ಕಳಚಿದ ಯಕ್ಷಗಾನದ ಹಿರಿಯ ಕೊಂಡಿ: ಜಂಬೂರು ರಾಮಚಂದ್ರ ಶಾನುಭಾಗ್ ಇನ್ನಿಲ್ಲ
Team Udayavani, Feb 5, 2023, 5:09 PM IST
ಉಡುಪಿ: ಶಿರಿಯಾರ ಗ್ರಾಮದ ಹಿರಿಯ ಬಡಗು ತಿಟ್ಟಿನ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ ಅವರು ಫೆ.5 ರಂದು ನಿಧನ ಹೊಂದಿದ್ದಾರೆ.ಅವರಿಗೆ 84ವರ್ಷ ವಯಸ್ಸಾಗಿತ್ತು.
ಮಂದಾರ್ತಿ, ಮಾರಣಕಟ್ಟೆ, ಅಮೃತೇಶ್ವರೀ, ಇಡಗುಂಜಿ, ಪೆರ್ಡೂರು, ಹಾಲಾಡಿ, ಗುಂಡುಬಾಳ, ಕಮಲಶಿಲೆ ಮೇಳ ಸೇರಿದಂತೆ
ಸುಮಾರು ಐದೂವರೆ ದಶಕಗಳ ಕಾಲ ಯಕ್ಷರಂಗದಲ್ಲಿ ದಿಗ್ಗಜ ಕಲಾವಿದರೊಂದಿಗೆ ಒಡನಾಡಿಯಾಗಿ ಕಲಾಸೇವೆಗೈದ ಇವರು ಯಕ್ಷಗಾನ ಕ್ಷೇತ್ರದಲ್ಲಿ ತಮ್ಮದೇ ಆದ ವೈಶಿಷ್ಟ್ಯ ಪೂರ್ಣ ಪಾತ್ರಗಳಿಂದ ತನ್ನದೇ ಆದ ಛಾಪು ಮೂಡಿಸಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸಣ್ಣ ಪಾತ್ರಗಳ ಮೂಲಕ ಕಲಾ ಜೀವನ ಆರಂಭಿಸಿದ ಶಾನುಭಾಗರು ದಿಗ್ಗಜ ಕಲಾವಿದರಾದ ಹಾರಾಡಿ ರಾಮಗಾಣಿಗರು, ಕುಷ್ಠ ಗಾಣಿಗರು, ನಾರಾಯಣ ಗಾಣಿಗರು,ಕುಂಜಾಲು ಶೇಷಗಿರಿ ಕಿಣಿ, ಜಾನುವಾರುಕಟ್ಟೆ ಗೋಪಾಲಕೃಷ್ಣ ಕಾಮತ್, ಕೆರೆಮನೆ ಮಹಾಬಲ ಹೆಗಡೆ, ಶಂಭು ಹೆಗಡೆ, ಕುಂಜಾಲು ರಾಮಕೃಷ್ಣ ಮೊದಲಾದ ದಿಗ್ಗಜ ಕಲಾವಿದರೊಂದಿದೆ ಪಾತ್ರಗಳನ್ನು ನಿರ್ವಹಿಸಿ ದಶಕಗಳ ಹಿಂದೆ ಬಯಲಾಟ ಮತ್ತು ಡೇರೆ ಮೇಳಗಳಲ್ಲಿ ತನ್ನನ್ನು ತಾನು ಕಾಣಿಸಿಕೊಂಡು ಚಿರಪರಿಚಿತ ಕಲಾವಿದರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು