ಊಟ ಹಂಚುವಂತಿಲ್ಲ; ಮಾಸ್ಕ್ ತೆಗೆಯುವಂತಿಲ್ಲ; ದಿಲ್ಲಿಯ ಶಾಲೆಗಳಲ್ಲಿ ಮತ್ತೆ ಕಠಿನ ನಿಯಮ


Team Udayavani, Apr 23, 2022, 7:15 AM IST

thumb 4

ಹೊಸದಿಲ್ಲಿ: “ಕೊರೊನಾ ಸೋಂಕು ಇದ್ದರೆ, ಮಕ್ಕಳನ್ನು ಶಾಲೆಗೆ ಕಳುಹಿ­ಸಬೇಡಿ, ಶಾಲೆಯಲ್ಲಿ ಮಕ್ಕಳು ಊಟ ಹಂಚಿ­ಕೊಳ್ಳುವಂತಿಲ್ಲ…’ ಹೀಗೆಂದು ಶಾಲೆಗಳಲ್ಲಿ ಕೊರೊನಾ ಸಂಬಂಧ ಕಠಿನ ನಿಯಮಗಳನ್ನು ದಿಲ್ಲಿ ಸರಕಾರ ಮತ್ತೊಮ್ಮೆ ಜಾರಿಗೊಳಿಸಿದೆ.

ಮಕ್ಕ­ಳಲ್ಲಿ ಅಥವಾ ಮನೆಯ ಸದಸ್ಯರಲ್ಲಿ ಕೊರೊನಾ ಲಕ್ಷಣವಿದ್ದರೆ ಹೆತ್ತವರು ಮಕ್ಕಳನ್ನು ಶಾಲೆಗೆ ಕಳುಹಿಸ­ಬಾರದು. ಯಾವುದೇ ವಿದ್ಯಾರ್ಥಿ ಅಥವಾ ಶಿಕ್ಷಕರಲ್ಲಿ ಸೋಂಕಿನ ಲಕ್ಷಣ ಕಂಡುಬಂದರೆ ಕೂಡಲೇ ಅದನ್ನು ಶಾಲೆಯ ಮೇಲಧಿಕಾರಿ ಗಮನಕ್ಕೆ ತಂದು ಕ್ವಾರಂಟೈನ್‌ ಮಾಡಲು ಸೂಚಿಸಲಾಗಿದೆ. ಅದಕ್ಕಾಗಿ ಶಾಲೆ­ಯಲ್ಲಿ ಕ್ವಾರಂಟೈನ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಹೊಂದಬೇಕು ಎಂದು ಸೂಚಿಸಲಾಗಿದೆ.

ಜತೆಗೆ ಶಾಲೆಯ ಅಧ್ಯಾಪಕರು ಮತ್ತು ಸಿಬಂದಿ ಪ್ರತೀ ದಿನ ವಿದ್ಯಾರ್ಥಿಗಳ ಬಳಿ, ಕೊರೊನಾ ಲಕ್ಷಣ ಇದೆಯೇ ಎಂದು ಪ್ರಶ್ನಿಸಬೇಕು. ಶಾಲೆಯ ಪ್ರವೇಶಕ್ಕೆ ಮುನ್ನವೇ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಕಡ್ಡಾಯವಾಗಿ ಥರ್ಮಲ್‌ ಸ್ಕ್ಯಾನಿಂಗ್‌ ನಡೆಸಲೂ ಆದೇಶಿ­ಸಲಾಗಿದೆ.

1,042 ಕೇಸು: ಹೊಸದಿಲ್ಲಿಯಲ್ಲಿ ಶುಕ್ರ­ವಾರ 1,042 ಹೊಸ ಕೇಸುಗಳು ದೃಢಪಟ್ಟಿವೆ ಮತ್ತು ಇಬ್ಬರು ಅಸುನೀಗಿದ್ದಾರೆ. ಪಾಸಿಟಿ­ವಿಟಿ ಪ್ರಮಾಣ ಶೇ.4.64 ಆಗಿದೆ. ಜತೆಗೆ ಮಾಸ್ಕ್ ಧರಿಸುವ ನಿಯಮ ಕೂಡ ಜಾರಿಯಾಗಿದೆ. ತಪ್ಪಿದಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ. ತಮಿಳುನಾಡಿನಲ್ಲೂ ಇದೇ ನಿಯಮ ಜಾರಿ ಮಾಡಲಾಗಿದೆ.

ಏರಿಕೆ: ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ 2,451 ಕೊರೊನಾ ಪ್ರಕರಣ ದೃಢವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ, 14,241ಕ್ಕೆ ಏರಿಕೆಯಾಗಿದೆ. 54 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಚೀನದ ಶಾಂಘೈಯಲ್ಲಿ ಲಾಕ್‌ಡೌನ್‌ 26ರ ವರೆಗೆ ವಿಸ್ತರಿಸಲಾಗಿದೆ. ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಕೊವಿಶೀಲ್ಡ್‌ ಉತ್ಪಾದನೆ ಸ್ಥಗಿತ
ಭಾರತದ ಅತಿ ದೊಡ್ಡ ಲಸಿಕೆ ಉತ್ಪಾದನ ಕೇಂದ್ರವಾಗಿರುವ ಸೀರಂ ಇನ್‌ಸ್ಟಿಟ್ಯೂಟ್‌ “ಕೊವಿಶೀಲ್ಡ್‌’ ಲಸಿಕೆಯ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ ಎಂದು ಅದರ ಮುಖ್ಯಸ್ಥ ಆದಾರ್‌ ಪೂನಾವಾಲ ತಿಳಿಸಿದ್ದಾರೆ. ಡಿಸೆಂಬರ್‌ ವೇಳೆಗೆ ನಮ್ಮ ಬಳಿ 200 ಮಿಲಿಯನ್‌ ಡೋಸ್‌ ಲಸಿಕೆಯಿತ್ತು. ಆದರೆ ಕೊಳ್ಳುವವರು ಇರಲಿಲ್ಲ. ಹಾಗಾಗಿ ಉಚಿತವಾಗಿ ಲಸಿಕೆ ಹಂಚುವುದಾಗಿ ಘೋಷಿಸಿದೆವು. ಲಸಿಕೆಗೆ ಬೇಡಿಕೆ ಕಡಿಮೆಯಾದ ಹಿನ್ನೆಲೆ ಉತ್ಪಾದನೆಯನ್ನು ಸ್ಥಗಿತಗೊಳಿಸದೆ ಬೇರೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.