ಸಂಗಬೆಟ್ಟು: ಕಟ್ಟಡ ಕಾಮಗಾರಿಯ ವೇಳೆ ಲಿಂಟೆಲ್ ಕಲ್ಲು ಬಿದ್ದು ಕಾರ್ಮಿಕ ಸಾವು
Team Udayavani, Oct 7, 2020, 1:14 PM IST
ಪುಂಜಾಲಕಟ್ಟೆ: ಕಟ್ಟಡ ಕಾಮಗಾರಿಯ ವೇಳೆ ಕಾರ್ಮಿಕ ನೋರ್ವನ ತಲೆಯ ಮೇಲೆ ಕಾಂಕ್ರೀಟಿಕರಣದ ಲಿಂಟಲ್ ಕಲ್ಲು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಸಂಗಬೆಟ್ಟುವಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಸಿದ್ದಕಟ್ಟೆಯ ಮಂಚಕಲ್ಲು ನಿವಾಸಿ ಸೇಸಪ್ಪ ಗೌಡ ಅವರ ಪುತ್ರ ರಮಾನಂದ ಗೌಡ ( 30) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿಯಾಗಿರುವ ಇವರು ಸೇಸಪ್ಪಗೌಡರ ಇಬ್ಬರ ಪುತ್ರರಲ್ಲಿ ಹಿರಿಯವನಾಗಿದ್ದು, ಅವಿವಾಹಿತರಾಗಿದ್ದಲ್ಲದೆ ಮನೆಗೂ ಆಧಾರವಾಗಿದ್ದರು.
ಸಿದ್ದಕಟ್ಟೆ ಸಮೀಪದ ಸಂಗಬೆಟ್ಟು ಎಂಬಲ್ಲಿ ನೂತನ ಮನೆ ನಿರ್ಮಾಣದ ಕಾಮಗಾರಿಯಲ್ಲಿ ನಿರತರಾಗಿದ್ದಾಗ ಆಕಸ್ಮಿಕವಾಗಿ ಮೇಲ್ಬಾಗದ ಲಿಂಟಲ್ ಕಲ್ಲು ಅಡಿಭಾಗದಲ್ಲಿದ್ದ ರಮಾನಂದ ಅವರ ತಲೆಯ ಮೇಲೆ ಬಿದ್ದಿದ್ದು,ಪರಿಣಾಮ ಗಂಭೀರಸ್ವರೂಪದ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೂವರು ಕಾರ್ಮಿಕರು ಈ ಮನೆ ನಿರ್ಮಾಣ ದಲ್ಲಿ ಕೆಲಸದಲ್ಲಿ ನಿರತರಾಗಿದ್ದರೆನ್ನಲಾಗಿದೆ.
ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್.ಐ. ಪ್ರಸನ್ನ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ