ಬಹುತೇಕ ಕಡೆ ಜೀವ ಅಂಗೈಲಿ ಹಿಡಿದು ಓದುವ ಸ್ಥಿತಿ!

ಮುರಿದು ಬಿದ್ದ ಕಿಟಕಿಗಳು, ಮುಕ್ಕಾದ ಹೆಂಚುಗಳು 

Team Udayavani, Jun 9, 2022, 11:34 AM IST

8

ಬೈಲಹೊಂಗಲ: ಅಲ್ಲಲ್ಲಿ ಬಿರುಕು ಬಿಟ್ಟು ದುರಸ್ತಿಗೆ ಕಾದ ಗೋಡೆಗಳು, ಇಂದೋ, ನಾಳೆಯೋ ಬೀಳುವ ಹಂತದಲ್ಲಿ ಕೊಠಡಿಗಳು, ಮಳೆ ಬಂದರೆ ಸೋರುವ ಶಿಥಿಲಗೊಂಡ ಕೊಠಡಿಗಳು, ಮುರಿದು ಬಿದ್ದ ಕಿಟಕಿಗಳು, ಮುಕ್ಕಾದ ಹೆಂಚುಗಳು.

ತಾಲೂಕಿನಲ್ಲಿರುವ ಬಹುತೇಕ ಸರಕಾರಿ ಪ್ರಾಥಮಿಕ ಶಾಲೆಗಳ ದುಸ್ಥಿತಿ ಇದು. ತಾಲೂಕಿನಲ್ಲಿ ಸರ್ಕಾರಿ ಶಾಲಾ ಕಟ್ಟಡಗಳ ದುಸ್ಥಿತಿ ಹೇಳತೀರದಾಗಿದ್ದು, ಎಷ್ಟೋ ಶಾಲೆಗಳು ದುರಸ್ತಿಗೆ ಕಾದಿವೆ. ಎಷ್ಟೋ ಶಾಲೆಗಳು ದುರಸ್ತಿ ಮಾಡಲಾಗದ ಸ್ಥಿತಿಗೆ ತಲುಪಿವೆ. ಇಂಥ ಶಾಲೆಯಲ್ಲಿಯೇ ಶಿಕ್ಷಕರು ಪಾಠ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಯಾವ ಕ್ಷಣದಲ್ಲಾದರೂ ಬೀಳುವ ಹಂತದಲ್ಲಿರುವ ಶಾಲೆಗಳಿಗೆ ಪೋಷಕರು ಮಕ್ಕಳನ್ನು ಕಳುಹಿಸಲು ಹೆದರುತ್ತಿದ್ದಾರೆ. ಮಕ್ಕಳು ಅಂಗೈಯಲ್ಲಿ ಜೀವ ಹಿಡಿದುಕೊಂಡು ಓದುವ ದುಸ್ಥಿತಿ ನಿರ್ಮಾಣವಾಗಿದೆ.

ಬೈಲಹೊಂಗಲ ತಾಲೂಕಿನಲ್ಲಿ ಮೇ ತಿಂಗಳಲ್ಲಿ ಸುರಿದ ಭಾರೀ ಮಳೆಗೆ 21 ದೊಡ್ಡ ಪ್ರಮಾಣ ಮತ್ತು 48 ಸಣ್ಣ ಪ್ರಮಾಣದಲ್ಲಿ ಶಾಲಾ ಕೊಠಡಿಗಳು ಕುಸಿದಿವೆ. ಒಟ್ಟಾರೆ ತಾಲೂಕಿನಲ್ಲಿ ತುರ್ತಾಗಿ 495 ಶಾಲಾ ಕೊಠಡಿ ದುರಸ್ತಿ ಮಾಡಬೇಕಿದೆ.

ತಾಲೂಕಿನಲ್ಲಿ ಶಾಲೆಗೆ ಹಾನಿ: ಬೈಲಹೊಂಗಲ ತಾಲೂಕಿನಲ್ಲಿ 173 ಪ್ರಾಥಮಿಕ, ಪ್ರೌಢಶಾಲೆಗಳಿದ್ದು, 778 ಪ್ರಾಥಮಿಕ, 228 ಪ್ರೌಢಶಾಲೆ ಶಿಕ್ಷಕರಿದ್ದಾರೆ. ಒಟ್ಟು 23 ಮಾದರಿ ಶಾಲೆಗಳಿದ್ದು, 82 ಶಿಕ್ಷಕರನ್ನು ಅತಿಥಿ ಶಿಕ್ಷಕರನ್ನಾಗಿ ತೆಗೆದುಕೊಂಡಿದ್ದರೂ 195 ಶಿಕ್ಷಕರ ಹುದ್ದೆ ಖಾಲಿ ಇವೆ.

ಸವಟಗಿಯಲ್ಲಿ ಬಿದ್ದ ಮೂರು ಕೊಠಡಿ: ಕೆಲ ದಿನಗಳ ಹಿಂದೆ ಸುರಿದ ಮಳೆಗೆ ಸವಟಗಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯ ಮೂರು ಕೊಠಡಿ ಗೋಡೆಗಳು ಬಿದ್ದಿವೆ. ಇತರೆ ಕೊಠಡಿಗಳೂ ಸಣ್ಣ ಮಳೆಯಾದರೂ ಸೋರುತ್ತದೆ. ಇಲ್ಲಿಯ ಛಾವಣಿ ಒಳಮೈ ಉದುರಿ ಬೀಳುತ್ತಿದೆ. ಕೊಠಡಿಗಳ ಕಿಟಕಿಗಳು ಮುರಿದು ಹೋಗಿವೆ. ಹೆಂಚುಗಳು ಮುಕ್ಕಾಗಿವೆ. ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯಾರ್ಥಿಗಳು, ಅಡುಗೆಯವರು, ಶಿಕ್ಷಕರು ಕಟ್ಟಡ ಕುಸಿಯುವ ಭೀತಿ ಎದುರಿಸುತ್ತಿದ್ದಾರೆ. ಕೋಣೆಯ ಯಾವುದಾದರೊಂದು ಮೂಲೆಯಲ್ಲಿ ಮಕ್ಕಳು ಪುಸ್ತಕ, ಚೀಲ ಹಿಡಿದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ.

ಸೋಮನಟ್ಟಿ ಶಾಲೆಗೆ ಗ್ರಹಣ: ಸೋಮನಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅವ್ಯವಸ್ಥೆ ತಾಣವಾಗಿದೆ. ಇತ್ತೀಚೆಗೆ ಶಾಲಾ ಕೊಠಡಿ ನಿರ್ಮಿಸಲಾಗಿದ್ದು ಉತ್ತಮವಾಗಿಲ್ಲ. ಬಾಗಿಲು ನಿರ್ಮಿಸಿಲ್ಲ. ಸುಣ್ಣ-ಬಣ್ಣ ಬಳಿದಿಲ್ಲ. ಶಾಲೆ ಮುಂದೆ ಶೌಚಾಲಯ ನಿರ್ಮಿಸಿದ್ದರೂ ಅದಕ್ಕೆ ಬಾಗಿಲು ಇಲ್ಲ. ಇಲ್ಲಿ ನೀರಿನ ಸೌಲಭ್ಯ ಕಲ್ಪಿಸಿಲ್ಲ. ಶಾಲೆ ಮುಂದೆಯೇ ಗಟಾರು ಇರುವುದರಿಂದ ಗಬ್ಬು ವಾಸನೆ ಬರುತ್ತದೆ. ಗಟಾರು ನಿರ್ಮಾಣ ಕಾರ್ಯ ನಡೆಸಿ ಅದಕ್ಕೆ ಮೇಲ್ಗಡೆ ಕಲ್ಲು ಹಾಕಿ ಮುಚ್ಚಿದರೆ ಅನುಕೂಲವಾಗುತ್ತದೆ. ಶಾಲೆ ಮುಂಭಾಗದಲ್ಲಿ ಗೇಟ್‌ ಇಲ್ಲ. ರಜೆ ಅವಧಿ ಯಲ್ಲಿ ಅರ್ಧಕ್ಕೆ ನಿಲ್ಲಿಸಿದ ಕೊಠಡಿ ನಿರ್ಮಾಣ ಮಾಡುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.

ಪ್ರತಿ ವರ್ಷವೂ ಶಿಕ್ಷಣ ಇಲಾಖೆ ಅಧಿ ಕಾರಿಗಳ ಗಮನಕ್ಕೆ ಸಮಸ್ಯೆ ತಂದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಶಿಥಿಲಗೊಂಡ ಶಾಲಾ ಕಟ್ಟಡ ನೆಲಸಮಗೊಳಿಸಿ ಪ್ರಸ್ತುತ ಇರುವ ಜಾಗದಲ್ಲಿ ನೂತನ ಕಟ್ಟಡ ನಿರ್ಮಿಸಿದ್ದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುತ್ತದೆ ಎನ್ನುವುದು ನಾಗರಿಕರ ಅಭಿಪ್ರಾಯ.

ಕೊರೊನಾದಿಂದ ಮಕ್ಕಳು ಕಲಿಕೆ ಕೊರತೆ ಅನುಭವಿಸಿರುವುದನ್ನು ಮನಗಂಡು ಕಲಿಕಾ ಚೇತರಿಕೆ ಕಾರ್ಯಕ್ರಮದಡಿ ಯೋಜನೆ ರೂಪಿಸಲಾಗಿದೆ. ಮಳೆಬಿಲ್ಲು ಕಾರ್ಯಕ್ರಮದಡಿ ಮಕ್ಕಳಲ್ಲಿ ಕಲೆ, ವಿಜ್ಞಾನ, ಹಾಡು ಇತ್ಯಾದಿ ಪ್ರತಿಭೆ ಅವಕಾಶ ಕಲ್ಪಿಸಿದೆ. ತಾಲೂಕಿನಲ್ಲಿ ದುರಸ್ತಿಯಲ್ಲಿರುವ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.  -ಎ.ಎನ್‌. ಪ್ಯಾಟಿ, ಕ್ಷೇತ್ರ ಶಿಕ್ಷಣಾಧಿಕಾರಿ, ಬೈಲಹೊಂಗಲ.

ಮಳೆಗೆ ಬಿದ್ದಿರುವ ಶಾಲಾ ಕೊಠಡಿಗಳ ದುರಸ್ತಿ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. -ಮಹಾಂತೇಶ ಕೌಜಲಗಿ, ಶಾಸಕರು, ಬೈಲಹೊಂಗಲ

  • ಅಲ್ಲಲ್ಲಿ ಬಿರುಕು ಬಿಟ್ಟು ದುರಸ್ತಿಗೆ ಕಾದ ಗೋಡೆಗಳು
  • ಮಳೆ ಬಂದರೆ ಸೋರುವ ಶಿಥಿಲಗೊಂಡ ಶಾಲೆಗಳು
  • ಇಂದೋ-ನಾಳೆಯೋ ಬೀಳುವ ಹಂತದಲ್ಲಿ ಕೊಠಡಿಗಳು

-ಸಿ.ವೈ. ಮೆಣಶಿನಕಾಯಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.