ಸರ್ವರ್‌ ಸಮಸ್ಯೆ: ಸಾರ್ವಜನಿಕರು, ರೈತರ ಪರದಾಟ : ಉಪನೋಂದಣಾಧಿಕಾರಿ ಕಚೇರಿಯಲ್ಲಿ ಅವಾಂತರ


Team Udayavani, Sep 3, 2020, 12:19 PM IST

ಸರ್ವರ್‌ ಸಮಸ್ಯೆ: ಸಾರ್ವಜನಿಕರು, ರೈತರ ಪರದಾಟ : ಉಪನೋಂದಣಾಧಿಕಾರಿ ಕಚೇರಿಯಲ್ಲಿ ಅವಾಂತರ

ಮದ್ದೂರು: ಪಟ್ಟಣದ ತಾಲೂಕು ಕಚೇರಿ ಬದಿಯಲ್ಲಿರುವ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಸರ್ವರ್‌ ಸಮಸ್ಯೆಯಿಂದಾಗಿ ಕಳೆದ ಮೂರು ದಿನಗಳಿಂದಲೂ ಕರ್ತವ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಹ ಸ್ಥಿತಿ
ನಿರ್ಮಾಣಗೊಂಡಿದೆ.

ಕಳೆದ ಮೂರು ದಿನಗಳಿಂದಲೂ ಸರ್ವರ್‌ ಸಮಸ್ಯೆಯಿಂದಾಗಿ ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯದೇ ಸಾರ್ವ ಜನಿಕರು ಸೇರಿದಂತೆ ರೈತರು ಅಧಿಕಾರಿಗಳಿಗೆ ಹಿಡಿಶಾಪ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅದ್ವಾನಗಳಿಗೆ ಕಾರಣ: ಕಳೆದ ಮೂರು ವರ್ಷಗಳ ಹಿಂದೆ ಒಂದು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಮಿನಿ ವಿಧಾನಸೌಧದ ಹೆಚ್ಚುವರಿ ಕಟ್ಟಡ ಕಾಮಗಾರಿ ಮುಗಿದ ಬಳಿಕ ನೂತನವಾಗಿ ಸ್ಥಳಾಂತರಗೊಂಡ ಉಪನೋಂದಣಿ ಕಚೇರಿ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಅಸಮರ್ಪಕ ವಿದ್ಯುತ್‌ನಿಂದಾಗಿ ಪ್ರತಿನಿತ್ಯ ಕಚೇರಿಗೆ ಆಗಮಿಸುವ ಮಧ್ಯವರ್ತಿಗಳು,
ದಲ್ಲಾಳಿಗಳು, ರೈತರು, ಸಾರ್ವಜನಿಕರು ಅಲೆದಾಡಬೇಕಾದ ಪರಿಸ್ಥಿತಿ ಬಂದೊದಗಿದೆ.

ಕಚೇರಿಗೆ ಆಗಮಿಸಿ ವಾಪಸ್‌: ಕಳೆದ ಮೂರು ದಿನಗಳಿಂದ ಸರ್ವರ್‌ ಸಮಸ್ಯೆಯಿಂದಾಗಿ ದೂರದ ಗ್ರಾಮಗಳಿಂದ ಆಗಮಿಸುವ ರೈತರು ಹಾಗೂ ನಿವೇಶನ, ಜಮೀನು, ಮನೆ, ಬೋಗ್ಯ, ಕ್ರಯ ಇನ್ನಿತರೆ ಕಾರ್ಯಗಳಿಗೆ ಹಾಗೂ ಮಾರಾಟ ಮಾಡುವ, ಕೊಳ್ಳುವ
ವ್ಯಕ್ತಿಗಳು ಪ್ರತಿನಿತ್ಯ ಕಚೇರಿಗೆ ಬಂದು ವಾಪಸ್‌  ತೆರಳುತ್ತಿರುವ ದೃಶ್ಯ ಎಲ್ಲೆಡೆ ಕಂಡುಬರುತ್ತಿದೆ.

ದುರ್ವಾಸನೆ: ತಾಪಂ ಅನುದಾನದಲ್ಲಿ ನಿರ್ಮಿಸಿರುವ ಮಳಿಗೆಗಳ ಬದಿಯಲ್ಲೇ ಬಯಲು ಶೌಚಾಲಯ ಪ್ರದೇಶವಾಗಿ ಮಾರ್ಪಟ್ಟಿದ್ದು, ಈ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು, ಮಹಿಳೆಯರು ಮೂಗು ಮುಚ್ಚಿಕೊಂಡೇ ಸಂಚರಿಸುವ ದುಸ್ಥಿತಿ ಬಂದೊದಗಿದ್ದು, ದುರ್ವಾಸನೆ ಬೀರುತ್ತಿದ್ದರೂ ಯಾವೊಬ್ಬ ಅಧಿಕಾರಿಯು ಇತ್ತ ಗಮನಹರಿಸದೆ ಮೌನಕ್ಕೆ ಶರಣಾಗಿದ್ದಾರೆ.
ನಿರ್ಲಕ್ಷ್ಯ ಧೋರಣೆ: ಹಣದ ಅವಶ್ಯಕತೆಗಾಗಿ ಮಾರಾಟ ಮಾಡುವ, ಕೊಳ್ಳುವ ವ್ಯಕ್ತಿಗಳು ದೂರದ ಕೊಪ್ಪ, ಭಾರತೀನಗರ, ಕೌಡ್ಲೆ, ಕೂಳಗೆರೆ ಇನ್ನಿತರೆ ಗ್ರಾಮಗಳಿಂದ ಆಗಮಿಸುವವರು ಬರಿಗೈಯಿಂದ ವಾಪಸ್ಸಾಗುವಂತಾಗಿದ್ದು, ಅಧಿಕಾರಿಗಳ ವಿರುದ್ಧ
ಕಿಡಿಕಾರುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯಧೋರಣೆ ಅನುಸರಿಸಿದ್ದಾರೆ.

ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಕೈಕೊಡುವ ಸರ್ವರ್‌ ಸಮಸ್ಯೆಯನ್ನು ಬಗೆಹರಿಸುವ ಜತೆಗೆ ನಿರಂತರವಾಗಿ ಕೆಲಸ ಕಾರ್ಯಗಳಾಗಲು ಕ್ರಮ ಕೈಗೊಳ್ಳಬೇಕಿದೆ. ಶೌಚಾಲಯ, ಕುಡಿಯುವ ನೀರಿನ
ಸಮಸ್ಯೆಯನ್ನು ತ್ವರಿತಗತಿಯಲ್ಲಿ ನಿವಾರಿಸಿ ಸಾರ್ವಜನಿಕರ ಹಿತ ಕಾಯಬೇಕಾಗಿದೆ.

– ಎಸ್‌.ಪುಟ್ಟಸ್ವಾಮಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.