ಅಪಘಾತಕ್ಕೆ ಬಾಯ್ದೆರೆದಂತಿದೆ ಮುಚ್ಚದ ಚರಂಡಿ

ನಾವುಂದ ಅಂಡರ್‌ಪಾಸ್‌ನ ಸರ್ವಿಸ್‌ ರಸ್ತೆ

Team Udayavani, Feb 17, 2022, 5:05 AM IST

ಅಪಘಾತಕ್ಕೆ ಬಾಯ್ದೆರೆದಂತಿದೆ ಮುಚ್ಚದ ಚರಂಡಿ

ಮರವಂತೆ: ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ನಾವುಂದ ಅಂಡರ್‌ಪಾಸ್‌ ಬಳಿಯ ಎರಡೂ ಕಡೆಗಳ ಸರ್ವಿಸ್‌ ರಸ್ತೆಯ ಹಲವೆಡೆಗಳಲ್ಲಿ ಚರಂಡಿಯನ್ನು ಮುಚ್ಚದೆ ಹಾಗೇ ಬಿಟ್ಟಿದ್ದು, ಇದು ಅಪಘಾತವನ್ನು ಆಹ್ವಾನಿಸುವಂತಿದೆ.

ಕುಂದಾಪುರ – ಬೈಂದೂರು ಹೆದ್ದಾರಿಯ ಅರೆಬರೆ ಕಾಮಗಾರಿಯ ಅವ್ಯವಸ್ಥೆಯು ಸಾರ್ವಜನಿಕರಿಗೆ ನಿತ್ಯ ಮುಗಿಯದ ಗೋಳಾಗಿ ಪರಿಣಮಿ ಸಿದೆ. ಸಂಗಮ್‌ ಬಳಿಯಿಂದ ಆರಂಭಿಸಿ, ತಲ್ಲೂರು, ಹೆಮ್ಮಾಡಿಯಾಗಿ ಬೈಂದೂರು, ಶಿರೂರುವರೆಗಿನ ಅಧ್ವಾನ ಮಾರಕವಾದಂತಿದೆ.

ಅಪಘಾತ ತಾಣ
ಹೆದ್ದಾರಿ ಹಾದು ಹೋಗುವ ನಾವುಂದ ದಲ್ಲಿ ಅಂಡರ್‌ಪಾಸ್‌ ನಿರ್ಮಿಸಿದ್ದು, ಎರಡೂ ಕಡೆಗಳಲ್ಲಿಯೂ ಸರ್ವಿಸ್‌ ರಸ್ತೆ ಆಗಿದೆ. ಆದರೆ ಚರಂಡಿ ಕಾಮಗಾರಿ ಮಾತ್ರ ಅರೆಬರೆಯಾಗಿದೆ. ಎರಡೂ ಕಡೆಯ ಸರ್ವಿಸ್‌ ರಸ್ತೆಗಳಲ್ಲಿಯೂ ಚರಂಡಿ ನಿರ್ಮಿಸಿದ್ದು, ಆದರೆ ಚರಂಡಿಯನ್ನು ಸರಿಯಾಗಿ ಮುಚ್ಚದೇ, 4-5 ಕಡೆಗಳಲ್ಲಿ ಹಾಗೇ ಬಾಕಿ ಬಿಟ್ಟಿದ್ದು, ಇಲ್ಲಿ ರಾತ್ರಿ ವೇಳೆ ತಿಳಿಯದೇ ಬೈಕ್‌ ಸವಾರರು ಬಿದ್ದ ನಿದರ್ಶನವು ಇದೆ. ಅದರಲ್ಲೂ ಪ್ರಮುಖವಾಗಿ ಅಂಡರ್‌ಪಾಸ್‌ ಬಳಿಯ ಪೆಟ್ರೋಲ್‌ ಬಂಕ್‌ ಬಳಿಯ ಚರಂಡಿ ಮುಚ್ಚದೆ ಇರುವುದು, ಅಪಾಯವನ್ನು ಆಹ್ವಾನಿಸುವಂತಿದೆ. ಇನ್ನು ಉರ್ದು ಶಾಲೆಗೆ ಹೋಗುವಲ್ಲಿಯೂ ಸಹ ಚರಂಡಿ ಮುಚ್ಚದೇ ಅಪಘಾತಕ್ಕೆ ರಹದಾರಿಯಾದಂತಿದೆ.

ಮನವಿಗೆ ಸ್ಪಂದನೆಯೇ ಇಲ್ಲ
ಈ ಚರಂಡಿಯನ್ನು ಮುಚ್ಚದೆ ಇರುವ ಬಗ್ಗೆ ನಾವುಂದ ಗ್ರಾಮ ಪಂಚಾಯತ್‌ನಿಂದ ಅನೇಕ ಬಾರಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಐಆರ್‌ಬಿಯ ಸಂಬಂಧಪಟ್ಟ ಎಲ್ಲರಿಗೂ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೆ ಈ ಬಗ್ಗೆ ಯಾರೂ ಸಹ ಗಂಭೀರವಾಗಿ ಪರಿಗಣಿಸಿ, ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೇ ಮಾಡಿಲ್ಲ. ಸಾರ್ವಜನಿಕರಿಂದಲೂ ಅನೇಕ ಬಾರಿ ಈ ಬಗ್ಗೆ ಮನವಿ ಸಲ್ಲಿಸಿದರೂ, ಪ್ರಯೋಜನವಾಗಿಲ್ಲ.

ಮುಚ್ಚಲು ಆಗ್ರಹ
ನಾವುಂದ ಅಂಡರ್‌ಪಾಸ್‌ ಬಳಿಯ ಎರಡೂ ಬದಿಯ ಸರ್ವಿಸ್‌ ರಸ್ತೆಗೆ ತಾಗಿಕೊಂಡಿರುವ ಚರಂಡಿಯನ್ನು ಮುಚ್ಚದೇ ಸಮಸ್ಯೆಯಾಗುತ್ತಿದ್ದು, ಗೊತ್ತಿಲ್ಲದೆ ಬಿದ್ದರೆ ಪ್ರಾಣ ಭೀತಿಯು ಎದುರಾಗಬಹುದು. ಆದ್ದರಿಂದ ಕೂಡಲೇ ತೆರೆದ ಚರಂಡಿಯನ್ನು ಮುಚ್ಚಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅನೇಕ ಬಾರಿ ಮನವಿ
ನಾವು ಗ್ರಾಮ ಪಂಚಾಯತ್‌ ವತಿಯಿಂದ ಚರಂಡಿ ಮುಚ್ಚದೇ ಬಾಕಿ ಇರುವ ಕಡೆಗಳಲ್ಲ ಮುಚ್ಚುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಇದಲ್ಲದೆ ಪಂಚಾಯತ್‌ ವ್ಯಾಪ್ತಿಯಲ್ಲಿ ಹೆದ್ದಾರಿಯ ಅನೇಕ ಸಮಸ್ಯೆ ಬಗೆಹರಿಸುವಂತೆಯೂ ಸಂಬಂಧಪಟ್ಟವರಿಗೂ ಗಮನಕ್ಕೆ ತರಲಾಗಿದೆ. ಈಗ ಮತ್ತೆ ಈ ಬಗ್ಗೆ ಪಂಚಾಯತ್‌ನಿಂದ ಮನವಿ ಸಲ್ಲಿಸಲಾಗುವುದು.
-ಜಾನಕಿ ಮೊಗವೀರ, ಅಧ್ಯಕ್ಷರು,
ನಾವುಂದ ಗ್ರಾ.ಪಂ.

 

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.