ಮಾನವ ಹಕ್ಕು ಪ್ರತಿಷ್ಠಾನದ ವ್ಯಾಪ್ತಿ ಗದಗಕ್ಕೆ:ಡಾ| ಶಾನುಭಾಗ್‌ ಜತೆ ಎಚ್‌.ಕೆ.ಪಾಟೀಲ್‌ ಚರ್ಚೆ


Team Udayavani, Aug 6, 2023, 12:21 AM IST

h k patil

ಉಡುಪಿ: ಉಡುಪಿ ಮಾನವ ಹಕ್ಕುಗಳ ಸಂರಕ್ಷಣ ಪ್ರತಿಷ್ಠಾನದ ಸೇವಾ ಕಾರ್ಯವನ್ನು ತಮ್ಮ ಜಿಲ್ಲೆ(ಗದಗ)ಯಲ್ಲೂ ಅಳವಡಿಸಿ ಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಗುರುವಾರ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ರವೀಂದ್ರನಾಥ ಶಾನುಭಾಗ್‌ ಅವರೊಂದಿಗೆ 2 ಗಂಟೆಗಳ ಕಾಲ ವಿವಿಧ ವಿಷಯಗಳ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿದರು.

ಡಾ| ಶಾನುಭಾಗ್‌ ಅವರು ಪಿಪಿಟಿ ಮೂಲಕ ತಾವು ಈವರೆಗೆ ನ್ಯಾಯಾಲಯದ ಮೆಟ್ಟಿಲೇರದೇ ಹಾಗೂ ನ್ಯಾಯಾಲಯಗಳ ಮೂಲಕ ಬಗೆಹರಿಸಿದ ಹಲವು ಪ್ರಮುಖ ಪ್ರಕರಣಗಳ ಸವಿಸ್ತಾರವಾದ ಮಾಹಿತಿ ಯನ್ನು ಸಚಿವರಿಗೆ ಒದಗಿಸಿದರು.

ರಾಷ್ಟ್ರೀಯ ಮತ್ತು ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತಿರುವ ಮಾನವ ಕಳ್ಳಸಾಗಾಟ ಮತ್ತು ಮಕ್ಕಳು ಹಾಗೂ ಯುವತಿಯರ ಮಾರಾಟ ಪ್ರಕರಣಗಳು, ವಿದೇಶದಲ್ಲಿ ನಡೆದ ಘಟನೆಗಳಿಗೆ ಪರಿಹಾರ ಕಂಡು ಹುಡು ಕುವಾಗ ಎಂಬೆಸಿಗಳು ಸರಿಯಾಗಿ ಸ್ಪಂದಿಸದೇ ಇರುವುದು ಸೇರಿದಂತೆ ತಮ್ಮ ಪ್ರತಿಷ್ಠಾನದ ಮೂಲಕ ನಡೆಯುತ್ತಿರುವ ಸೇವಾ ಕಾರ್ಯದ ಸಂಪೂರ್ಣ ಮಾಹಿತಿ ಒದಗಿಸಿದರು.

ಸಾಮಾಜಿಕ ಜಾಲತಾಣದಲ್ಲೂ ಮಾಹಿತಿ ಹಂಚಿಕೊಳ್ಳುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಇನ್ನಷ್ಟು ಪ್ರಕ ರಣಗಳು ನಮ್ಮಲ್ಲಿ ಬರುತ್ತಿವೆ. ಆದಷ್ಟು ಜನರಿಗೆ ಸಹಾಯ ಮಾಡುತ್ತಿದ್ದೇವೆ. ದೇಶ ವಿದೇಶಗಳಲ್ಲೂ ನಮ್ಮ ಸ್ವಯಂ ಸೇವಕರು ಕಾರ್ಯ ನಿರ್ವ ಹಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗಳಲ್ಲೂ ನಮ್ಮ ಪ್ರಕರಣದ ವಾದ ಮಾಡಲು ವಕೀಲರಿದ್ದಾರೆ. ಅನೇಕ ಸಮಸ್ಯೆಯನ್ನು ನ್ಯಾಯಾಲಯದ ಮೆಟ್ಟಿಲು ಏರದೆಯೇ ಬಗೆ ಹರಿಸಿದ್ದೇವೆ. ಮಾನವ ಹಕ್ಕುಗಳ ಸಂರಕ್ಷಣೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿ ಣದ್ದೇವೆ ಎಂಬ ವಿವರ ನೀಡಿದರು.

ಪ್ರತೀ ಹಳ್ಳಿ ಅಥವಾ ಗ್ರಾ.ಪಂ.ಗಳಲ್ಲಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಅಥವಾ ಸ್ವಯಂಸೇವಕರು ಇಂತಹ ಕಾರ್ಯಗಳಿಗೆ ಸಿಕ್ಕಾಗ ಗ್ರಾಮೀಣ ಭಾಗದಲ್ಲಿನ ಸಮಸ್ಯೆ ಬಗೆ ಹರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಚಿವ ಎಚ್‌.ಕೆ. ಪಾಟೀಲ್‌ ಮಾತನಾಡಿ, ಪ್ರತಿಷ್ಠಾನದಿಂದ ನಡೆ ಯುವ ಕಾರ್ಯವು ನಮ್ಮ ಜಿಲ್ಲೆ ಯಲ್ಲೂ ಜನರಿಗೆ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಕೆಲವು ಯೋಜನೆ ರೂಪಿಸಿಕೊಳ್ಳುತ್ತಿದ್ದೇವೆ. ಅದರ ಭಾಗವಾಗಿ ಡಾ| ರವೀಂದ್ರನಾಥ ಶಾನುಭಾಗ್‌ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ಯಾವೆಲ್ಲ ರೀತಿಯಲ್ಲಿ ಅನುಷ್ಠಾನ ಮಾಡಬಹುದು ಎಂಬು  ದನ್ನು ಯೋಚಿಸಲಿದ್ದೇವೆ ಎಂದರು.

ಗದಜ ಜಿಲ್ಲೆಯ ಬಾರ್‌ ಕೌನ್ಸಿಲ್‌ ಸದಸ್ಯರಾದ ಎಸ್‌.ಕೆ. ಪಾಟೀಲ್‌, ಹಿರಿಯ ನ್ಯಾಯವಾದಿ ನದಾಫ್ ಮಾಹಿತಿ ಸಂಗ್ರಹಿಸಿದರು.
ಕಾನೂನು ಕಾಲೇಜಿನ ನಿರ್ದೇಶಕಿ ಡಾ| ನಿರ್ಮಲಾ ಕುಮಾರಿ, ಕಾನೂನು ವಿಶ್ವವಿದ್ಯಾನಿಲಯದ ಡೀನ್‌ ಡಾ| ಚಿದಾನಂದ ಪಾಟೀಲ್‌, ಧಾರವಾಡದ ನ್ಯಾಯವಾದಿ ಬಸವ ಪ್ರಭು, ನಿವೃತ್ತ ತಹಶೀಲ್ದಾರ್‌ ಮುರಳೀಧರ್‌, ಪ್ರತಿಷ್ಠಾನದ ಸದಸ್ಯರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಮುಖಂಡ ಎಂ.ಎ. ಗಫ‌ೂರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.