Politics: ಮತ್ತೆ ಮೂರು ಡಿಸಿಎಂ ವಾದ ಮಂಡಿಸಿದ ಸತೀಶ್ ಜಾರಕಿಹೊಳಿ
Team Udayavani, Dec 28, 2023, 11:29 PM IST
ಬೆಂಗಳೂರು: ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಜನೆ ಬಗ್ಗೆ ಮತ್ತೆ ಧ್ವನಿ ಎತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಲೋಕಸಭಾ ಚುನಾವಣೆ ದೃಷ್ಟಿಯಿಂದ ಇದು ಸೂಕ್ತ ಎಂದು ಪ್ರತಿಪಾದಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಇತ್ತೀಚೆಗೆ ನಾನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುಜೇìವಾಲಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದೇನೆ. ಸಮುದಾಯವಾರು ಮೂರು ಡಿಸಿಎಂ ಸೃಷ್ಟಿಯಾದರೆ ಲೋಕಸಭಾ ಚುನಾವಣೆಗೆ ಅನುಕೂಲವಾಗುತ್ತದೆ. ನಾನು ಉಪ ಮುಖ್ಯಮಂತ್ರಿ ಆಗಬೇಕು ಎಂಬುದು ಕಾರ್ಯಕರ್ತರು ಹಾಗೂ ಮಠಾಧೀಶರ ಅಭಿಪ್ರಾಯವಾಗಿದೆ. ಕೇವಲ ನಾನಷ್ಟೇ ಅಲ್ಲ, ಲಿಂಗಾಯತ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾಕ ಸಮುದಾಯಕ್ಕೂ ಡಿಸಿಎಂ ಸ್ಥಾನ ಕೊಟ್ಟರೆ ಉತ್ತಮ ಎಂದು ಹೇಳಿದ್ದಾರೆ.
ನಾನು ಬೆಳಗಾವಿಯಿಂದ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ. ಬೆಳಗಾವಿಯಿಂದ ನನ್ನ ಹಿಡಿತ ತಪ್ಪಿಸುವುದಕ್ಕೂ ಸಾಧ್ಯವಿಲ್ಲ ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರಿಗೆ ಕೊಟ್ಟರೂ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನಿಭಾಯಿಸುವುದಕ್ಕೆ ಸಾಮರ್ಥ್ಯ ಇರುತ್ತದೆ. ನನಗೆ ಅವಕಾಶ ಬಂದಾಗ ನೋಡೋಣ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ