ಸಂಕ್ರಾಂತಿ ಹಬ್ಬಕ್ಕೆ ಕೋವಿಡ್ ಕರಿನೆರಳು :ವೈಕುಂಠ ಏಕಾದಶಿಗೂ ನಿರ್ಬಂಧಿಸಿ ಡೀಸಿ ಆದೇಶ


Team Udayavani, Jan 13, 2022, 7:40 PM IST

ಸಂಕ್ರಾಂತಿ ಹಬ್ಬಕ್ಕೆ ಕೋವಿಡ್ ಕರಿನೆರಳು : ವೈಕುಂಠ ಏಕಾದಶಿಗೂ ನಿರ್ಬಂಧಿಸಿ ಡೀಸಿ ಆದೇಶ

ಮಂಡ್ಯ: ವರ್ಷದ ಮೊದಲ ಹಬ್ಬವಾಗಿರುವ ಸಂಕ್ರಾಂತಿ ಹಬ್ಬಕ್ಕೆ ಕೊರೊನಾ ಕರಿನೆರಳು ಬಿದ್ದಿದ್ದು, ಸಂಕ್ರಾಂತಿ ಸಂಭ್ರಮದಲ್ಲಿ ದನಗಳ ಕಿಚಾಯಿಸಲು ಸಿದ್ಧತೆ ಮಾಡಿ ಕೊಂಡಿದ್ದ ರೈತರು, ಯುವಕರಿಗೆ ನಿರಾಸೆ ತಂದಿದೆ. ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ತಂದಿದೆ. ಇದರ ಜತೆಗೆ ರೂಪಾಂತರಿ ತಳಿ ಓಮಿಕ್ರಾನ್‌ ಭೀತಿಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಭೀತಿಯಿಂದ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕೋವಿಡ್‌ ಪರೀಕ್ಷೆಗೆ ಮುಗಿ ಬೀಳುತ್ತಿದ್ದಾರೆ. ಕೋವಿಡ್‌ ಪರೀಕ್ಷಾ ಕೇಂದ್ರಗಳಲ್ಲಿ
ದಿನನಿತ್ಯ ಸರತಿ ಸಾಲುಗಳ ದೃಶ್ಯ ಕಂಡು ಬರುತ್ತಿದೆ.

ಸಂಕ್ರಾಂತಿಗೆ ಸಿದ್ಧತೆ: ಶನಿವಾರ ಮಕರ ಸಂಕ್ರಾಂತಿ ಹಬ್ಬ ಇರುವುದರಿಂದ ಅಂದೇ ವಾರಾಂತ್ಯ ಕರ್ಫ್ಯೂ ಕೂಡ ಜಾರಿಯಲ್ಲಿದೆ. ಇದು ಹಬ್ಬದ ಮೇಲೆ ಪರಿಣಾಮ ಬೀರಲಿದೆ. ಈಗಾಗಲೇ ಜಿಲ್ಲೆಯಾದ್ಯಂತ ಮಕರ ಸಂಕ್ರಾಂತಿ ಹಬ್ಬಕ್ಕೆ ತಯಾರಿ ನಡೆದಿದೆ. ಮಂಡ್ಯ ನಗರ ಸೇರಿದಂತೆ ಏಳು ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಭಾಗದಲ್ಲೂ ದನಗಳ ಕಿಚಾಯಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಿರಾಸೆ: ಮಂಡ್ಯ ನಗರದ ಹೊಸಹಳ್ಳಿ, ಕಲ್ಲಹಳ್ಳಿ, ಹೌಸಿಂಗ್‌ ಬೋರ್ಡ್‌, ಪೇಟೆಬೀದಿ ಸೇರಿದಂತೆ ನಗರದ ಪ್ರಮುಖ ಬಡಾವಣೆಗಳಲ್ಲಿ ಯುವಕರು ಈಗಾಗಲೇ ಹೋರಿ, ದನಗಳನ್ನು ಕರೆತಂದು ಸಂಕ್ರಾಂತಿ ಹಬ್ಬಕ್ಕೆ ಕಿಚ್ಚಾಯಿಸಲು ಸಿದ್ಧತೆ ನಡೆಸಿದ್ದಾರೆ. ಪ್ರತೀ ವರ್ಷ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ದೊಡ್ಡಮಟ್ಟದಲ್ಲಿ ದನ ಕಿಚಾಯಿಸುವ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ನಗರದ ಎಲ್ಲ ಭಾಗಗಳಿಂದಲೂ ಜಾನುವಾರುಗಳು ಬಂದು ಸೇರುತ್ತಿದ್ದವು. ಆದರೆ ಈ ಬಾರಿ ಜಿಲ್ಲಾಧಿಕಾರಿ ಆದೇಶದಿಂದ ನಿರಾಸೆ ತಂದಿದೆ ಎಂದು ಕೆಲ ಯುವಕರು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಆದೇಶ: ಮಕರ ಸಂಕ್ರಾಂತಿ ಹಾಗೂ ವೈಕುಂಠ ಏಕಾದಶಿ ದಿನಗಳಂದು ಗುಂಪು ಸೇರಿ ಯಾವುದೇ ಧಾರ್ಮಿಕ ಆಚರಣೆ, ಸಂಭ್ರಮಾಚರಣೆ ಮಾಡದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಆದೇಶ ನೀಡಿದ್ದಾರೆ. ಈಗಾಗಲೇ ಜ.19ರವರೆಗೆ ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಗುಂಪು ಸೇರಿ ನಡೆಸುವ ಮದುವೆ, ನಿಶ್ಚಿತಾರ್ಥ,
ಬೀಗರ ಔತಣಕೂಟ, ಅಂತ್ಯಸಂಸ್ಕಾರ, ತಿಥಿ, ಶ್ರಾದ್ಧ, ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳಿಗೆ ಜನರ ಸೀಮಿತಗೊಳಿಸಲಾಗಿದೆ.

ವಿಶೇಷ ದಿನಗಳು, ಧಾರ್ಮಿಕ ಆಚರಣೆಗಳು, ರಾಜಕೀಯ ಸಭೆ, ಸಮಾರಂಭ, ರ್ಯಾಲಿ, ಜಾತ್ರೆಗಳು, ಉತ್ಸವಗಳು, ದೇವಾಲಯಕ್ಕೆ ಭಕ್ತಾ ದಿಗಳ ಪ್ರವೇಶ, ಧರಣಿ, ಮುಷ್ಕರಗಳನ್ನು ನಿರ್ಬಂಧಿ ಸಲಾಗಿದೆ. ಅದರಂತೆ ಜ.13ರ ವೈಕುಂಠ ಏಕಾದಶಿ ಹಾಗೂ ಜ.15ರ ಮಕರ ಸಂಕ್ರಾಂತಿ ಹಬ್ಬವನ್ನು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿ ರುವುದರಿಂದ ದನ ಕಿಚಾಯಿಸುವುದು, ಮನೆ ಮನೆಗೆ
ತೆರಳಿ ಗುಂಪು ಗುಂಪಾಗಿ ಹಬ್ಬ ಆಚರಿಸುವುದನ್ನು ನಿರ್ಬಂಧಿ ಸುವುದು ಸೂಕ್ತ ಎಂದು ನಿರ್ಧರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.