Independence Day:ಸೆಲ್ಫಿ ಪಾಯಿಂಟ್‌,1,800 ಸ್ಪೆಷಲ್‌ ಗೆಸ್ಟ್‌-ಸ್ವಾತಂತ್ರ್ಯ ದಿನದ ವಿಶೇಷ


Team Udayavani, Aug 14, 2023, 5:03 AM IST

inde

ನವದೆಹಲಿ: 1, 800 ವಿಶೇಷ ಅತಿಥಿಗಳು, 12 ಸೆಲ್ಫಿ ಪಾಯಿಂಟ್‌ಗಳು, ಅವರಿಗೆ ವಿಶೇಷ ಬಹುಮಾನ… 77ನೇ ಸ್ವಾತಂತ್ರ್ಯ ದಿನದ ವಿಶೇಷತೆಗಳು. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈಗ 77ನೇ ಸ್ವಾತಂತ್ರ್ಯ ದಿನದ ಸಿದ್ಧತೆಯ ಸಂಭ್ರಮ. ಆ.15ರಂದು ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆಯಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಲಿದ್ದಾರೆ.

ಬ್ರಿಟೀಷರ ದಾಸ್ಯ ಶೃಂಖಲೆಯಿಂದ ಮುಕ್ತಗೊಂಡ ಸಂಭ್ರಮದ ದಿನದಲ್ಲಿ ದೇಶದ ಸಾಮಾನ್ಯ ಜನರೂ ಭಾಗವಹಿಸುವಂತಾಗಲು ಕೇಂದ್ರ ಸರ್ಕಾರ “ಜನ ಭಾಗೀದಾರಿ’ ಎಂಬ ಶೀರ್ಷಿಕೆಯಡಿ 1,800 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ 17 ಸಾವಿರ ಇ- ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ.

ಯಾರೆಲ್ಲ ಭಾಗಿ?
660 ವೈಬ್ರಂಟ್‌ ವಿಲೇಜ್‌ನ 400 ಪಂಚಾಯಿತಿ ಅಧ್ಯಕ್ಷರು,
250 ರೈತ ಉತ್ಪಾದನಾ ಸಂಘಟನೆಯ ಫ‌ಲಾನುಭವಿಗಳು
ತಲಾ 50 ಫ‌ಲಾನುಭವಿಗಳು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಮತ್ತು ಪ್ರಧಾನಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆ
50 ಮಂದಿ- ಸೆಂಟ್ರಲ್‌ ವಿಸ್ತಾ ಯೋಜನೆಯಲ್ಲಿ ದುಡಿದ ಕಾರ್ಮಿಕರು
ತಲಾ 50 ಮಂದಿ- ಖಾದಿ ಕೆಲಸಗಾರರು, ಗಡಿ ಪ್ರದೇಶಗಳ ರಸ್ತೆ ಯೋಜನೆಗಳಲ್ಲಿ ಕೆಲಸ ಮಾಡಿದವರು, ಅಮೃತ ಸರೋವರ ಮತ್ತು ಹರ್‌ ಘರ್‌ ಜಲ ಯೋಜನೆ

12 ಸೆಲ್ಫಿ ಪಾಯಿಂಟ್‌ಗಳು
ರಾಷ್ಟ್ರ ರಾಜಧಾನಿಯ ವಿವಿಧ ಪ್ರದೇಶಗಳಲ್ಲಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಕೇಂದ್ರ ಸರ್ಕಾರದ ವಿಶೇಷ ಯೋಜನೆಗಳ ವಿವರಗಳನ್ನು ಹಾಕಲಾಗಿದೆ. ಆ.15ರಿಂದ 20ರ ನಡುವೆ ಈ ಕೇಂದ್ರಗಳಲ್ಲಿ ಸೆಲ್ಫಿ ತೆಗೆದುಕೊಂಡು ಮೈಗವ್‌ ಡಾಟ್‌ ಇನ್‌ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು. ಕೇಂದ್ರ ರಕ್ಷಣಾ ಸಚಿವಾಲಯದ ವತಿಯಿಂದ ಈ ಸ್ಪರ್ಧೆ ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ಜಯ ಗಳಿಸಿದ 12 ಮಂದಿಗೆ 10 ಸಾವಿರ ರೂ. ಬಹುಮಾನ ನೀಡಲಾಗುತ್ತದೆ.

ಚಟ್ನಿ ಮಾಡಿ ಕಳುಹಿಸಿದ ಮಹಿಳೆಗೆ ಆಹ್ವಾನ
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ 1,700 ಫ‌ಲಾನುಭವಿಗಳಿಗೆ ಸ್ವಾತಂತ್ರ್ಯ ದಿನದಲ್ಲಿ ಭಾಗವಹಿಸುವಂತೆ ಆಹ್ವಾನ ರವಾನೆಯಾಗಿದೆ. ಈ ಪೈಕಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಚಟ್ನಿ ಸಿದ್ಧಪಡಿಸಿ ಕಳುಹಿಸಿಕೊಟ್ಟಿದ್ದ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಭರತ್‌ ಸಿಂಗ್‌ ರುಟೆಲಾ ಎಂಬುವರ ಪತ್ನಿ ಸುನೀತಾ ರುಟೇಲಾ ಅವರಿಗೆ ಆಹ್ವಾನ ಲಭಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಗ್ರಾ.ಪಂ. ಅಧ್ಯಕ್ಷರಿಗೆ ಈ ಬಗ್ಗೆ ಪತ್ರ ಲಭಿಸಿತ್ತು. ಅದರಲ್ಲಿ ಪ್ರಧಾನಿಯವರಿಗೆ ನಾನು ನೀಡಿದ್ದ ಚಟ್ನಿಯ ಬಗ್ಗೆಯೂ ಪತ್ರದಲ್ಲಿ ಬರೆದಿದ್ದಾರೆ. ಸ್ವಾತಂತ್ರ್ಯ ದಿನಕ್ಕೆ ರಾಷ್ಟ್ರ ರಾಜಧಾನಿಗೆ ತೆರಳುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯಾಗಿದೆ’ ಎಂದು ಅವರು ಹೇಳಿದ್ದಾರೆ. ಸುಶೀಲಾ ರೈತ ಉತ್ಪಾದನಾ ಸಂಘಟನೆಯ ಫ‌ಲಾನುಭವಿಯೂ ಆಗಿದ್ದಾರೆ.

ದೇಶಿಯ ಗನ್‌ಗಳಿಂದಲೇ ಸೆಲ್ಯೂಟ್‌
ಪ್ರಸಕ್ತ ಸಾಲಿನ ಸ್ವಾತಂತ್ರ್ಯ ದಿನದಂದು 21 ಗನ್‌ಗಳಿಂದ ಸೆಲ್ಯೂಟ್‌ ನೀಡುವ ನಿಟ್ಟಿನಲ್ಲಿ ದೇಶಿಯವಾಗಿ ನಿರ್ಮಿಸಿದ 105 ಎಂಎಂ ಇಂಡಿಯನ್‌ ಫೀಲ್ಡ್‌ ಗನ್‌ಗಳನ್ನು ಬಳಕೆ ಮಾಡಲಾಗುತ್ತದೆ. ಈ ಮೂಲಕ ಆತ್ಮನಿರ್ಭರ ಭಾರತದ ಸಂಕಲ್ಪಕ್ಕೆ ಆದ್ಯತೆ ನೀಡಿದಂತಾಗಿದೆ. ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಸ್ವದೇಶೀಯವಾಗಿ ನಿರ್ಮಿಸಿದ ಅಡ್ವಾನ್ಸ್ಡ್‌ ಟೋವ್ಡ್‌ ಆರ್ಟಿಲಿಯರಿ ಗನ್‌ ಸಿಸ್ಟಮ್‌ (ಎಟಿಎಜಿ) ಅನ್ನು ಬಳಕೆ ಮಾಡಲಾಗಿತ್ತು. ಅದಕ್ಕಿಂತ ಮೊದಲು ಬ್ರಿಟಿಷ್‌ ಕಾಲದ ಅವಧಿಯ 25 ಪಾಂಡರ್‌ ಗನ್‌ಗಳ ಮೂಲಕ ಸೆಲ್ಯೂಟ್‌ ನೀಡಲಾಗುತ್ತಿತ್ತು.

ಇಂದು ರಾಷ್ಟ್ರಪತಿ ಭಾಷಣ
77ನೇ ಸ್ವಾತಂತ್ರ್ಯ ದಿನ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ರಾತ್ರಿ 7 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಅವರ ಭಾಷಣ ಪ್ರಸಾರವಾಗಲಿದೆ.

ತಿರಂಗಾವೇ ಪ್ರೊಫೈಲ್‌
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ತಿರಂಗಾ ಅಭಿಯಾನ ಪ್ರಯುಕ್ತ ಎಲ್ಲರೂ ಜಾಲತಾಣಗಳಲ್ಲಿ ರಾಷ್ಟ್ರ ಧ್ವಜವನ್ನು ತಮ್ಮ ಪ್ರೊಫೈಲ್‌ ಪಿಕ್ಚರ್‌ ಆಗಿ ಬದಲಿಸಿಕೊಂಡಿದ್ದಾರೆ. ದೇಶವಾಸಿಗಳೂ ಇದೇ ಕ್ರಮ ಅನುಸರಿಸಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.