ಡಿಸೆಂಬರ್‌ನಿಂದ ಮರಳುಗಾರಿಕೆ ಸ್ಥಗಿತ; ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ


Team Udayavani, Jul 6, 2020, 6:15 AM IST

ಡಿಸೆಂಬರ್‌ನಿಂದ ಮರಳುಗಾರಿಕೆ ಸ್ಥಗಿತ; ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ

ಮಂಗಳೂರು: ಸಿಆರ್‌ಝಡ್‌ ವಲಯದಲ್ಲಿ ಗುರುತಿಸಿರುವ ಮರಳು ದಿಬ್ಬಗಳಿಗೆ ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣೆ ಪ್ರಾಧಿಕಾರ (ಕೆಸಿಝಡ್‌ಎಂಎ)ದಿಂದ ಇನ್ನೂ ಅನುಮೋದನೆ ದೊರೆಯದ ಕಾರಣ ಮುಂದಿನ ಆಗಸ್ಟ್‌ ವೇಳೆಗೆ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳುವುದು ಅನುಮಾನ. ಪರಿಣಾಮವಾಗಿ ಜಿಲ್ಲೆಯಲ್ಲಿ ಮರಳು ಸಮಸ್ಯೆಯ ಉದ್ಭವಿಸುವ ಆತಂಕ ಎದುರಾಗಿದೆ.

ಹಿಂದಿನ ಸಾಲಿನಲ್ಲಿ ನೀಡಿದ್ದ ಅನುಮತಿಯ ಅವಧಿ ಕಳೆದ ಡಿಸೆಂಬರ್‌ಗೆ ಮುಕ್ತಾಯ ಗೊಂಡಿದ್ದು, 6 ತಿಂಗಳು ಗಳಿಂದ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಸ್ಥಗಿತಗೊಂಡಿದೆ.

ಸಿಆರ್‌ಝಡ್‌ನ‌ಲ್ಲಿ ಮರಳುಗಾರಿಕೆ ಸ್ಥಗಿತಗೊಂಡಿದ್ದರೂ ನಾನ್‌ಸಿಆರ್‌ಝಡ್‌ ಮತ್ತು ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನಡೆಸಿದ ಡ್ರೆಜ್ಜಿಂಗ್‌ನಿಂದ ಲಭಿಸಿದ ಮರಳು ನಿರ್ಮಾಣ ಕಾಮಗಾರಿಗಳಿಗೆ ಆಸರೆಯಾಗಿತ್ತು. ಡ್ರೆಜ್ಜಿಂಗ್‌ ಮರಳು ಮಾರ್ಚ್‌ನಲ್ಲಿ ಬರಿದಾಗಿದ್ದು, ನಾನ್‌ ಸಿಆರ್‌ಝಡ್‌ನಿಂದ ಮರಳು ಪೂರೈಕೆಯಾಗುತ್ತಿತ್ತು. ಜೂನ್‌ನಿಂದ 3 ತಿಂಗಳು ಮರಳುಗಾರಿಕೆಗೆ ನಿಷೇಧವಿದ್ದು, ಇಲ್ಲೂ ಮರಳುಗಾರಿಕೆ ಸ್ಥಗಿತಗೊಂಡಿದೆ. ಪ್ರಸ್ತುತ ಸಂಗ್ರಹದಿಂದ ಮರಳು ಪೂರೈಕೆಯಾಗುತ್ತಿದೆ.

ನಡೆಯದ ಕೆಸಿಝಡ್‌ಎಂಎ ಸಭೆ
ಬೇಥಮೆಟ್ರಿಕ್ಸ್‌ ಸರ್ವೆ ಮೂಲಕ ನೇತ್ರಾವತಿ, ಫಲ್ಗುಣಿ ಮತ್ತು ಶಾಂಭವಿ ನದಿಗಳಲ್ಲಿ ಹೊಸದಾಗಿ ಗುರುತಿಸಿರುವ ಮರಳು ದಿಬ್ಬಗಳ ಬಗ್ಗೆ ಎನ್‌ಐಟಿಕೆ ಸಲ್ಲಿಸಿರುವ ತಾಂತ್ರಿಕ ವರದಿಯನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಪರಿಶೀಲಿಸಿ ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣೆ ಪ್ರಾಧಿಕಾರಕ್ಕೆ ಕಳುಹಿಸಿದೆ.

ಕೋವಿಡ್‌ದಿಂದಾಗಿ ಕೆಸಿಝಡ್‌ಎಂಎ ಸಭೆ ಈ ವರೆಗೆ ನಡೆದಿಲ್ಲ. ಅಲ್ಲಿ ಅನುಮೋದನೆಗೊಂಡ ಬಳಿಕ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಅಂತಿಮವಾಗಿ ಪರವಾನಿಗೆಗಳನ್ನು ನೀಡುತ್ತದೆ. ಇದಕ್ಕೆ ಸುಮಾರು 1 ತಿಂಗಳ ಕಾಲಾವಕಾಶ ಬೇಕು. ಪ್ರಸ್ತುತ ಇರುವ ಮರಳುಗಾರಿಕೆ ನಿಷೇಧ ಆ.15ರ ವೇಳೆಗೆ ಕೊನೆಗೊಳ್ಳಲಿದೆ. ಅದರೊಳಗೆ ಈ ಎಲ್ಲ ಪ್ರಕ್ರಿಯೆ ನಡೆಯುವುದು ಅನುಮಾನ. ಜಿಲ್ಲೆಯಲ್ಲಿ ಪ್ರಸ್ತುತ ನಿರ್ಮಾಣ ಚಟುವಟಿಕೆ ಚೇತರಿಕೆ ಕಂಡಿದ್ದು ಮರಳಿಗೆ ಬೇಡಿಕೆ ಹೆಚ್ಚುತ್ತಿದೆ. ಆಗಸ್ಟ್‌ ವೇಳೆಗೆ ಸಿಆರ್‌ಝಡ್‌ನ‌ಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಮರಳು ಸಮಸ್ಯೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆಗಳಿವೆ.

ದಿಬ್ಬ ಕಡಿಮೆ, ಪ್ರಮಾಣ ಸಮಾನ
ನೇತ್ರಾವತಿ, ಫಲ್ಗುಣಿ ಮತ್ತು ಶಾಂಭವಿ ನದಿಯ ಸಿಆರ್‌ಝಡ್‌ ವಲಯದಲ್ಲಿ ನಡೆಸಿರುವ ಬೇಥಮೆಟ್ರಿಕ್‌ ಸರ್ವೆಯಲ್ಲಿ ಈ ಬಾರಿ ಮರಳು ದಿಬ್ಬಗಳ ಸಂಖ್ಯೆ ಕಳೆದ ಬಾರಿಗಿಂತ ಕಡಿಮೆ ಇದೆ. ಆದರೆ ಮರಳು ಕಳೆದ ಬಾರಿಯಷ್ಟೇ ಇದೆ ಎನ್ನಲಾಗಿದೆ.

ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಗುರುತಿಸಿರುವ ಮರಳು ದಿಬ್ಬಗಳ ವರದಿಯನ್ನು ಅನುಮೋದನೆಗಾಗಿ ಬೆಂಗಳೂರಿನಲ್ಲಿರುವ ಕೆಸಿಝಡ್‌ಎಂಎ ಕಳುಹಿಸಲಾಗಿದೆ. ಪ್ರಸ್ತುತ ಮರಳುಗಾರಿಕೆ ನಿಷೇಧವಿದೆ. ಪ್ರಾಧಿಕಾರದಿಂದ ಅನುಮತಿ ದೊರೆತ ಬಳಿಕ ಪರವಾನಿಗೆ ಸಂಬಂಧಿತ ಪ್ರಕ್ರಿಯೆ ನಡೆಯಲಿದೆ.
– ಸಿಂಧೂ ಬಿ. ರೂಪೇಶ್‌, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.