ನಿರ್ಬಂಧ ಮಧ್ಯೆಯೂ ಸವದತ್ತಿ ಯಲ್ಲಮ್ಮನತ್ತ ಭಕ್ತರ ಹೆಜ್ಜೆ
Team Udayavani, Oct 14, 2020, 4:13 PM IST
ಸವದತ್ತಿ: ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರದ ಸೂಚನೆಯಂತೆ ಯಲ್ಲಮ್ಮ ದೇವಸ್ಥಾನದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರೂ ಭಕ್ತರ ಆಗಮನ ಮಾತ್ರ ನಿಂತಿಲ್ಲ. ದಸರಾಕ್ಕೆ ಕ್ಷಣಗಣನೆ ಆರಂಭವಾಗಿರುವ ಈ ಸಂದರ್ಭದಲ್ಲಿ ಕ್ಷೇತ್ರದತ್ತ ಭಕ್ತರ ಹರಿವೂ ಹೆಚ್ಚಿದೆ.
ದಸರಾ ವೇಳೆ ಯಲ್ಲಮ್ಮ ದೇವಸ್ಥಾನಕ್ಕೆ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿಂದ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಅ. 31ರ ವರೆಗೆ ಸಾರ್ವಜನಿಕ ದರ್ಶನದ ನಿರ್ಬಂಧ ಮುಂದುವರಿಸಿ ಆದೇಶ ಹೊರಡಿಸಿದ್ದಾರೆ.
ಸವದತ್ತಿ-ಯಲ್ಲಮ್ಮಗುಡ್ಡದ ಎರಡು ಮಾರ್ಗಗಳಲ್ಲಿ ಮತ್ತು ಉಗರಗೋಳ ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಿ ದೇವಸ್ಥಾನಕ್ಕೆ ಬರದಂತೆ ತಡೆಯಲಾಗಿದೆ. ಆದರೂ ಸಹ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ವ್ಯಾಪಾರಕ್ಕೆಂದು ಸ್ಥಳಿಕರು ಹೋಗುತ್ತಿರುವುದು ತಪ್ಪುತ್ತಿಲ್ಲ. ಮಂಗಳವಾರ ಮತ್ತು ಶುಕ್ರವಾರ ಹಾಗೂ ಘಟ್ಟದ ದಿನಗಳಂದು ಭಕ್ತರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ
ಇದನ್ನೂ ಓದಿ :ಮಹಾ ಮಳೆಯಿಂದ ಬೆಳೆ ಹಾನಿ: ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ
ಹೊಸ ಪದ್ಧತಿ ಮುನ್ನೆಲೆಗೆ
ಲಾಕ್ಡೌನ್ ಸಡಿಲಿಕೆ ಬಳಿಕ ಕ್ಷೇತ್ರದತ್ತ ಭಕ್ತರ ಆಗಮನ ಪ್ರಾರಂಭವಾಗಿದ್ದು, ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ ಹಿನ್ನೆಲೆಯಲ್ಲಿ ಮಹಾದ್ವಾರದ ಮುಂದಿನ ರಸ್ತೆ ಮೇಲೆ ಹಣ್ಣು-ಕಾಯಿ ಮಾಡುತ್ತಿದ್ದರು. ಆದರೆ ಇದೀಗ ದೇವಸ್ಥಾನದ ಸುತ್ತಲಿನ 3-4 ಕಿಮೀ ಆಚೆಗೆ ಎಲ್ಲ ರಸ್ತೆಗಳನ್ನು ಬ್ಯಾರಿಕೇಡ್ಗಳಿಂದ ಬಂದ್ ಮಾಡಿದ್ದರೂ ಬ್ಯಾರಿಕೇಡ್ ಮುಂದೆ, ರಸ್ತೆ ಬದಿ, ಬಯಲು ಪ್ರದೇಶಗಳಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸುವ ಪದ್ಧತಿ ಆಚರಣೆ ಬಂದಿದೆ.
ಸರ್ಕಾರದ ಕಟ್ಟುಪಾಡು ಕೇಳುವವರಿಲ್ಲ
ಸುತ್ತಲಿನ ಗ್ರಾಮಗಳ ಬೀದಿ ವ್ಯಾಪಾರಸ್ಥರು ಭಕ್ತರ ಆಗಮನ ಕಂಡು ಸಾಗಿಬರುತ್ತಿದ್ದಾರೆ. ಜೋಗುತಿಯರು ಭಕ್ತರಿಂದ ಪಡ್ಡಲಗಿ ತುಂಬಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಕೊರೊನಾ ಬಂದರೂ ಸರಿಯೇ
ವ್ಯಾಪಾರ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂಬ ಮಾತುಗಳು ವ್ಯಾಪಾರಸ್ಥರದ್ದಾಗಿದೆ. ಸರ್ಕಾರದ ಕಟ್ಟುಪಾಡುಗಳನ್ನು ಜನ ಗಾಳಿಗೆ ತೂರಿದ್ದು, ಪೊಲೀಸ್ ಸಿಬ್ಬಂದಿ ಏನೇ ಕ್ರಮಗಳನ್ನು ಜರುಗಿಸಿದರೂ ತಲೆಕೆಡಿಸಿಕೊಳ್ಳದೆ ತಮ್ಮದೇ ಪ್ರಪಂಚದಲ್ಲಿ ತಲ್ಲೀನರಾಗಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ಗ್ರಾಪಂಗಳಿಂದ ಧ್ವನಿವರ್ಧಕಗಳ ಮೂಲಕ ಎಷ್ಟೇ ಜಾಗೃತಿ ಅಭಿಯಾನ ಕೈಗೊಂಡರೂ ಭಕ್ತರಾಗಲಿ, ವ್ಯಾಪಾರಸ್ಥರಾಗಲಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಸೇರಿದಂತೆ ಯಾವ ಮುನ್ನೆಚ್ಚರಿಕಾ
ಕ್ರಮಗಳನ್ನೂ ಪಾಲಿಸುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ
Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್