ಸೇನಾಪುರ “ಗೂಡ್ಸ್‌’ ರೈಲು ನಿಲ್ದಾಣ ಪ್ರಸ್ತಾವ ನನೆಗುದಿಗೆ

"ಸರಕು ಸಾಗಾಟ' ನಿಲ್ದಾಣವಿಲ್ಲದೆ ಸ್ಥಳೀಯ ಆರ್ಥಿಕತೆಗೆ ಹಿನ್ನಡೆ ; ಮೀನುಗಾರಿಕೆ, ಗೇರು ಉದ್ಯಮಕ್ಕೂ ಸಮಸ್ಯೆ

Team Udayavani, Oct 6, 2021, 6:06 AM IST

ಸೇನಾಪುರ “ಗೂಡ್ಸ್‌’ ರೈಲು ನಿಲ್ದಾಣ ಪ್ರಸ್ತಾವ ನನೆಗುದಿಗೆ

ಕುಂದಾಪುರ: ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಹಳಷ್ಟು ವರ್ಷಗಳ ಹಿಂದೆ ಸೇನಾಪುರ ರೈಲು ನಿಲ್ದಾಣವನ್ನು ಸರಕು ಸಾಗಾಟ (ಗೂಡ್ಸ್‌ ಟ್ರೈನ್‌ ಸ್ಟೇಶನ್‌) ರೈಲು ನಿಲ್ದಾಣವನ್ನಾಗಿ ಮಾರ್ಪಡಿಸಬೇಕು ಎನ್ನುವ ಪ್ರಸ್ತಾವ ಇತ್ತು. ಆದರೆ ಸಾಂಘಿಕ ಪ್ರಯತ್ನದ ಕೊರತೆಯಿಂದ ಆ ಪ್ರಸ್ತಾವ ನನೆಗುದಿಗೆ ಬಿದ್ದಿದೆ.

ಕುಂದಾಪುರ, ಬೈಂದೂರು ಎರಡೂ ತಾಲೂಕು ವ್ಯಾಪ್ತಿಯಲ್ಲಿ ಕುಂದಾಪುರದ ಮೂಡ್ಲಕಟ್ಟೆ, ಸೇನಾಪುರ, ಬಿಜೂರು, ಬೈಂದೂರು ಹಾಗೂ ಶಿರೂರು ಸೇರಿ ಒಟ್ಟು 5 ನಿಲ್ದಾಣಗಳಿವೆ. ಇವುಗಳಲ್ಲಿ ಮೂಡ್ಲಕಟ್ಟೆ, ಬೈಂದೂರು ನಿಲ್ದಾಣಗಳಲ್ಲಿ ಬಹುತೇಕ ರೈಲುಗಳಿಗೆ ನಿಲುಗಡೆಯಿದೆ. ಆದರೆ ಬಾಕಿ ಉಳಿದ ನಿಲ್ದಾಣಗಳಲ್ಲಿ ಒಂದೆರಡು ರೈಲುಗಳಿಗೆ ಮಾತ್ರ ನಿಲುಗಡೆ ನೀಡಲಾಗುತ್ತಿದೆ. ಈ ಬಾಕಿ ಉಳಿದ 3 ನಿಲ್ದಾಣಗಳ ಪೈಕಿ ಒಂದನ್ನು ಗೂಡ್ಸ್‌ ನಿಲ್ದಾಣವಾಗಿ ಮಾಡಿದರೆ ಈ ಭಾಗದ ಮೀನುಗಾರಿಕೆ, ಗೇರು ಉದ್ಯಮಕ್ಕೆ ಉತ್ತೇಜನ ಸಿಗಲಿದೆ.

ಏನೆಲ್ಲ ಅಗತ್ಯ?
ಈಗಿರುವ ರೈಲು ನಿಲ್ದಾಣವನ್ನು ಗೂಡ್ಸ್‌ ನಿಲ್ದಾಣವಾಗಿ ಮಾರ್ಪಡಿಸಲು ನಿಲ್ದಾಣದಲ್ಲಿ ಕನಿಷ್ಠ 5-6 ಹಳಿಗಳನ್ನು ಹೆಚ್ಚಿಸಬೇಕು. ಗೂಡ್ಸ್‌ ಯಾರ್ಡ್‌ ನಿರ್ಮಿಸಬೇಕು. ಲೋಡಿಂಗ್‌ – ಅನ್‌ ಲೋಡಿಂಗ್‌ ಏರಿಯಾ ಮಾಡಬೇಕು. ಅದಕ್ಕೆ ವಾಹನಗಳು ಬರುವಂತೆ ಮಾರ್ಗ ಮಾಡಿಕೊಡಬೇಕು. ಮೆಕ್ಯಾನಿಕ್‌ ಶೆಡ್‌ ಮಾಡಿಕೊಡಬೇಕು.

ಕಾರ್ಯಸಾಧುವೇ?
ಸೇನಾಪುರ ರೈಲು ನಿಲ್ದಾಣವನ್ನು ಗೂಡ್ಸ್‌ ರೈಲು ನಿಲ್ದಾಣವಾಗಿ ಅಭಿವೃದ್ಧಿಪಡಿಸಿದರೆ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ಸಿಗುವ ಜತೆಗೆ, ಈ ಭಾಗಕ್ಕೆ ಅಗತ್ಯವಿರುವ ಸರಕು ಸಾಗಾಟವು ಅಗ್ಗವಾಗಲಿದೆ. ಈ ದಿಸೆಯಲ್ಲಿ ಈ ಭಾಗದ ಸಂಸದರು, ಶಾಸಕರು, ರೈಲ್ವೇ ಸಚಿವಾಲಯ, ಮುಖ್ಯವಾಗಿ ಕೊಂಕಣ್‌ ರೈಲ್ವೇ ಕಾರ್ಯ ಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ:ರಸ್ತೆ ಬದಿ ನಿಲ್ಲಿಸಿಟ್ಟಿದ್ದ ಟ್ರಕ್ ಗಳ ಗಾಳಿ ತೆಗೆದು ಎಚ್ಚರಿಕೆ ನೀಡಿದ ಪೊಲೀಸರು

ಪ್ರಯೋಜನ ಹೇಗೆ?
ಈ ಪೈಕಿ ಸೇನಾಪುರ ರೈಲು ನಿಲ್ದಾಣವನ್ನು ಗೂಡ್ಸ್‌ ನಿಲ್ದಾಣವನ್ನಾಗಿ ಮಾಡಬೇಕು ಎನ್ನುವ ಪ್ರಸ್ತಾವ ಬಹಳಷ್ಟು ವರ್ಷಗಳ ಹಿಂದೆಯೇ ಇತ್ತು. ಸೇನಾಪುರವನ್ನು ಗೂಡ್ಸ್‌ ನಿಲ್ದಾಣವಾಗಿ ಮಾಡಿದರೆ ಇಲ್ಲಿಂದ 10-12 ಕಿ.ಮೀ. ದೂರದಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿದೆ. ಮರವಂತೆ ಬಂದರು ಸಹ ಹತ್ತಿರದಲ್ಲಿದೆ. ಅಲ್ಲಿಂದ ಬೇರೆ ಬೇರೆ ರಾಜ್ಯಗಳಿಗೆ ಮೀನು ಸಾಗಾಟಕ್ಕೆ ಅನುಕೂಲವಾಗಬಹುದು. ಇದಲ್ಲದೆ ಕುಂದಾಪುರ, ಬೈಂದೂರು ಭಾಗದಲ್ಲಿ ಸಾಕಷ್ಟು ಗೇರು ಬೀಜ ಕಾರ್ಖಾನೆಗಳಿವೆ. ಅವುಗಳಿಗೆ ಕಚ್ಛಾ ಗೇರು ಬೀಜವನ್ನು ಉತ್ತರ ಭಾರತದಿಂದ ಆಮದು ಮಾಡಿಕೊಳ್ಳಲು ಸಹ ಸಹಕಾರಿಯಾಗಬಹುದು. ಇದಲ್ಲದೆ ಉತ್ತರ ಕರ್ನಾಟಕ ಭಾಗದಿಂದ ಕುಂದಾಪುರ, ಬೈಂದೂರು ಭಾಗಗಳಿಗೆ ಅಕ್ಕಿ, ಸಕ್ಕರೆ ಸೇರಿದಂತೆ ಆ ಕಡೆಯಿಂದ ಬರುವಂತಹ ಅಗತ್ಯ ವಸ್ತುಗಳ ಸಾಗಾಟಕ್ಕೂ ಅನುಕೂಲವಾಗಬಹುದು. ಈ ಭಾಗಕ್ಕೆ ಅಗತ್ಯವಿರುವ ರಸಗೊಬ್ಬರ ಆಮದಿಗೂ ಪ್ರಯೋಜನವಾಗಬಹುದು. ಇದಲ್ಲದೆ ನಾಡ ಭಾಗದಲ್ಲಿ ಕೈಗಾರಿಕೆ ಆರಂಭವಾಗುವ ನಿರೀಕ್ಷೆಯೂ ಇರುವುದರಿಂದ ಬಹಳಷ್ಟು ಅನುಕೂಲವಾಗಬಹುದು.

ಎಲ್ಲ ರೀತಿಯ ಸಹಕಾರ
ಸೇನಾಪುರ ರೈಲು ನಿಲ್ದಾಣವನ್ನು ಗೂಡ್ಸ್‌ ರೈಲು ನಿಲ್ದಾಣವನ್ನಾಗಿ ಮಾಡಿದರೆ ಬೈಂದೂರು ಕ್ಷೇತ್ರದ ಮೀನುಗಾರಿಕೆ, ಕೈಗಾರಿಕೆ, ಗೇರು ಉದ್ಯಮಕ್ಕೆ ಬಹಳಷ್ಟು ಅನುಕೂಲವಾಗಬಹುದು. ಇದೊಂದು ಉತ್ತಮವಾದ ಬೇಡಿಕೆಯಾಗಿದೆ. ಈ ಬೇಡಿಕೆಗೆ ನನ್ನ ಬೆಂಬಲ ಹಾಗೂ ಎಲ್ಲ ರೀತಿಯಿಂದಲೂ ಸಹಕಾರವಿದೆ. ಸಂಬಂಧಪಟ್ಟವರ ಬಳಿ ಮಾತನಾಡಿ, ಗಮನಕ್ಕೆ ತರಲಾಗುವುದು.
– ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಪ್ರಸ್ತಾವನೆ ನಮ್ಮ ಮುಂದಿಲ್ಲ
ಸೇನಾಪುರ ರೈಲು ನಿಲ್ದಾಣವನ್ನು ಗೂಡ್ಸ್‌ ರೈಲು ನಿಲ್ದಾಣವನ್ನಾಗಿ ಮಾಡುವ ಯಾವುದೇ ಪ್ರಸ್ತಾವ ನಮ್ಮ ಕೊಂಕಣ್‌ ರೈಲ್ವೇ ಮುಂದಿಲ್ಲ. ಯಾರಾದರೂ ಈ ಬಗ್ಗೆ ಬೇಡಿಕೆ ಅಥವಾ ಮನವಿ ಸಲ್ಲಿಸಿದರೆ ಮುಂದಿನ ದಿನಗಳಲ್ಲಿ ಪರಿಶೀಲಿಸಿ, ಗಮನಹರಿಸಲಾಗುವುದು.
– ಸುಧಾ ಕೃಷ್ಣಮೂರ್ತಿ, ಕೊಂಕಣ್‌ ರೈಲ್ವೇ ಸಾರ್ವಜನಿಕ ಸಂಪರ್ಕಾಧಿಕಾರಿ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.