ಪಡಿತರ ವಿತರಣೆಗೆ ಸರ್ವರ್‌ ಸಮಸ್ಯೆ

ಅಕ್ಕಿಗಾಗಿ ನ್ಯಾಯಬೆಲೆ ಅಂಗಡಿಯ ಮುಂದೆ ಗಂಟೆಗಟ್ಟಲೆ ಕಾಯುವ ಸ್ಥಿತಿ!

Team Udayavani, Dec 25, 2021, 6:25 AM IST

ಪಡಿತರ ವಿತರಣೆಗೆ ಸರ್ವರ್‌ ಸಮಸ್ಯೆ

ಸಾಂದರ್ಭಿಕ ಚಿತ್ರ

ಬಂಟ್ವಾಳ: ಸರಕಾರ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗಾಗಿ ಉಚಿತ ಅಕ್ಕಿ ವಿತರಣೆ ಮಾಡುತ್ತಿದೆಯಾದರೂ ವಿತರಣೆಯ ಸರ್ವರ್‌ನ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸದೆ ಇರುವುದರಿಂದ ಅಕ್ಕಿಗಾಗಿ ನ್ಯಾಯಬೆಲೆ ಅಂಗಡಿಯ ಮುಂದೆ ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಈ ತಿಂಗಳಲ್ಲಿ ಸರ್ವರ್‌ ಸಮಸ್ಯೆ ಅತಿಯಾಗಿ ಕಾಡುತ್ತಿದೆ.

ಪಡಿತರ ವಿತರಣೆಯಲ್ಲಿ ಪಾರದರ್ಶಕತೆಯನ್ನು ಸಾಧಿಸುವ ನಿಟ್ಟಿನಲ್ಲಿ ಸರಕಾರ ಬೆರಳಚ್ಚು, ಒಟಿಪಿ ವ್ಯವಸ್ಥೆ ಮಾಡಿದೆ. ಆದರೆ ಸರ್ವರ್‌ ಸಮಸ್ಯೆಯ ಕಾರಣಕ್ಕೆ ಪಡಿತರ ಪಡೆಯುವವರು ತೊಂದರೆ ಅನುಭವಿಸುವ ಜತೆಗೆ ನ್ಯಾಯಬೆಲೆ ಅಂಗಡಿಯವರಿಗೂ ಸಮಸ್ಯೆಯಾಗುತ್ತಿದೆ. ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್‌ನೆಟ್‌ ಕೂಡ ವೇಗವಾಗಿ ಇಲ್ಲದೇ ಇರುವುದರಿಂದ ಪಡಿತರ ವಿತರಣೆಗೆ ಇನ್ನಷ್ಟು ಸಮಸ್ಯೆಯಾಗುತ್ತಿದೆ.

ತಿಂಗಳ 10 ತಾರೀಕಿನ ವೇಳೆಗೆ ನ್ಯಾಯಬೆಲೆ ಅಂಗಡಿಯವರು ವಿತರಣೆ ಪ್ರಾರಂಭಿಸಿ ದರೆ ತಿಂಗಳ ಅಂತ್ಯದೊಳಗೆ ಅದನ್ನು ಪೂರ್ಣ ಗೊಳಿಸ ಬೇಕಾಗುತ್ತದೆ. ಆದರೆ ಸರ್ವರ್‌ ಸಮಸ್ಯೆಯಿಂದ ವಿತರಣೆ ವಿಳಂಬವಾಗು ವುದು ಒಂದೆಡೆ ಯಾದರೆ, ತಮ್ಮನ್ನು ವಿನಾಃ ಕಾರಣ ಕಾಯಿಸುತ್ತಿದ್ದಾರೆ ಎಂದು ಜನರಿಂದ ಬೈಗುಳ ತಿನ್ನಬೇಕಾದ ಪರಿಸ್ಥಿತಿ ಇದೆ.

ಹೆಚ್ಚಾಗಿ ಪೇಟೆ ಪ್ರದೇಶದಲ್ಲಿಯೇ ಇರುವ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಸಾಮಗ್ರಿ ಕೊಂಡು ಹೋಗು ವುದಕ್ಕಾಗಿ ಗ್ರಾಮಾಂತರ ಪ್ರದೇಶದವರು ಆಟೋ ರಿಕ್ಷಾ ಮಾಡಿ ಕೊಂಡೇ ಹೋಗುತ್ತಾರೆ. ಆದರೆ ಅಲ್ಲಿಗೆ ಹೋದಾಗ ಸರ್ವರ್‌ಸ್ಲೋ ಇದೆ ಮತ್ತೆ ಬನ್ನಿ, ನಾಳೆಬನ್ನಿ ಎಂಬ ಉತ್ತರ ಬರುತ್ತದೆ. ಇದರಿಂದ ಎರಡೆರಡು ಬಾರಿ ಬಾಡಿಗೆ ಕೊಡಬೇಕಾದ ಸ್ಥಿತಿ ಇರುತ್ತದೆ. ಪಡಿತರ ತರುವುದಕ್ಕಾಗಿಯೇ ಎರಡು ದಿನ ರಜೆ ಮಾಡು ವುದರಿಂದ ಎರಡು ದಿನದ ಕೂಲಿಯೂ ನಷ್ಟವಾಗುತ್ತದೆ. ಹೀಗಿರುವಾಗ ಸರಕಾರದ ಉಚಿತ ಅಕ್ಕಿಯೂ ದುಬಾರಿಯಾಗಿ ಪರಿಣಮಿಸಿದೆ.

ಇದನ್ನೂ ಓದಿ:ರಾಜಸ್ಥಾನ: ಭಾರತೀಯ ವಾಯುಸೇನೆಯ ಮಿಗ್- 21 ವಿಮಾನ ಪತನ, ಪೈಲಟ್ ಸಾವು

ಪ್ರತ್ಯೇಕಗೊಳಿಸುವ ಪ್ರಸ್ತಾವನೆ
ಹೆಚ್ಚಿನ ಇಲಾಖೆಗಳ ಸೌಲಭ್ಯಗಳು ಬಿಪಿಎಲ್‌ ಕಾರ್ಡ್‌ ಮೂಲಕವೇ ಸಿಗುವುದರಿಂದ ಅವುಗಳು ಇಲ್ಲಿಂದಲೇ ಮಾಹಿತಿ ಪಡೆಯುವುದರಿಂದ, ಇ-ಕೆವೈಸಿಯೂ ಇರುವುದರಿಂದ ಸರ್ವರ್‌ ಸ್ಲೋ ಎಂಬ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಕೆಲ ವೊಂದು ಆಯ್ಕೆಗಳನ್ನು ಇಲ್ಲಿಂದ ತೆಗೆದು ಸರ್ವರ್‌ ವೇಗವನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯುತ್ತಿವೆ. ಇದರ ಮಧ್ಯೆ ಪಡಿತರ ವಿತರಣೆಗಾಗಿಯೇ ಪ್ರತ್ಯೇಕ ಸರ್ವರ್‌ನ ಬೇಡಿಕೆಯೂ ಇದ್ದು, ಅದಕ್ಕಾಗಿ ಪ್ರಸ್ತಾವನೆಯನ್ನೂ ಸಿದ್ಧಗೊಳಿಸಲಾಗಿದೆ.

ದ.ಕ. – ಉಡುಪಿ ಎಷ್ಟೆಷ್ಟು.?
ದ.ಕ. ಜಿಲ್ಲೆಯಲ್ಲಿ ಒಟ್ಟು 456 ನ್ಯಾಯಬೆಲೆ ಅಂಗಡಿಗಳಿದ್ದು, ಬಿಪಿಎಲ್‌ ಹಾಗೂ ಅಂತ್ಯೋದಯದ ಪಡಿತರ ಚೀಟಿಯವರು ಸೇರಿ ಒಟ್ಟು 2,71,206 ಕಾರ್ಡ್‌ ಹೊಂದಿರುವವರಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 295 ನ್ಯಾಯಬೆಲೆ ಅಂಗಡಿಗಳಿದ್ದು, 1,90,000 ಬಿಪಿಎಲ್‌ ಹಾಗೂ ಅಂತ್ಯೋದಯದ ಪಡಿತರ ಚೀಟಿದಾರರಿದ್ದಾರೆ.

ಲೋಡ್‌ ಹೆಚ್ಚಾಗಿ ಸಮಸ್ಯೆ
ಹಾಲಿ ಇರುವ ಸರ್ವರ್‌ಗೆ ಲೋಡ್‌ ಜಾಸ್ತಿಯಾಗಿ ಈ ರೀತಿಯ ತೊಂದರೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರಲ್ಲಿರುವ ಕೆಲವೊಂದು ಆಯ್ಕೆಗಳನ್ನು ತೆಗೆದು ಹಾಕುವ ಕಾರ್ಯ ಮಾಡಿದ್ದು, ಶೀಘ್ರವೇ ಈ ಸಮಸ್ಯೆ ಪರಿಹಾರವಾಗುವ ನಿರೀಕ್ಷೆ ಇದೆ.

ಮಧುಸೂಧನ್‌ ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ. ವಿವಿಧ ಇಲಾಖೆಗಳ ಸೌಲಭ್ಯಗಳು ಬಿಪಿಎಲ್‌ ಕಾರ್ಡ್‌ ಮೂಲಕ ಸಿಗುತ್ತಿದ್ದು, ಅದರ ಮಾಹಿತಿ ಸರ್ವರ್‌ ಮೂಲಕ ಪಡೆಯುವುದರಿಂದ ತಾಂತ್ರಿಕ ತೊಂದರೆಯಿಂದ ರೇಶನ್‌ ವಿತರಣೆಯ ಕಾರ್ಯ ವಿಳಂಬವಾಗುತ್ತದೆ. ರಾಜ್ಯಮಟ್ಟದಲ್ಲೇ ಈ ಸಮಸ್ಯೆ ಇರುವ ಕಾರಣ ಪಡಿತರ ವಿತರಣೆಗಾಗಿ ಪ್ರತ್ಯೇಕ ಸರ್ವರ್‌ ಕುರಿತು ಪ್ರಸ್ತಾವನೆ ಇದೆ.
-ಮಹಮ್ಮದ್‌ ಇಸಾಕ್‌
ಉಪನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಉಡುಪಿ

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.