ಡ್ರಗ್ ಜಾಲದ ತನಿಖೆ ನಡೆಯಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಜಾರಕಿಹೊಳಿ ಆಗ್ರಹ
Team Udayavani, Sep 12, 2020, 6:54 PM IST
ಧಾರವಾಡ: ಡ್ರಗ್ ಜಾಲದ ಕುರಿತು ಇಡೀ ರಾಜ್ಯಾದ್ಯಂತ ತನಿಖೆ ಆಗಬೇಕು. ಅಲ್ಲದೆ, ಪ್ರಕರಣ ತನಿಖೆ ತೀವ್ರ ಗತಿಯಲ್ಲಿ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಗ್ರಹಿಸಿದರು.
ಅವರು ಶನಿವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಪ್ರತಿಕ್ರಿಯೆ ನೀಡಿದರು.
ಡ್ರಗ್ಸ ಜಾಲದ ಕುರಿತು ತನಿಖೆ ಬೇಗ ಬೇಗ ಮಾಡಬೇಕಿತ್ತು. ಆದರೆ, ಕೆಲವು ಕಡೆ ಒಳ್ಳೆಯ ರೀತಿಯಿಂದ ತನಿಖೆ ನಡೆದಿದೆ. ಕೆಲವಷ್ಟು ಜಿಲ್ಲೆಗಳಲ್ಲಿ ವಿಳಂವವಾಗುತ್ತಿದೆ. ಇನ್ನೂ ಸಮಯ ಮೀರಿಲ್ಲ ಎಂದ ಅವರು, ಎಲ್ಲರ ವಿರುದ್ದ ಕಠಿಣ ಕ್ರಮ ಆಗಬೇಕು ಎಂದರು.
ಇದೇ ವೇಳೆ ಎಐಸಿಸಿ ಕಾರ್ಯಕಾರಿ ಸಮಿತಿ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸತೀಶ ಜಾರಕಿಹೊಳಿ ಅವರು, ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡುವ ಹೊಸಬರ ಅವಶ್ಯಕತೆ ಇದೆ ಎಂದರು.
ಈಗಾಗಲೇ ಬಹಳ ಸೇವೆ ಮಾಡಿದ ಹಳಬರು ಇದ್ದರು. ಸುಮಾರು ಐವತ್ತು ಅರವತ್ತು ವರ್ಷದಿಂದ ಇದ್ದವರಿದ್ದರು. ಆದರೂ ಅವರನ್ನೆಲ್ಲ ಕೈ ಬಿಟ್ಟಿಲ್ಲ ಎಂದರು.
ಬೇರೆ ಬೇರೆ ಪೋಸ್ಟ್ ಗಳು, ಕಮೀಟಿಗಳಿವೆ. ಅವರನ್ನು ಉಪಯೋಗ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕ ಭಾಗದ ಸರಕಾರಿ ಕಚೇರಿಗಳ ಸ್ಥಳಾಂತ ವಿಚಾರಕ್ಕೆ ಸಂಬಂಧಿಸಿದಂತೆ ಅದನ್ನು ಆಡಳಿತದಲ್ಲಿರುವವರಿಗೆ ಕೇಳಬೇಕು. ಇದಕ್ಕೆಲ್ಲ ಅವರೇ ಉತ್ತರಿಸಬೇಕು ಎಂದು ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಕಿಡಿಕಾರಿದರು.
ಇದೇ ವೇಳೆ ಕರ್ನಾಟಕ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪಟ್ಯಾಪ್ ಹಾಗೂ ಶಿಷ್ಯವೇತನಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನಾ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ ಬೆಂಬಲ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ