Politics: ಶಾಸಕರೊಂದಿಗೆ ಪ್ರವಾಸ ಹೊರಟಿದ್ದ ಸತೀಶ್‌ ಜಾರಕಿಹೊಳಿಗೆ ಹೈಕಮಾಂಡ್‌ ಬ್ರೇಕ್‌


Team Udayavani, Oct 16, 2023, 11:43 PM IST

sathish jarakiholi

ಬೆಂಗಳೂರು: ಬಹುಮತದೊಂದಿಗೆ ಸರಕಾರ ರಚಿಸಿದ್ದರೂ ಕಾಂಗ್ರೆಸ್‌ನ ಒಳಬೇಗುದಿ ಮಾತ್ರ ತಣ್ಣಗಾಗುತ್ತಿಲ್ಲ. ಆಗಾಗ ಸಚಿವರ ವಿರುದ್ಧ ಶಾಸಕರು ಸಮರ ಸಾರಿದರೆ, ಈ ಬಾರಿ ಸಚಿವರೇ ದಂಡು ಕಟ್ಟಲು ಮುಂದಾಗಿ ಹೈಕಮಾಂಡ್‌ ಮಧ್ಯಪ್ರವೇಶದಿಂದ ಹಿಂದೆ ಸರಿದಿದ್ದಾರೆ.

ಲೋಕೋಪಯೋಗಿ ಸಚಿವರೂ ಆಗಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ದಸರಾ ನೆಪದಲ್ಲಿ ಜಿಲ್ಲೆಯ 20ಕ್ಕೂ ಹೆಚ್ಚು ಶಾಸಕರನ್ನು ಮೈಸೂರಿನತ್ತ ಕರೆದೊಯ್ಯಲು ಬಸ್‌ ಸಿದ್ಧಪಡಿಸಿಕೊಂಡಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಅವರ ಕಾರ್ಯತಂತ್ರವೀಗ ಕುತೂಹಲಕ್ಕೆ ಕಾರಣವಾಗಿದೆ.

ಸದ್ಯಲ್ಲೇ ಪಕ್ಷ ಸಂಘಟನೆ ಪುನಾರಚನೆ ಆಗುವ ಸಾಧ್ಯತೆಗಳಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಕೈತಪ್ಪಿ ಹೋಗುವ ಗುಮಾನಿ ಇದೆ. ಅಲ್ಲದೆ, ಪಕ್ಷದ ಪದಾಧಿಕಾರಿಗಳ ಮರುವಿಂಗಡಣೆ ಸಹಿತ ಯಾವುದೇ ಪ್ರಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿಲ್ಲ, ವಿಶ್ವಾಸಕ್ಕೆ ಪಡೆಯುತ್ತಿಲ್ಲ ಎನ್ನುವ ಅಸಮಾಧಾನಗಳೂ ಇವರಲ್ಲಿವೆ. ಇದನ್ನೇ ಸಕಾಲ ಎಂದುಕೊಂಡಿರುವ ಸತೀಶ್‌, ತಾವು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದರಿಂದ ಈ ಬಗ್ಗೆ ಹೈಕಮಾಂಡ್‌ಗೆ ಸಂದೇಶ ರವಾನಿಸುವ ಇರಾದೆಯೂ ಇತ್ತು ಎನ್ನಲಾಗಿದೆ.

ಕುಡಿಯೊಡೆದ ಬಣ ರಾಜಕಾರಣ
ಸಿಎಂ ಮತ್ತು ಡಿಸಿಎಂ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದರೂ ಅನುಸರಿಸಿಕೊಂಡು ಹೋಗಲಾಗುತ್ತಿದೆ. ಇದರೊಂದಿಗೆ ಇತ್ತೀಚೆಗಷ್ಟೇ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರದಲ್ಲಿ ಸಚಿವರಲ್ಲೇ ಪರ-ವಿರೋಧದ ಚರ್ಚೆಗಳಾಗಿದ್ದವು. ಸಚಿವರು ತಮಗೆ ಸ್ಪಂದಿಸುತ್ತಿಲ್ಲ, ಶಾಸಕಾಂಗ ಸಭೆ ಕರೆಯಿರಿ ಎಂದು ಸಿಎಂಗೆ ದೂರು ಸಲ್ಲಿಸಿದ್ದರು. ಈಗ ಮತ್ತೂಮ್ಮೆ ಕಾಂಗ್ರೆಸ್‌ನೊಳಗೆ ಬಣ ರಾಜಕಾರಣ ಕುಡಿಯೊಡೆದಂತಿದ್ದು, ಇದಕ್ಕೆ ಸಚಿವ ಸತೀಶ್‌ ಮುನ್ನುಡಿ ಬರೆದಿದ್ದಾರೆ.

ಹೈಕಮಾಂಡ್‌ ಹಿತವಚನ
ಶಾಸಕರ ಮೈಸೂರು ಪ್ರವಾಸದ ವಿಷಯ ತಿಳಿಯುತ್ತಿದ್ದಂತೆ ಮಧ್ಯಪ್ರವೇಶಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗುಂಪು ಕಟ್ಟಿಕೊಂಡು ಎಲ್ಲೂ ಹೋಗದಂತೆ ಬುದ್ಧಿ ಮಾತು ಹೇಳಿದ್ದಾರೆ. ಒಂದೆಡೆ ಬರಗಾಲವಿದೆ, ಇನ್ನೊಂದೆಡೆ ಪಂಚರಾಜ್ಯಗಳ ಚುನಾವಣೆ ಇದೆ. ಇಂಥ ಸಂದರ್ಭದಲ್ಲಿ ಗುಂಪಾಗಿ ಹೋಗುವುದು ಅನಾವಶ್ಯಕವಾಗಿ ವಿಪಕ್ಷದವರಿಗೆ ಆಹಾರ ಕೊಟ್ಟಂತಾಗುತ್ತದೆ. ಹೀಗಾಗಿ ಎಲ್ಲೂ ಹೋಗಬೇಡಿ ಎಂದು ತಾಕೀತು ಮಾಡಿದ್ದಾರೆ.

ಪ್ರವಾಸ ರದ್ದಾಗಿಲ್ಲ, ಮುಂದೂಡಿದ್ದೇವೆ
ಎಲ್ಲಿಯಾದರೂ ಪ್ರವಾಸ ಹೋಗಬೇಕೆಂದು ಶಾಸಕರೊಂದಿಗೆ ಮಾತುಕತೆ ಮಾಡಲಾಗಿತ್ತು. ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಬರುವಂತೆ ಅಲ್ಲಿನ ಶಾಸಕರಿಂದ ಆಹ್ವಾನವಿತ್ತು. ಹಾಗಾಗಿ ವಿಶೇಷ ಸಂದರ್ಭ ಎಂಬ ಕಾರಣದಿಂದ ನಮ್ಮ ಕೆಲವು ಸಮಾನಮನಸ್ಕ ಶಾಸಕರು ಮೈಸೂರಿಗೆ ತೆರಳುವ ಯೋಜನೆ ಹಾಕಿಕೊಂಡಿದ್ದೆವು. ಎಲ್ಲರೂ ಒಟ್ಟಾಗಿದ್ದೇವೆ. ಪ್ರವಾಸ ರದ್ದಾಗಿಲ್ಲ, ಸದ್ಯಕ್ಕೆ ಮುಂದೂಡಿದ್ದೇವಷ್ಟೇ. ನಮ್ಮಲ್ಲಿ ಬಣ ರಾಜಕಾರಣ ಇಲ್ಲ. ಸಿಎಂ ಹಾಗೂ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ಪ್ರವಾಸ ಮಾಡುತ್ತೇವೆ ಎಂದು ಸತೀಶ್‌ ಜಾರಕಿಹೊಳಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ದುಬಾೖಗೆ ಹಾರಿದ ಕೆಲವು ಶಾಸಕರು?
ಇದೆಲ್ಲದರ ಮಧ್ಯೆ ಸಚಿವ ಸತೀಶ್‌ಜಾರಕಿಹೊಳಿ ಅವರ ಅಣತಿಯಂತೆ ಕೆಲವು ಶಾಸಕರು ಮುಂದಾಲೋಚನೆಯಿಂದ ದುಬಾೖಗೆ ತೆರಳಿರುವ ಮಾಹಿತಿ ಇದ್ದು, ಪಕ್ಷದಲ್ಲಿ ಯಾರಿಗೂ ಅನುಮಾನ ಬರಬಾರದು ಹಾಗೂ ತಪ್ಪು ಸಂದೇಶ ಹೋಗ ಬಾರದೆನ್ನುವ ಕಾರಣಕ್ಕೆ ದಸರಾ ನೆಪ ಒಡ್ಡಿದ್ದರು. ಬೆಳಗಾವಿಯಿಂದ ಮೈಸೂರಿಗೆ ಹೋಗಿ, ಅಲ್ಲಿಂದ ಮಂಗಳೂರು ಅಥವಾ ಬೆಂಗಳೂರಿನ ಮೂಲಕ ಉಳಿದವರೆಲ್ಲರೂ ದುಬಾೖಗೆ ತೆರಳುವ ಮಹಾಯೋಜನೆ ರೂಪಿಸಲಾಗಿತ್ತು. ಎಲ್ಲದಕ್ಕೂ ಹೈಕಮಾಂಡ್‌ ತಣ್ಣೀರೆರಚಿ ದಂತಾಗಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.