ಶಾಲೆ ದತ್ತು; ಕಾಯುತ್ತಿವೆ ನಿರೀಕ್ಷೆ ಹೊತ್ತು


Team Udayavani, Dec 21, 2020, 11:24 AM IST

ಶಾಲೆ ದತ್ತು; ಕಾಯುತ್ತಿವೆ ನಿರೀಕ್ಷೆ ಹೊತ್ತು

ಧಾರವಾಡ: ಶಾಸಕರ ದತ್ತು ಶಾಲೆ ಯೋಜನೆಯಡಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ-71ರ ಶಾಸಕ ಅಮೃತ ದೇಸಾಯಿ ತಮ್ಮ ಕ್ಷೇತ್ರ ವ್ಯಾಪ್ತಿಯ ಮೂರು ಶಾಲೆಗಳನ್ನು ದತ್ತು ಪಡೆದಿದ್ದಾರೆ.

ಕರಡಿಗುಡ್ಡ ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಬೇಲೂರಿನ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಮುಗಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಕಳೆದ ತಿಂಗಳಷ್ಟೇ ದತ್ತು ಪಡೆಯಲಾಗಿದೆ. ಶಾಲೆಗಳಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾರ್ಯಗಳ ಕ್ರಿಯಾ ಯೋಜನೆ ಸಿದ್ಧಗೊಂಡು ಸಲ್ಲಿಕೆಯಾಗಬೇಕಿದೆ. ಈ ಮೂರು ಶಾಲೆಗಳ ಪೈಕಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಎಸ್‌ಡಿಎಂಸಿ ಅಧ್ಯಕ್ಷರು ಶಾಸಕರೇ ಆಗಿದ್ದಾರೆ. ಮೂರೂ ಶಾಲೆಗಳಲ್ಲಿ ಆಗಬೇಕಿರುವ ಕಾರ್ಯ, ಅಗತ್ಯಗಳ ಬಗ್ಗೆ ಶಾಲಾ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ. ಇದನ್ನು ಆಧರಿಸಿ ಕ್ರಿಯಾಯೋಜನೆ ಸಿದ್ಧಗೊಂಡು ಕಾಮಗಾರಿಗಳಿಗೆ ಚಾಲನೆ ಕೊಡಬೇಕಿದೆ.

ದತ್ತು ಪಡೆದಿರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಮಂಜೂರಾತಿ ದೊರೆತಿರುವ ಹುದ್ದೆಗಳ ಪೈಕಿ ಕೆಲವೊಂದಿಷ್ಟು
ಈವರೆಗೂ ಭರ್ತಿಯಾಗಿಲ್ಲ. ಶಾಸಕರೇ ಎಸ್‌ಡಿಎಂಸಿ ಅಧ್ಯಕ್ಷರಾಗಿರುವ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿಯೇ ನಾಲ್ಕು ಹುದ್ದೆ ಖಾಲಿ ಇದೆ. ಮುಗಳಿಯ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಣ, ವಿಜ್ಞಾನ ಹಾಗೂ ಬೇಲೂರಿನ ಶಾಲೆಯಲ್ಲಿ ಕನ್ನಡ, ದೈಹಿಕ ಶಿಕ್ಷಣ ಶಿಕ್ಷಕರೇ ಇಲ್ಲ. ಬಹುತೇಕ ಕೊಠಡಿಗಳು ದುರಸ್ತಿ ಆಗಬೇಕಿವೆ. ಹೊಸದಾಗಿ ಕೊಠಡಿಗಳು ಹಾಗೂ ಶೌಚಾಲಯಗಳ ಅಗತ್ಯವೂ ಇದೆ. ಶಾಸಕರು ದತ್ತು ಪಡೆದಿರುವುದರಿಂದ ಅಗ್ತಯ ಸೌಲಭ್ಯಗಳ ನಿರೀಕ್ಷೆಯಲ್ಲಿ ಶಾಲೆಗಳಿವೆ.

ಕರಡಿಗುಡ್ಡದ ಕರ್ನಾಟಕ ಪಬ್ಲಿಕ್‌ ಸೂಲ್‌
ಶಾಸಕ ಅಮೃತ ದೇಸಾಯಿ ಅವರೇ ಎಸ್‌ಡಿಎಂಸಿ ಅಧ್ಯಕ್ಷರಾಗಿದ್ದು, ಪ್ರಾಥಮಿಕ, ಪ್ರೌಢ ಹಾಗೂ ಪಿಯು ವಿಭಾಗಗಳಲ್ಲಿ 844 ವಿದ್ಯಾರ್ಥಿಗಳಿದ್ದಾರೆ. ಉದ್ಯಾನವನ, ಮೈದಾನ ಚೆನ್ನಾಗಿರುವ ಕಾರಣ ಕಲಿಕೆಗೆ ಒಳ್ಳೆಯ ವಾತಾವರಣ ಇದೆ. ತಕ್ಕಮಟ್ಟಿಗೆ ಅಭಿವೃದ್ಧಿಯಾಗಿದೆ. ಆದರೆ 116 ವರ್ಷ ಕಂಡಿರುವ ಪ್ರಾಥಮಿಕ ಶಾಲೆಯ 6 ಹಾಗೂ ಪ್ರೌಢಶಾಲೆಯ 4 ಕೊಠಡಿಗಳ ದುರಸ್ತಿ ಕಾರ್ಯ ಆಗಬೇಕಿದೆ. ಒಟ್ಟು 10 ಕೊಠಡಿಗಳ ದುರಸ್ತಿ ಕಾರ್ಯದ ಜೊತೆಗೆ ಪ್ರಾಥಮಿಕ ಶಾಲೆಗೆ ಹೊಸದಾಗಿ 5 ಕೊಠಡಿಗಳ ಅಗತ್ಯವಿದೆ. ಈಗಾಗಲೇ ಕೆಲ ಕೊಠಡಿ ನಿರ್ಮಾಣ ಕಾರ್ಯಕ್ಕೆ ಶಾಸಕರು ಚಾಲನೆ ನೀಡಿದ್ದಾರೆ. ಮೂರೂ ವಿಭಾಗಗಳಲ್ಲಿ ತಲಾ ಎರಡು ಹೆಚ್ಚುವರಿ ಶೌಚಾಲಯಗಳು ಬೇಕಿವೆ.

ಮುಗಳಿ ಸರ್ಕಾರಿ ಪ್ರಾಥಮಿಕ ಶಾಲೆ
95 ವರ್ಷ ಪೂರೈಸಿ ಶತಮಾನ ಕಾಣುವ ಸನ್ನಿಹಿತದಲ್ಲಿರುವ ಈ ಶಾಲೆಯಲ್ಲಿ 180 ಮಕ್ಕಳ ಹಾಜರಾತಿ ಇದೆ. ಮಂಜೂರಾಗಿರುವ 8 ಶಿಕ್ಷಕರ ಪೈಕಿ ಮೂರು ಹುದ್ದೆ ಖಾಲಿಯಾಗಿವೆ. ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿಲ್ಲ. ಕಾಂಪೌಂಡ್‌ ಇಲ್ಲದ ಶಾಲೆಯಲ್ಲಿರುವ ಆರು ಕೊಠಡಿಗಳ ಪೈಕಿ 4 ಕೊಠಡಿಗಳು ದುರಸ್ತಿ ಮಾಡಲು ಆಗದಂತಹ ಸ್ಥಿತಿಯಲ್ಲಿವೆ. ಹೀಗಾಗಿ 2 ಕೊಠಡಿಗಳಲ್ಲಷ್ಟೇ ಕಲಿಕೆ
ಮಾಡುತ್ತಿದ್ದು, 4 ಕೊಠಡಿಗಳ ತೆರವಿಗೆ ಉದ್ದೇಶಿಸಲಾಗಿದೆ.

ಬೇಲೂರು ಸರ್ಕಾರಿ ಪ್ರಾಥಮಿಕ ಶಾಲೆ
ಹಂಚಿನ ಮೇಲ್ಛಾವಣಿ ಹೊಂದಿರುವ ಶಾಲೆಯಲ್ಲಿ 370 ಮಕ್ಕಳಿದ್ದು, ಮಳೆಗಾಲದಲ್ಲಿ ಕೊಠಡಿಗಳು ಸೋರುತ್ತವೆ. ಶಾಲೆಗೆ
ಮಂಜೂರು ಇರುವ 11 ಶಿಕ್ಷಕರ ಪೈಕಿ ಮೂರು ಹುದ್ದೆ ಖಾಲಿಯಿದ್ದು, ಕನ್ನಡ, ಸಮಾಜ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿಲ್ಲ. ಈಗಿರುವ 11 ಕೊಠಡಿಗಳ ಪೈಕಿ 5 ಸುಸ್ಥಿತಿಯಲ್ಲಿದ್ದರೆ 4 ಕೊಠಡಿಗಳ ದುರಸ್ತಿ ಆಗಬೇಕಾಗಿದೆ. 3 ಕೊಠಡಿಗಳು ಈಗಾಗಲೇ
ದುಸ್ಥಿತಿಯಲ್ಲಿವೆ. ಹೀಗಾಗಿ ಕೊಠಡಿಗಳ ದುರಸ್ತಿ ಜೊತೆಗೆ ಹೊಸದಾಗಿ ನಾಲ್ಕು ಕೊಠಡಿಗಳು ಬೇಕು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.