ಪ್ರತ್ಯೇಕ ದಾಳಿ: ಮೂವರು ಮಟ್ಕಾ ಬುಕ್ಕಿಗಳ ಬಂಧನ
Team Udayavani, Dec 15, 2021, 11:49 AM IST
ಹಟ್ಟಿಚಿನ್ನದಗಣಿ: ಸಾರ್ವಜನಿಕ ಪ್ರದೇಶದಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವೇಳೆ ಎರಡು ಪ್ರತ್ಯೇಕ ಕಡೆ ದಾಳಿ ನಡೆಸಿದ ಹಟ್ಟಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿ, ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಟ್ಟಣದ ಸಂತೆ ಬಜಾರ್ದಲ್ಲಿ ಮಟ್ಕಾ ಬರೆಯುತ್ತಿದ್ದ ಆದಪ್ಪ ಯಂಕಪ್ಪ ಗುಡದನಾಳ(48) ಹಾಗೂ ನರಸಪ್ಪ ಶಿವರಾಜ (35) ಎಂಬಾತರನ್ನು ಸಿಪಿಐ ಪ್ರಕಾಶ ಮಾಳಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ 1710 ರೂ. ನಗದು, ಜೂಜಾಟಕ್ಕೆ ಬಳಸಿದ ಚೀಟಿ, ಪೆನ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರು ಮಟ್ಕಾ ಚೀಟಿ ಹಾಗೂ ಹಣವನ್ನು ಶಂಕರಗೌಡ ಮಲ್ಕೇಂದ್ರಗೌಡ ಬಳಗಾನೂರುಗೆ ನೀಡುತ್ತಿದ್ದರೆಂದು ವಿಚಾರಣೆ ವೇಳೆ ತಿಳಿಸಿದ್ದರಿಂದ ಶಂಕರಗೌಡ ಮಲ್ಕೇಂದ್ರಗೌಡ ಬಳಗಾನೂರು ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಟ್ಟಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕೋಠಾ ಗ್ರಾಮ
ಕೋಠಾ ಗ್ರಾಮದ ವಾಲ್ಮೀಕಿ ಸರ್ಕಲ್ ಹತ್ತಿರ ಮಟ್ಕಾ ಬರೆಯುತ್ತಿದ್ದ ವ್ಯಕ್ತಿಯನ್ನು ಹಟ್ಟಿ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕೋಠಾ ಗ್ರಾಮದ ನಿಂಗಪ್ಪ “ಶಾಸ್ತ್ರಿ ‘ ಕುಂಟಶಾಸ್ತ್ರಿ (39) ಬಂಧಿತನಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬಂಧಿತನಿಂದ 1330 ರೂ. ನಗದು, ಮಟ್ಕಾ ಜೂಜಾಟಕ್ಕೆ ಬಳಸಿದ ಚೀಟಿ ಹಾಗೂ ಪೆನ್ ವಶಕ್ಕೆ ಪಡೆದಿದ್ದಾರೆ.
ಬಂಧಿತ ಮಟ್ಕಾ ಹಣ ಹಾಗೂ ಚೀಟಿಯನ್ನು ನಿಂಗಪ್ಪ ಚಂದಪ್ಪ ಮನಗೂಳಿಗೆ ನೀಡುತ್ತಿದ್ದನೆಂದು ವಿಚಾರಣೆ ವೇಳೆ ತಿಳಿಸಿದ್ದರಿಂದ ನಿಂಗಪ್ಪ ಚಂದಪ್ಪ ಮನಗೂಳಿ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ
ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ
ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ
ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ