ಶಾಲಾರಂಭ ಗೊಂದಲ ಸೃಷ್ಟಿಸುವುದು ಸರಿಯಲ್ಲ


Team Udayavani, Jun 29, 2021, 7:55 AM IST

ಶಾಲಾರಂಭ ಗೊಂದಲ ಸೃಷ್ಟಿಸುವುದು ಸರಿಯಲ್ಲ

ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಪರೀಕ್ಷೆ ಹಾಗೂ ಭೌತಿಕ ತರಗತಿ ನಡೆಸುವುದೇ ಕಷ್ಟ. ಆದರೂ ರಾಜ್ಯ ಸರಕಾರ‌ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಅನುಕೂಲವಾಗುವಂತೆ ಸರಳೀಕೃತ ರೂಪದಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಿ, ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದೆ.

ಎರಡು ಪರೀಕ್ಷೆಗಳನ್ನು ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅತ್ಯಂತ ಸುರಕ್ಷಿತ ವಲಯದಲ್ಲಿ ನಡೆಸಲು ಬೇಕಾದ ಸಿದ್ಧತೆಯನ್ನು ಜಿಲ್ಲಾ ಹಂತದಲ್ಲಿ ಮಾಡಿಕೊಳ್ಳಲಾಗಿದೆ. ಸಾಮಾಜಿಕ ಅಂತರಕ್ಕೆ ಅನುಗುಣವಾಗಿ ಪರೀಕ್ಷಾ ಕೇಂದ್ರದ ಸಂಖ್ಯೆಯನ್ನು ದ್ವಿಗುಣ ಮಾಡಲಾಗಿದೆ (ಮೂರು ಸಾವಿರದಿಂದ ಆರು ಸಾವಿರಕ್ಕೆ ಏರಿಸಲಾಗಿದೆ). ಪರೀಕ್ಷಾ ಮೇಲ್ವಿಚಾರಕವಾಗಿ ಸೇವೆ ಸಲ್ಲಿಸುವ ಎಲ್ಲರೂ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಿ, ಸಮರೋಪಾದಿಯಲ್ಲಿ ಲಸಿಕೆ ಕೂಡ ನೀಡಲಾಗುತ್ತಿದೆ.

ಇದೆಲ್ಲದರ ಜತೆಗೆ ವಿದ್ಯಾರ್ಥಿಗಳು ತಾವಿರುವ ಪ್ರದೇಶದ ಸಮೀಪದ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗಿದೆ. ಎರಡು ಅಥವಾ ಮೂರು ದಿನಗಳಲ್ಲಿ ಎಸೆಸೆಲ್ಸಿ ಪರೀಕ್ಷೆಯ ಅಂತಿಮ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳ ಬಹುದು. ಇದೆಲ್ಲದಕ್ಕೂ ಮಿಗಿಲಾಗಿ, ಪರೀಕ್ಷೆಯನ್ನು ಸಂಪೂರ್ಣವಾಗಿ ಆರೋಗ್ಯ ಇಲಾಖೆಯ ಸೂಚನೆ, ಮಾರ್ಗದರ್ಶನದಂತೆಯೇ ನಡೆಸ ಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಎಲ್ಲ ಸಿದ್ಧತೆ, ಪೂರ್ವತಯಾರಿ, ಪರೀಕ್ಷಾ ದಿನಾಂಕದ ಘೋಷಣೆಯ ಅನಂತರ ಸರಕಾರ‌ದಲ್ಲಿ ಪರೀಕ್ಷೆಯ ಬಗ್ಗೆ ಗೊಂದಲ ಸರಿಯಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ.

ಪರೀಕ್ಷೆಯ ಬಗ್ಗೆ ಆರೋಗ್ಯ ಮತ್ತು ಉನ್ನತ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಭಿನ್ನ ಹೇಳಿಕೆ ನೀಡುವುದು ಸರಿಯಲ್ಲ. ಸುಮಾರು 8.70 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಸಚಿವರ ಗೊಂದಲದ ಹೇಳಿಕೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲೆ ನೇರ ಪರಿಣಾಮ ಬೀರಲಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಗೊಂದಲ ಅಥವಾ ಆತಂಕ ಸೃಷ್ಟಿ ಮಾಡದೇ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಉತ್ತೇಜಿಸುವ ಜಾಣ್ಮೆ ಸರಕಾರ‌ದ್ದಾಗಬೇಕು.

ಗ್ರಾಮೀಣ, ನಗರ, ಮಹಾನಗರ, ಪಟ್ಟಣ ಪಂಚಾಯತ್‌ ಸೇರಿದಂತೆ ರಾಜ್ಯದ ಪ್ರತೀ ವಿದ್ಯಾರ್ಥಿಯೂ ಅತ್ಯಂತ ಧೈರ್ಯ ಹಾಗೂ ಆತ್ಮವಿಶ್ವಾಸ ದಿಂದ ಪರೀಕ್ಷೆ ಬರೆಯಬೇಕಿದ್ದು, ಇದಕ್ಕೆ ಪೂರಕವಾಗಿ ಸರಕಾರ‌, ಇಲಾಖೆಗಳು, ಅಧಿಕಾರಿಗಳು, ಸಚಿವರು, ಶಾಸಕರು ಸಹಿತವಾಗಿ ಎಲ್ಲ ಜನಪ್ರತಿನಿಧಿಗಳು ಕೆಲಸ ಮಾಡಬೇಕಾಗಿದೆ. ಗೊಂದಲ ಹೇಳಿಕೆ ನೀಡುವುದರಿಂದ ಸಮಸ್ಯೆ ಇನ್ನಷ್ಟು ಜಟಿಲವಾಗಲಿದೆ. ಎಲ್ಲ ಮಕ್ಕಳು ನಿರ್ಭೀತಿಯಿಂದ ಪರೀಕ್ಷೆ ಬರೆಯಲು ಎಲ್ಲರ ಉತ್ತೇಜನ, ಪ್ರೋತ್ಸಾಹದ ಅಗತ್ಯವಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಗೊಂದಲದ ಹೇಳಿಕೆ ನೀಡುವುದು ಸರಿಯಲ್ಲ.

ವಿದ್ಯಾರ್ಥಿಗಳು ಸುಗಮವಾಗಿ ಎಸೆಸೆಲ್ಸಿ ಪರೀಕ್ಷೆ ಬರೆದು, ಉತ್ತಮ ಫಲಿತಾಂಶವನ್ನು ಪಡೆದು, ಪಿಯುಸಿ ಸೇರಿದಂತೆ ತಮ್ಮ ಆಯ್ಕೆಯಂತೆ ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಲು ಎಲ್ಲರೂ ಪ್ರೋತ್ಸಾಹಕರಾಗಿ ನಿಲ್ಲ ಬೇಕಿರುವುದು ಇಂದಿನ ಪರಿಸ್ಥಿತಿಯ ಅಗತ್ಯವಾಗಿದೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.