ನಾರ್ವೆ ಮಕ್ಕಳು ನಲಿದಾಡಿದರು
Team Udayavani, Apr 28, 2020, 3:51 PM IST
ನಾರ್ವೆ: ಒಂದೂವರೆ ತಿಂಗಳ ನಂತರ ನಾರ್ವೆಯಲ್ಲಿ ಮತ್ತೆ ಮಕ್ಕಳ ಕಲರವ ಶಾಲೆಯಲ್ಲಿ ಕೇಳಿಬರುತ್ತಿದೆ.
ಶೈಕ್ಷಣಿಕ ಕ್ಷೇತ್ರ ಚಟುವಟಿಕೆ ಆರಂಭಿಸಿದೆ. ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸ್ಥಗಿತಗೊಂಡಿದ್ದ ಪ್ರಾಥಮಿಕ ಶಾಲೆಗಳು ಸೋಮವಾರ ತೆರೆದಿವೆ. ಈ ಮೂಲಕ ನಾರ್ವೆ ಒಂದೊಂದೇ ಹಂತವಾಗಿ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸುತ್ತಿದೆ.
ನರ್ಸರಿ ಶಾಲೆಗಳ ಪುನರಾರಂಭಿಸಿ ಒಂದು ವಾರದ ಅಂತರದಲ್ಲೇ ಒಂದರಿಂದ ಐದನೇ ತರಗತಿಗಳು ಪ್ರಾರಂಭಗೊಂಡಿವೆ. ವಿದ್ಯಾರ್ಥಿಗಳು 6 ವಾರಗಳ ನಂತರ ಶಾಲೆಯತ್ತ ಮುಖ ಮಾಡಿದ್ದಾರೆ. ಆದರೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಮಿತಿಗೊಳಿಸಿರುವ ಸರಕಾರ ಒಂದು ಕೊಠಡಿಯಲ್ಲಿ ಕೇವಲ 15 ವಿದ್ಯಾರ್ಥಿಗಳಿಗಷ್ಟೇ ಅವಕಾಶ ನೀಡಿದೆ.
ದೇಶದಲ್ಲಿ ಸೋಂಕು ಪ್ರಸರಣ ಕಡಿತವಾಗಿದ್ದು, ಸೋಂಕು ಪೀಡಿತರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಸಂಪೂರ್ಣವಾಗಿ ಶಾಲೆ-ಕಾಲೇಜುಗಳನ್ನು ತೆರೆಯುವಂತೆ ತಿಳಿಸಲಾಗಿದೆ. ಆದರೆ ಈ ನಡೆ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದ್ದು, ಮಕ್ಕಳಿಗೆ ಸೋಂಕು ತಗುಲಬಹುದು ಎಂದು ಕೆಲವು ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ನರ್ಸರಿ ಶಾಲೆಗಳ ಹಲವು ಸಿಬಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರು ಹಿಂದೆ ಮುಂದೆ ನೋಡುತ್ತಿದ್ದಾರೆ.
ಶೈಕ್ಷಣಿಕ ಕ್ಷೇತ್ರದ ಹೊರತಾಗಿ ಇತರ ಕೆಲ ಕ್ಷೇತ್ರಗಳಿಗೆ ಸರಕಾರ ವಿನಾಯಿತಿ ನೀಡಿದ್ದು, ಹೇರ್ ಸೆಲೂನ್ ಮತ್ತು ಟ್ಯಾಟೋ ಅಂಗಡಿ ಮಾಲಕರಿಗೆ ತಮ್ಮ ವ್ಯವಹಾರವನ್ನು ಪುನರಾರಂಭಿಸುವಂತೆ ಆದೇಶ ನೀಡಿದೆ. ಸಾಮೂಹಿಕ ಕಾರ್ಯಕ್ರಮ ಆಯೋಜನೆ ನಿಷೇಧ ಆದರೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಇತರ ಯಾವುದೇ ಸಾಮೂಹಿಕ ಸಮಾರಂಭಗÙನ್ನು ಆಯೋಜಿಸುವಂತಿಲ್ಲ. ಅದರ ಮೇಲಿನ ನಿಷೇಧವನ್ನು ಮುಂದುವರಿಸಿದೆ. ಜತೆಗೆ ದೇಶದ ಜನತೆಯಲ್ಲಿ ಸಾಮಾಜಿಕ ಅಂತರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸರಕಾರ ಸ್ಪಷ್ಟವಾಗಿ ಸೂಚಿಸಿದೆ. ಈ ನಿಯಮಗಳನ್ನು ಯಾರೂ ಮೀರುವಂತಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ