ಲೋಕಾಯುಕ್ತ ವಿಶೇಷ ಕೋರ್ಟ್ಗೆ ಹಾಜರಾದ ಶಶಿಕಲಾ ನಟರಾಜನ್
Team Udayavani, Mar 12, 2022, 5:45 AM IST
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಪರ ಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಐಷಾ ರಾಮಿ ಜೀವನಕ್ಕೆ ಅವಕಾಶ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ| ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ನಟರಾಜನ್ ಹಾಗೂ ಆಕೆಯ ಸಂಬಂಧಿ ಇಳವರಸಿ ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ತನಿಖೆ ನಡೆಸಿದ ಎಸಿಬಿ ಅಧಿಕಾರಿ ಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ 6 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು. ಆರೋಪಿ ಗಳಾದ ಶಶಿಕಲಾ, ಇಳವರಸಿ, ಜೈಲು ಅಧಿಕಾರಿಗಳಾದ ಗಜರಾಜು, ಸುರೇಶ್ ಶುಕ್ರವಾರ ಲೋಕಾಯುಕ್ತ ವಿಶೇಷ ಕೋರ್ಟಿಗೆ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಜಾಮೀನು ಸಿಕ್ಕಿದ್ದು, ಎ. 16ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶಿಸಿದೆ.