Bhatkala: ಸಾವರ್ಕರ್‌ ಧ್ವಜಕಟ್ಟೆ, ಫಲಕ ತೆರವು; ಭುಗಿಲೆದ್ದ ವಿವಾದ

2022ರಲ್ಲಿ ನಿರ್ಮಿಸಿದ್ದ ಕಟ್ಟೆ, ನಾಮಫ‌ಲಕ, ಏಕಾಏಕಿ ತೆರವುಗೊಳಿಸಿದ್ದರಿಂದ ಆಕ್ರೋಶ; ಧರಣಿ ನಿರತರು-ಪೊಲೀಸರ ಮಧ್ಯೆ ಮಾತಿನ ಚಕಮಕಿ, ಅದೇ ಸ್ಥಳದಲ್ಲಿ ಕಟ್ಟೆ ಕಟ್ಟಿದ ಬಿಜೆಪಿ

Team Udayavani, Jan 30, 2024, 11:22 PM IST

bhatk

ಭಟ್ಕಳ: ಮಂಡ್ಯ ಜಿಲ್ಲೆ ಕೆರಗೋಡಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ವೀರ ಸಾವರ್ಕರ್‌ ಧ್ವಜ ಕಟ್ಟೆ, ನಾಮಫಲಕ ಹಾಗೂ ಭಗವಾ ಧ್ವಜ ತೆರವುಗೊಳಿಸಿದ್ದರಿಂದ ಪ್ರತಿಭಟನೆ ಭುಗಿಲೆದ್ದಿದೆ.

ಭಟ್ಕಳ ತಾಲೂಕಿನ ಹೆಬಳೆ ಗ್ರಾಪಂ ವ್ಯಾಪ್ತಿಯ ತೆಂಗಿನಗುಂಡಿ ಬಂದರಿನಲ್ಲಿ ನಿರ್ಮಿಸಿದ್ದ ವೀರ ಸಾವರ್ಕರ್‌ ಕಟ್ಟೆಯನ್ನು ಗ್ರಾಪಂ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿದ್ದರಿಂದ ಆಕ್ರೋಶ ವ್ಯಕ್ತವಾಗಿದ್ದು, ಮೊದಲಿದ್ದ ಸ್ಥಳದಲ್ಲೇ ಗ್ರಾಪಂ ಸದಸ್ಯರು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಕಟ್ಟೆಯನ್ನು ಮರು ನಿರ್ಮಿಸಿದ್ದಾರೆ.

ಪೊಲೀಸರ ಜತೆ ಚಕಮಕಿ
ಗ್ರಾಪಂ ಅಧಿಕಾರಿಗಳು ಜಾಮಿಯಾಬಾದ್‌ ರಸ್ತೆ ನಾಮಫಲಕ ತೆರವು ಮಾಡಲು ಒಪ್ಪದಿದ್ದಾಗ ಬಿಜೆಪಿ ಸದಸ್ಯರು ತಮ್ಮ ಕಾರ್ಯಕರ್ತರ ಜತೆಗೂಡಿ ತೆಂಗಿನಗುಂಡಿ ಬಂದರಿನಲ್ಲಿ ಪುನಃ ವೀರ ಸಾರ್ವಕರ್‌ ನಾಮಫಲಕ ಅಳವಡಿಸಲು ಕಟ್ಟೆ ಕಟ್ಟಲು ಮುಂದಾದರು. ಇದಕ್ಕೆ ಪೊಲೀಸರು ತಡೆಯೊಡ್ಡಿದರು. ಆಗ ಪೊಲೀಸರು ಹಾಗೂ ಬಿಜೆಪಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮುಖಂಡ ಗೋವಿಂದ ನಾಯ್ಕ, ಶ್ರೀಕಾಂತ ನಾಯ್ಕ ಮತ್ತಿತರರು ಬಿಜೆಪಿ ಗ್ರಾಪಂ ಸದಸ್ಯರು ಲಿಖೀತವಾಗಿ ನೀಡಿರುವ 6 ಅನ ಧಿಕೃತ ನಾಮ ಫಲಕವವನ್ನು ಒಂದು ವಾರದ ಒಳಗೆ ಗ್ರಾಪಂ ಅಧಿಕಾರಿಗಳು ತೆರವು ಮಾಡಿದರೆ ನಾವು ಸ್ವಯಂ ಪ್ರೇರಣೆಯಿಂದ ಈ ಕಟ್ಟೆಯನ್ನೂ ತೆರವುಗೊಳಿಸುತ್ತೇವೆ. ಆದರೆ ಅನಧಿಕೃತ ನಾಮಫಲಕ ತೆರವು ಮಾಡದೇ ಹೋದಲ್ಲಿ ಇದೇ ಕಟ್ಟೆಯಲ್ಲಿ ವೀರ ಸಾರ್ವಕರ್‌ ನಾಮಫಲಕ ಮರು ಸ್ಥಾಪಿಸುವುದಾಗಿ ತಿಳಿಸಿದರು.

ಏನಿದು ವಿವಾದ?
ತೆಂಗಿನಗುಂಡಿ ಬಂದರಿನಲ್ಲಿ 2022ರಲ್ಲಿ ಸಾರ್ವಜನಿಕರು ನೀಡಿದ ಮನವಿ ಮೇರೆಗೆ ಗ್ರಾಪಂನಲ್ಲಿ ಈ ಬಗ್ಗೆ ಚರ್ಚಿಸಿ ಅನಂತರ ಧ್ವಜಕಟ್ಟೆ ನಿರ್ಮಿಸಿ ವೀರ ಸಾವರ್ಕರ್‌ ಫಲಕ ಅಳವಡಿಸಲಾಗಿತ್ತು. ಆದರೆ ಜ.27ರಂದು ಗ್ರಾಪಂ ಅಧಿಕಾರಿಗಳು ಯಾರಿಗೂ ಮಾಹಿತಿ ನೀಡದೆ ಈ ಕಟ್ಟೆ ತೆರವುಗೊಳಿಸಿದ್ದಾರೆ. ಈ ಬಗ್ಗೆ ಗ್ರಾಪಂ ಪಿಡಿಒ ಸೇರಿ ಅಧಿಕಾರಿಗಳನ್ನು ಕೇಳಿದರೆ ಸರಿಯಾದ ಮಾಹಿತಿ ನೀಡಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಪಂ ಸದಸ್ಯರು, ಹಿಂದೂ ಸಂಘಟನೆಗಳ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಮಂಗಳವಾರ ಗ್ರಾಪಂ ಎದುರು ಧರಣಿ ನಡೆಸಿದರು. ಇಲ್ಲಿರುವ ಧ್ವಜಕಟ್ಟೆ ತೆರವುಗೊಳಿಸುವಂತೆ ಯಾರೂ ಮನವಿ ನೀಡಿಲ್ಲ. ಆದರೂ ಪಿಡಿಒ ಒತ್ತಡಕ್ಕೆ ಮಣಿದು ಏಕಾಏಕಿ ಕಟ್ಟೆ ತೆರವುಗೊಳಿಸಿದ್ದಾರೆ. ಗ್ರಾಪಂ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತಾರದೆ ಕಟ್ಟೆ ತೆರವುಗೊಳಿಸಿದ್ದು ಸರಿಯಲ್ಲ. ಹೆಬಳೆ ಗ್ರಾಪಂ ವ್ಯಾಪ್ತಿಯಲ್ಲಿ ಇದೇ ರೀತಿ ಅನೇಕ ನಾಮಫಲಕಗಳಿವೆ. ಅದನ್ನೂ ತೆರವುಗೊಳಿಸಲಿ ಅಥವಾ ಮೊದಲಿದ್ದ ಸ್ಥಳದಲ್ಲೇ ಕಟ್ಟೆ ನಿರ್ಮಿಸಲಿ ಎಂದು ಪಟ್ಟು ಹಿಡಿದರು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.