ಭದ್ರತಾ ಉಪಕರಣ ಮಳಿಗೆ: ಮುನ್ನೆಚ್ಚರಿಕೆಗಳೇನು?

ಬದುಕು ಬದಲಾಗಿದೆ ನಾವೂ ಬದಲಾಗೋಣ

Team Udayavani, Jun 13, 2020, 5:44 AM IST

ಭದ್ರತಾ ಉಪಕರಣ ಮಳಿಗೆ: ಮುನ್ನೆಚ್ಚರಿಕೆಗಳೇನು?

ಜನಜೀವನ ಹಿಂದಿನಂತಿಲ್ಲ. ಅದಕ್ಕೆ ತಕ್ಕಂತೆ ಕೆಲವೊಂದು ಅಗತ್ಯತೆಗಳೂ ಹೆಚ್ಚಾಗಿವೆ.ಮಳೆಗಾಲ ಬೇರೆ ಆರಂಭಗೊಂಡಿರುವುದರಿಂದ ನಮ್ಮ ಮನೆ, ಸಂಸ್ಥೆ, ಕೈಗಾರಿಕೆಗಳಲ್ಲಿರುವ ಅಲರಾಂನಿಂದ ಸಿಸಿ ಕೆಮರಾ ವರೆಗಿನ ವಿವಿಧ ರೀತಿಯ ಭದ್ರತಾ ಉಪಕರಣಗಳ ಪರಿಶೀಲನೆ, ಹೊಸತಾಗಿ ಅಳವಡಿಕೆಯತ್ತ ಗಮನ ಹರಿಸುವುದು ಅಗತ್ಯವಾಗಿದೆ. ಕೋವಿಡ್-19 ಕಾಣಿಸಿದ ಬಳಿಕ ಹೆಚ್ಚಿನ ಅಂಗಡಿ, ಸಾರ್ವಜನಿಕ ಪ್ರದೇಶಗಳಲ್ಲಿ, ಸಂಸ್ಥೆಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಎಂಬುದು ಕಡ್ಡಾಯವಾಗಿದೆ. ಅದರಲ್ಲಿಯೂ ಈಗ ಸಾಕಷ್ಟು ಸುಧಾರಣೆಗಳಾಗಿವೆ.ಸ್ವಯಂಚಾಲಿತ ಥರ್ಮಲ್‌ ಸ್ಕ್ರೀನಿಂಗ್‌ ಸಹಿತ ವೀಡಿಯೋ ದಾಖಲೀಕರಣ ವ್ಯವಸ್ಥೆಯೂ ಬಂದಿದೆ. ಇಂತಹ ಉಪಕರಣಗಳ ಖರೀದಿಗಾಗಿ ಭದ್ರತಾ ಸಾಮಗ್ರಿಗಳ ಮಳಿಗೆಗಳಿಗೆ ಹೋಗುವಾಗ ನಾವು ಯಾವ ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಲಾಕ್‌ಡೌನ್‌ ತೆರವು ಆಗುತ್ತಿದ್ದಂತೆ ಮಳೆಗಾಲವೂ ಆರಂಭಗೊಂಡಿದೆ. ಈ ಸಮಯದಲ್ಲಿ ಸಂಸ್ಥೆ, ಮನೆಗಳಲ್ಲಿರುವ ಭದ್ರತಾ ಸಲಕರಣೆಗಳ ದುರಸ್ತಿ ಅಥವಾ ಹೊಸತಾಗಿ ಜೋಡಿಸುವ ಕಾರ್ಯವೂ ನಡೆಯುತ್ತಿದೆ. ಇಂತಹ ವಸ್ತುಗಳ ಖರೀದಿ ಸಂದರ್ಭ ಏನೇನು ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲಿದೆ ಮಾಹಿತಿ.

ಅಂಗಡಿಗಳಿಗೆ ಬರುವ ಗ್ರಾಹಕರು ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹರಿಸಬೇಕು. ಅದಕ್ಕೆಂದು ಅಂಗಡಿಗಳ ಒಳಗೆ ಆಸನಗಳನ್ನು ನಿರ್ದಿಷ್ಟ ಅಂತರದಲ್ಲಿ ಇರಿಸಲಾಗಿದೆ. ಸ್ಯಾನಿಟೈಸರ್‌ ಬಳಸುವುದು ಎಲ್ಲರಿಗೂ ಕಡ್ಡಾಯ ಮಾಡಲಾಗಿದೆ.

ಇಂಥ ಹೆಚ್ಚಿನ ಮಳಿಗೆಗಳಲ್ಲಿ ಸ್ವಯಂ ಚಾಲಿತ ಥರ್ಮಲ್‌ ಸ್ಕ್ರೀನಿಂಗ್‌ ಸಾಧನ ಇದ್ದು, ಇದು ವ್ಯಕ್ತಿಯ ದೇಹದ ಉಷ್ಣಾಂಶವನ್ನು ನಿಖರವಾಗಿ ಗ್ರಹಿಸುವುದಲ್ಲದೆ ಚಿತ್ರವನ್ನೂ ಸಂಗ್ರಹಿಸುತ್ತದೆ. ಇದರಿಂದ ತಾಪಮಾನದ ಜತೆ ಅಗತ್ಯವಾದಲ್ಲಿ ಮುಂದಕ್ಕೆ ವ್ಯಕ್ತಿಯ ಗುರುತನ್ನೂ ಪತ್ತೆ ಹಚ್ಚಲು ಸಾಧ್ಯ.

ಗ್ರಾಹಕರು ತಮಗೆ ಬೇಕಾದ ವಸ್ತುಗಳ ಕುರಿತು ಫೋನ್‌ನಲ್ಲಿಯೇ ಮಾಹಿತಿ ಪಡೆಯಬಹುದಾಗಿದೆ. ಕೆಲವೆಡೆ ಮನೆ ಮತ್ತು ಸಂಸ್ಥೆಗಳಿಗೆ ಹೋಗಿ ಡೆಮೊ ನೀಡಲಾಗುತ್ತದೆ. ಇಂತಹ ಸಂದರ್ಭದಲ್ಲಿ ಮತ್ತು ಅದನ್ನು ಅಳವಡಿಸುವ ವೇಳೆ ಅವರೂ ಸರಕಾರದ ಮಾರ್ಗಸೂಚಿ ಪಾಲಿಸುವರು.

ಭದ್ರತಾ ಉಪಕರಣಗಳ ಅಂಗಡಿಗೆ ಕೂಡ ಹಿರಿಯರು ಮತ್ತು ಮಕ್ಕಳು ಹೋಗದಿರುವುದು ಉತ್ತಮ. ಹಿರಿಯರು ಅಗತ್ಯವೆನಿಸಿದರೆ ಫೋನ್‌ ಮೂಲಕ ವ್ಯವಹರಿಸಬಹುದು. ಜ್ವರ, ಕೆಮ್ಮು, ಶೀತ ಇತ್ಯಾದಿ ಲಕ್ಷಣಗಳಿರುವ ವ್ಯಕ್ತಿಗಳು ಬಂದಲ್ಲಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಿಕೊಂಡು ವ್ಯವಹರಿಸಲಾಗುತ್ತಿದೆ.

ಭದ್ರತಾ ಉಪಕರಣಗಳ ಮಳಿಗೆಗಳಲ್ಲಿ ಕೂಡ ಡಿಜಿಟಲ್‌ ಹಣ ವರ್ಗಾವಣೆ ವ್ಯವಸ್ಥೆ ಬಳಕೆಯಲ್ಲಿದೆ. ಗ್ರಾಹಕರು ಕೂಡ ಕ್ರೆಡಿಟ್‌ ಕಾರ್ಡ್‌, ಕ್ಯೂಆರ್‌ ಕೋಡ್‌ ಬಳಸಿ ಹಣ ಪಾವತಿಸುವಂತೆ ಸೂಚಿಸಲಾಗುತ್ತದೆ. ಇದರಿಂದ ಪರಸ್ಪರ ಸ್ಪರ್ಶ ಬಹುತೇಕ ಕಡಿಮೆಯಾಗುತ್ತದೆ.

ಸಿಸಿ ಕೆಮರಾ ಸಹಿತ ವಿವಿಧ ಉಪಕರಣ ಗುಣಮಟ್ಟ ಪರೀಕ್ಷಿಸುವ ವೇಳೆ ಬರಿ ಕೈಯಿಂದ ಮುಟ್ಟದೆ, ಗ್ಲೌಸ್‌ ಧರಿಸಿ ಪರಿಶೀಲಿಸಿ. ಚಯರ್‌, ಮೇಜು, ಗೋಡೆ, ಇತ್ಯಾದಿಗಳನ್ನು ಮುಟ್ಟದೆ ಇರುವುದು ಒಳ್ಳೆಯದು. ಒಂದು ವೇಳೆ ಸ್ಪರ್ಶಿಸಿದರೂ ಕೂಡಲೇ ಸ್ಯಾನಿಟೈಸರ್‌ ಬಳಸಿ.

ನಿಮಗೆ ಏನಾದರೂ ಸಂಶಯ, ಪ್ರಶ್ನೆಗಳಿದ್ದರೆ ಈ ನಂಬರಿಗೆ ವಾಟ್ಸಪ್‌ ಮಾಡಿ.
9148594259

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.