುಂಬ ಸದಸ್ಯರು ತಂದೆ ಆಸೆಯಂತೆಯೇ ಸ್ವಗೃಹದಲ್ಲಿ ಸರಳವಾಗಿ ಅಂತಿಮ ನಮನ ಸಲ್ಲಿಸುವುದಾಗಿ ತಿಳಿಸಿದರು. “ನಾನು ಮೃತಪಟ್ಟಾಗ ನನ್ನ ಪಾರ್ಥಿವ ಶರೀರವನ್ನು ಮನೆಯ ಬಳಿಯೇ ಅಂತಿಮ ದರ್ಶನಕ್ಕೆ ಇಡಬೇಕು ಹಾಗೂ ಸರಳವಾಗಿ ಅಂತಿಮ ವಿಧಿವಿಧಾನ ಮುಗಿಸಬೇಕು’ ಎಂದು ಮಾಸ್ಟರ್‌ ಹಿರಣ್ಣಯ್ಯ ಅವರು ತಮ್ಮ ಕುಟುಂಬ ವರ್ಗದ ಬಳಿ ಹೇಳಿಕೊಂಡಿದ್ದರಂತೆ. ಹೀಗಾಗಿ, ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ಕೊಂಡೊಯ್ಯಲಿಲ್ಲ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.