ಇಂದಿನಿಂದ ದ್ವಿತೀಯ ಸುತ್ತಿನ ರಣಜಿ: ಕರ್ನಾಟಕ-ಜಮ್ಮು ಕಾಶ್ಮೀರ ಮುಖಾಮುಖಿ


Team Udayavani, Feb 24, 2022, 5:30 AM IST

ಇಂದಿನಿಂದ ದ್ವಿತೀಯ ಸುತ್ತಿನ ರಣಜಿ: ಕರ್ನಾಟಕ-ಜಮ್ಮು ಕಾಶ್ಮೀರ ಮುಖಾಮುಖಿ

ಚೆನ್ನೈ: ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ದ್ವಿತೀಯ ಸುತ್ತಿನ ಲೀಗ್‌ ಮುಖಾಮುಖಿ ಗುರುವಾರ ಮೊದಲ್ಗೊಳ್ಳಲಿದೆ.

ಎಲೈಟ್‌ “ಸಿ’ ವಿಭಾಗದಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ಎದುರಾಗಲಿವೆ. “ಡಿ’ ವಿಭಾಗದಲ್ಲಿ ಮುಂಬಯಿ ಮತ್ತು ಗೋವಾ ಮುಖಾಮುಖಿಯಾಗಲಿವೆ.

ಕರ್ನಾಟಕ ಮೊದಲ ಪಂದ್ಯದಲ್ಲಿ ರೈಲ್ವೇಸ್‌ ವಿರುದ್ಧ ಇನ್ನಿಂಗ್ಸ್‌ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಇನ್ನೊಂದು ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ದುರ್ಬಲ ಪುದುಚೇರಿಯನ್ನು 8 ವಿಕೆಟ್‌ಗಳಿಂದ ಮಣಿಸಿತ್ತು. ಈ ಜಯದಿಂದಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಕಾಶ್ಮೀರವನ್ನು ಇಲ್ಲಿಂದ ಕೆಳಗಿಳಿಸಿ ಈ ಸ್ಥಾನವನ್ನು ಆಕ್ರಮಿಸಿಕೊಳ್ಳುವುದು ಮನೀಷ್‌ ಪಾಂಡೆ ಬಳಗದ ಗುರಿ.

ಚೆನ್ನೈಯಲ್ಲೇ ನಡೆದ ರೈಲ್ವೇಸ್‌ ಎದುರಿನ ಪಂದ್ಯದಲ್ಲಿ ಕರ್ನಾಟಕದ ಬ್ಯಾಟಿಂಗ್‌ ಭರ್ಜರಿ ಯಶಸ್ಸು ಕಂಡಿತ್ತು. ಮನೀಷ್‌ ಪಾಂಡೆ ಕಪ್ತಾನನ ಆಟವಾಡಿ 156 ರನ್‌ ಬಾರಿಸಿದರೆ, ಕೆ. ಸಿದ್ಧಾರ್ಥ್ 146 ರನ್‌ ಕೊಡುಗೆ ಸಲ್ಲಿಸಿದ್ದರು. ಕೃಷ್ಣಪ್ಪ ಗೌತಮ್‌ ಆಲ್‌ರೌಂಡ್‌ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. ಇದೇ ಲಯದಲ್ಲಿ ಸಾಗಿದರೆ ಮೇಲುಗೈ ಖಂಡಿತ ಅಸಾಧ್ಯವಲ್ಲ.

ಜಮ್ಮು ಮತ್ತು ಕಾಶ್ಮೀರ ಕೂಡ ಬ್ಯಾಟಿಂಗ್‌ ಯಶಸ್ಸು ಕಂಡಿತ್ತು. ಮೊದಲ ಸರದಿಯಲ್ಲಿ ನಾಯಕ ಇಯಾನ್‌ ದೇವ್‌ ಸಿಂಗ್‌ (0) ಹೊರತುಪಡಿಸಿ ಅಗ್ರ ಕ್ರಮಾಂಕದ ಆಟಗಾರರೆಲ್ಲ ರನ್‌ ಪ್ರವಾಹ ಹರಿಸಿದ್ದರು. ಅಬ್ದುಲ್‌ ಸಮದ್‌ ಅವರ ಶತಕ (103) ಇನ್ನಿಂಗ್ಸಿನ ಆಕರ್ಷಣೆಯಾಗಿತ್ತು. ಓಪನರ್‌ಗಳಾದ ಕಮ್ರಾನ್‌ ಇಕ್ಬಾಲ್‌ (96), ಜತಿನ್‌ ವಾಧ್ವಾನ್‌ (69) 127 ರನ್‌ ಜತೆಯಾಟ ನಿಭಾಯಿಸಿದ್ದರು. ಶುಭಂ ಪುಂಡಿರ್‌ 51 ರನ್‌ ಕೊಡುಗೆ ಸಲ್ಲಿಸಿದ್ದರು. ಇವರೆಲ್ಲ ಮತ್ತೆ ಕ್ರೀಸ್‌ ಆಕ್ರಮಿಸದಂತೆ ನೋಡಿಕೊಳ್ಳುವುದು ಕರ್ನಾಟಕದ ಬೌಲರ್ ಜವಾಬ್ದಾರಿ.

ರಹಾನೆ ಮೇಲೆ ಕಣ್ಣು
ಅಹ್ಮದಾಬಾದ್‌: ಇದೇ ವೇಳೆ “ರಣಜಿ ಕಿಂಗ್‌’ ಮುಂಬಯಿ ತಂಡ ಗೋವಾವನ್ನು ಎದುರಿಸಲಿದೆ. ಸೌರಾಷ್ಟ್ರ ಎದುರಿನ ಮೊದಲ ಪಂದ್ಯದಲ್ಲಿ ಫಾಲೋಆನ್‌ ಹೇರಿಯೂ ಕೊನೆಯ ಒಂದು ವಿಕೆಟ್‌ ಉರುಳಿಸಲಾಗದೆ ಗೆಲುವಿನಿಂದ ವಂಚಿತವಾಗಿತ್ತು.

ಸೌರಾಷ್ಟ್ರ ವಿರುದ್ಧ ಸರ್ಫರಾಜ್ ಖಾನ್
ಅಮೋಘ 275 ರನ್‌ ಬಾರಿಸಿದ್ದರು. ಅಜಿಂಕ್ಯ ರಹಾನೆ 129 ರನ್‌ ಹೊಡೆದ ಬೆನ್ನಲ್ಲೇ ಶ್ರೀಲಂಕಾ ಎದುರಿನ ಟೆಸ್ಟ್‌ ಸರಣಿಯಲ್ಲಿ ಸ್ಥಾನ ಕಳೆದುಕೊಂಡ ಸಂಕಟಕ್ಕೆ ಸಿಲುಕಿದ್ದಾರೆ. ಗೋವಾ ವಿರುದ್ಧವೂ ಅವರು ಇಂಥದೇ ಬ್ಯಾಟಿಂಗ್‌ ಸಾಹಸ ತೋರ್ಪಡಿಸಬೇಕಿದೆ. ನಾಯಕ ಪೃಥ್ವಿ ಶಾ ಫಾರ್ಮ್ ಕಂಡುಕೊಳ್ಳಬೇಕಾದ ಅಗತ್ಯವಿದೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.