RTE ಶಾಲೆಗಳ ಮ್ಯಾಪಿಂಗ್ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ
Team Udayavani, Feb 9, 2024, 9:40 PM IST
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ (ಆರ್ಟಿಇ) 2024-25ನೇ ಸಾಲಿನ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲೆಗಳ ಮ್ಯಾಪಿಂಗ್ ಮಾಡುವಂತೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ರಾಜ್ಯದ ಎಲ್ಲ ಸರ್ಕಾರಿ, ಬಿಬಿಎಂಪಿ ಶಾಲೆಗಳು, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಮ್ಯಾಪಿಂಗ್ ಮಾಡಬೇಕು. ಅಲ್ಪಸಂಖ್ಯಾತ ಶಾಲೆಗಳೆಂದು ಘೋಷಣಾ ಪತ್ರ ಪಡೆದಿರುವ, ಈಗಾಗಲೇ ಮುಚ್ಚಿರುವ ಮತ್ತು ನ್ಯಾಯಾಲಯದ ತಡೆಯಾಜ್ಞೆ ಪಡೆದಿರುವ ಶಾಲೆಗಳನ್ನು ಆರ್ಟಿಇ ಪಟ್ಟಿಯಿಂದ ಕೈಬಿಡಬೇಕು. ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಮಾತ್ರ ನಡೆಸುವ ಶಾಲೆಗಳನ್ನು ಪಟ್ಟಿಯಲ್ಲಿ ಸೇರಿಸಬಾರದು. 2023ರ ಡಿ.31ರಲ್ಲಿದ್ದ ದಾಖಲಾತಿ ಸಂಖ್ಯೆಯನ್ನು ಆಧರಿಸಿ ಶೇ.25 ಸೀಟು ಹಂಚಿಕೆಗೆ ಪರಿಗಣಿಸುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಆರ್ಟಿಇ ತಾತ್ಕಾಲಿಕ ವೇಳಾಪಟ್ಟಿ: ಫೆ.7- 2024-25ನೇ ಸಾಲಿನ ಆರ್ಟಿಟಿ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟಿಸುವುದು.
ಫೆ.23- ಶಾಲೆಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸುವುದು, ಫೆ.28- ನೆರೆಹೊರೆ ಶಾಲೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೊನೇ ದಿನ. ಮಾ.4- ಶೇ.25 ಸೀಟುಗಳು ಲಭ್ಯವಿರುವ ಶಾಲೆಗಳ ಪಟ್ಟಿಯನ್ನು ಜಿಲ್ಲೆಯ ಅಧಿಕೃತ ವೆಬ್ಸೈಟ್ ಹಾಗೂ ಕಚೇರಿ ಸೂಚನಾಫಲಕದಲ್ಲಿ ಪ್ರಕಟಿಸುವುದು, ಮಾ.20,21- ಪ್ರಾಯೋಗಿಕವಾಗಿ ಅರ್ಜಿ ಸಲ್ಲಿಕೆ ಆರಂಭ, ಮಾ.22ರಿಂದ-ಏ-22ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ, ಏ.30- ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ