ಮಂಗಳೂರು: “ಸಂದೇಶ ಪ್ರಶಸ್ತಿ’ ಪ್ರದಾನ


Team Udayavani, Feb 8, 2023, 12:37 AM IST

ಮಂಗಳೂರು: “ಸಂದೇಶ ಪ್ರಶಸ್ತಿ’ ಪ್ರದಾನ

ಮಂಗಳೂರು: ಸಾಧಕರು ಸಮಾಜಕ್ಕೆ ನೀಡಿದ ಕೊಡುಗೆ ಹಾಗೂ ಅವರ ಜೀವನಗಾಥೆ ಯುವ ಪೀಳಿಗೆಗೆ ದಾರಿದೀಪವಾಗಬೇಕು. ಈ ಮೂಲಕ ಸಾಧಕರ ಸಾಧನೆಯ ಹೆಜ್ಜೆಗಳು ಬದುಕಿಗೆ ಕೈಗನ್ನಡಿಯಾಗುವಂತಾಗಲಿ ಎಂದು ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಹೇಳಿದರು.

ಕರ್ನಾಟಕ ಪ್ರಾಂತೀಯ ಕೆಥೋಲಿಕ್‌ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ-ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮಂಗಳವಾರ ನಂತೂರು ಸಂದೇಶ ಪ್ರತಿಷ್ಠಾನದಲ್ಲಿ ನಡೆದ “ಸಂದೇಶ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿರುವ ಜನರ ಉದ್ಧಾರಕ್ಕಾಗಿ ಹಾಗೂ ಕಷ್ಟದಲ್ಲಿರುವ ಶೋಷಿತರ ಪರವಾಗಿ ತಮ್ಮನ್ನು ತೊಡಗಿಸಿಕೊಂಡು ಬದುಕಿದವರಿಗೆ ಸಂದೇಶ ಪ್ರಶಸ್ತಿ ಸಿಗುತ್ತಿರುವುದು ಸಂತಸದ ಸಂಗತಿ. ಪ್ರಶಸ್ತಿ ಪಡೆದವರ ವಿಚಾರಧಾರೆಗಳು ಬದುಕಿಗೆ ಹೊಸ ಭರವಸೆ ಮೂಡಿಸಲಿವೆ ಎಂದರು.

ಅರಿವಿನ ಕೊರತೆ ಸಮಸ್ಯೆಗೆ ಕಾರಣ
ಮುಖ್ಯ ಅತಿಥಿಯಾಗಿದ್ದ ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಸಮಾಜ, ಧರ್ಮ ಸೇರಿದಂತೆ ಸೇವಾ ಮನೋಭಾವ ಪರಿಕಲ್ಪನೆಯೇ ಈಗ ಬದಲಾಗುತ್ತಿದೆ. ಧರ್ಮ ಮತ್ತು ಮತಕ್ಕೆ ಇರುವ ವ್ಯತ್ಯಾಸವೇ ಗೊತ್ತಿಲ್ಲದೇ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಧರ್ಮ ಮತ್ತು ಮತಕ್ಕೆ ಇರುವ ಪರಿಕಲ್ಪನೆಗಳನ್ನು ಸರಿಯಾಗಿ ಅರ್ಥಮಾಡಿಕೊಂಡರೆ ಸಮಾಜ ಉತ್ತಮವಾಗಿ ನಡೆಯುತ್ತದೆ ಎಂದರು.

ಸಂದೇಶ ಸಂಸ್ಥೆಯು ಕಳೆದ 32 ವರ್ಷಗಳಿಂದ ಸಾಮಾಜಿಕ ಸಾಮರಸ್ಯ, ಮೌಲ್ಯಗಳಿಗೆ ಆದ್ಯತೆ ನೀಡುತ್ತ ಸಾಧಕ ರಿಗೆ ಸಮ್ಮಾನದ ಗೌರವ ಸಲ್ಲಿರುವುದು ಶ್ಲಾಘನೀಯ. ಈ ಮೂಲಕ ಸುಂದರ ಸಮಾಜ ಕಟ್ಟುವ ಕೆಲಸ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ಪ್ರತಿಷ್ಠಾನದ ಅಧ್ಯಕ್ಷ ಬಳ್ಳಾರಿ ಧರ್ಮಪ್ರಾಂತದ ಬಿಷಪ್‌ ರೈ| ರೆ| ಡಾ| ಹೆನ್ರಿ ಡಿ’ಸೋಜಾ ಅಧ್ಯಕ್ಷತೆ ವಹಿಸಿ ಶುಭಾಶಯ ಸಲ್ಲಿಸಿದರು.

ಸಂದೇಶ ಪ್ರತಿಷ್ಠಾನದ ನಿರ್ದೇಶಕ ವಂ| ಸುದೀಪ್‌ ಪೌಲ್‌, ಟ್ರಸ್ಟಿಗಳಾದ ರೋಯ್‌ ಕ್ಯಾಸ್ತಲಿನೊ ಮತ್ತು ವಂ| ಐವನ್‌ ಪಿಂಟೊ, ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಡಾ| ವಲೇರಿಯನ್‌ ರಾಡ್ರಿಗಸ್‌ ಉಪಸ್ಥಿತರಿದ್ದರು. ಐರಿನ್‌ ರೆಬೆಲ್ಲೋ ನಿರೂಪಿಸಿದರು.

ಸಾಧಕರಿಗೆ ಸಂದೇಶ ಪ್ರಶಸ್ತಿ ಪ್ರದಾನ
ಸಂದೇಶ ಸಾಹಿತ್ಯ ಪ್ರಶಸ್ತಿಯ ಪೈಕಿ ಕನ್ನಡದಲ್ಲಿ ರಾಘವೇಂದ್ರ ಪಾಟೀಲ್‌, ಕೊಂಕಣಿಯಲ್ಲಿ ಆ್ಯಂಡ್ರೂ ಎಲ್‌. ಡಿ’ಕುನ್ಹಾ ಮತ್ತು ತುಳು ವಿಭಾಗದ ಪ್ರಶಸ್ತಿಯನ್ನು ಡಾ| ಚಿನ್ನಪ್ಪ ಗೌಡ ಅವರಿಗೆ ಪ್ರದಾನಿಸಲಾಯಿತು. ಸಂದೇಶ ಮಾಧ್ಯಮ ಪ್ರಶಸ್ತಿಯನ್ನು ಶಿವಾಜಿ ಗಣೇಶನ್‌, ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿಯನ್ನು ಜೋಯ್ಸ ಒಝಾರಿಯೋ, ಸಂದೇಶ ಕಲಾ ಪ್ರಶಸ್ತಿಯನ್ನು ಎಂ.ಎಸ್‌.ಮೂರ್ತಿ, ಸಂದೇಶ ಶಿಕ್ಷಣ ಪ್ರಶಸ್ತಿಯನ್ನು ಕೋಟಿ ಗಾನಹಳ್ಳಿ ರಾಮಯ್ಯ ಅವರಿಗೆ ನೀಡಲಾಯಿತು. ಪ್ರೇರಣಾ ಟ್ರಸ್ಟ್‌ಗೆ ಸಂದೇಶ ವಿಶೇಷ ಪ್ರಶಸ್ತಿ ಹಾಗೂ ಡಾ| ಸಬಿಹಾ ಭೂಮಿಗೌಡ ಅವರಿಗೆ ಸಂದೇಶ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನಿಸಲಾಯಿತು.

ಟಾಪ್ ನ್ಯೂಸ್

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ

1-dsfsdfsdf

ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

tdy-10

29 ವರ್ಷಗಳಿಂದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆಂಜನೇಯ ವಿಗ್ರಹ ಬಿಡುಗಡೆ: ಅದ್ಧೂರಿ ಮೆರವಣಿಗೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mangaluru-college

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಎನ್ ವಿಷನ್ – 2023 ಉದ್ಘಾಟನಾ ಸಮಾರಂಭ

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು

ನಿಷೇಧಿತ ಇ- ಸಿಗರೇಟ್‌ ಹತ್ತಿಕ್ಕುವವರಿಲ್ಲ ! ಗ್ರಾಮೀಣ ಪ್ರದೇಶದಲ್ಲೂ ಮಾರಾಟ ಅವ್ಯಾಹತ!

ನಿಷೇಧಿತ ಇ- ಸಿಗರೇಟ್‌ ಹತ್ತಿಕ್ಕುವವರಿಲ್ಲ ! ಗ್ರಾಮೀಣ ಪ್ರದೇಶದಲ್ಲೂ ಮಾರಾಟ ಅವ್ಯಾಹತ!

ಬಿಎಡ್‌, ಎಂಎ ಪದವೀಧರರಾದರೂ ಮಾಸಿಕ ವೇತನ 8,500 ರೂ.!

ಬಿಎಡ್‌, ಎಂಎ ಪದವೀಧರರಾದರೂ ಮಾಸಿಕ ವೇತನ 8,500 ರೂ.!

ಕರಾವಳಿಗೆ ಜಿ20 ಸಭೆ ಆತಿಥ್ಯದ ಕನಸು!

ಕರಾವಳಿಗೆ ಜಿ20 ಸಭೆ ಆತಿಥ್ಯದ ಕನಸು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-17

ಬೆಂಗಳೂರು ಗ್ರಾಮಾಂತರ: ಕಮಲ ಅಭ್ಯರ್ಥಿಗಳ ಆಯ್ಕೆ ಕುತೂಹಲ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ

1-dsfsdfsdf

ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.