ಏಳನೇ ತರಗತಿ ಪಬ್ಲಿಕ್‌ ಪರೀಕ್ಷೆ ಅನುಮಾನ

ಸರಕಾರದಿಂದ ಹೊರಡದ ಅಧಿಕೃತ ಆದೇಶ; ಶಿಕ್ಷಣ ಇಲಾಖೆಯಲ್ಲೂ ಯಾವುದೇ ಸಿದ್ಧತೆ ಇಲ್ಲ

Team Udayavani, Nov 8, 2019, 10:18 AM IST

sadasdasdas

ಸಾಂದರ್ಭಿಕ ಚಿತ್ರ

ಬೆಂಗಳೂರು: ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ರಾಜ್ಯ ಸರಕಾರದ ಚಿಂತನೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅನುಷ್ಠಾನ ಅನುಮಾನ.

ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆ ಸಲು ಬೇಕಾದ ಯಾವುದೇ ಸಿದ್ಧತೆ ಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಸರಕಾರ ಇನ್ನೂ ಮಾಡಿ ಕೊಂಡಿಲ್ಲ. ಈ ಸಂಬಂಧ ಸರಕಾರದಿಂದ ಅಧಿಕೃತ ಆದೇಶ ಅಥವಾ ನಿರ್ದೇ ಶನವೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ತಲು ಪಿಲ್ಲ . ಪರೀಕ್ಷೆಗೆ ಕೇವಲ 4 ತಿಂಗಳಿದ್ದು ಈ ಹಂತದಲ್ಲಿ ಹೊಸ ಪದ್ಧತಿ ಅನುಷ್ಠಾನ ಗೊಂದಲಕ್ಕೆ ಕಾರಣ ವಾಗ ಬಹುದು ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಪಬ್ಲಿಕ್‌ ಪರೀಕ್ಷೆಗೂ ಮುನ್ನ ಸಾಕಷ್ಟು ಸಿದ್ಧತೆ ಮಾಡಿ ಕೊಳ್ಳುವ ಜತೆಗೆ ವಿದ್ಯಾರ್ಥಿಗಳನ್ನು ಇದಕ್ಕೆ ಸಜ್ಜು ಮಾಡ ಬೇಕಾಗುತ್ತದೆ. ಜತೆಗೆ ಶಿಕ್ಷಕರು ಅನೇಕ ರೀತಿಯಲ್ಲಿ ಸಿದ್ಧ ರಾಗ ಬೇಕಾಗುತ್ತದೆ. ಇದು ಯಾವುದೂ ನಡೆದಿಲ್ಲ. ಅಲ್ಲದೆ, ಪಬ್ಲಿಕ್‌ ಪರೀಕ್ಷೆ ನಡೆಯಲಿದೆಯೇ ಇಲ್ಲವೇ ಎಂಬ ಸ್ಪಷ್ಟ ಸಂದೇಶವೂ ಬಂದಿಲ್ಲ ಎಂದು ಉಪನಿರ್ದೇಶಕರೋರ್ವರು ತಿಳಿಸಿದರು.

34 ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರಿಗೂ ಈ ಸಂಬಂಧ ಯಾವುದೇ ಮಾಹಿತಿ ಇಲಾಖೆಯಿಂದ ನೀಡಿಲ್ಲ. ಆಡಳಿತಾತ್ಮಕವಾಗಿ ಪರೀಕ್ಷಾ ಸಿದ್ಧತೆ, ಪರೀಕ್ಷಾ ಕೇಂದ್ರ ಸಹಿತ ಇತರ ಕೆಲಸಗಳಿಗಾಗಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಉಪ ನಿರ್ದೇಶಕರು ಮಾತುಕತೆ ನಡೆಸಬೇಕಾಗುತ್ತದೆ. ಆದೇಶವೇ ಹೊರಡದಿರುವುದರಿಂದ ಜಿಲ್ಲಾ ಉಪನಿರ್ದೇಶಕರು ಅಥವಾ ಶಾಲೆಗಳ ಮುಖ್ಯ ಶಿಕ್ಷಕರು ಈ ಬಗ್ಗೆ ಚಿಂತಿಸಿಲ್ಲ.

ಮಾಹಿತಿ ಸಂಗ್ರಹ
ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ಮಾಡಲು ಕಾನೂ ನಾತ್ಮಕವಾಗಿ ಅವಕಾಶ ಇದೆಯೇ ಎಂಬುದರ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಗಳು, ಕಾನೂನು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ಆರಂಭಿಸಿದ್ದಾರೆ. ಈಗಾಗಲೇ 1ರಿಂದ 9ನೇ ತರಗತಿವರೆಗೆ ಅನುತ್ತೀರ್ಣ ಮಾಡಬಾರದು ಎಂಬ ನಿಯಮವಿದೆ. ಹೊಸ ಶಿಕ್ಷಣ ನೀತಿ ಬಂದ ಅನಂತರ ಈಗಿನ ವ್ಯವಸ್ಥೆ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಏಳನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ಆಗಬಹುದಾದ ಅನುಕೂಲ ಮತ್ತು ಅನನುಕೂಲದ ಬಗ್ಗೆಯೂ ಚರ್ಚೆಗಳು ನಡೆದಿವೆ.

ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಏಳನೇ ತರಗತಿಯಲ್ಲಿ ಎಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಲ್ಲಿ ರಾಜ್ಯ ಪಠ್ಯ ಕ್ರಮದ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ವಿದ್ಯಾರ್ಥಿಗಳು ಎಷ್ಟಿದ್ದಾರೆ ಎಂಬಿತ್ಯಾದಿ ಮಾಹಿತಿಯನ್ನು ಇಲಾಖೆಯಿಂದ ಇನ್ನೂ ಪಡೆದು ಕೊಂಡಿಲ್ಲ. ಒಟ್ಟಾರೆಯಾಗಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕ-ಪೋಷಕರು ಈ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದ್ದಾರೆ.

ಪ್ರಶ್ನೆಪತ್ರಿಕೆಯೂ ಸಿದ್ಧವಾಗಿಲ್ಲ
ಏಳನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಮತ್ತು ಅದರ ಫ‌ಲಿತಾಂಶ ಪ್ರಕಟನೆ ಕುರಿತು ಚಿಂತನೆ ನಡೆಸಿ ಕ್ರಮ ತೆಗೆದು ಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಈ ಹಿಂದೆ ಹೇಳಿಕೆ ನೀಡಿದ್ದರು. ಆದರೆ ಇದುವರೆಗೆ ಪ್ರಶ್ನೆ ಪತ್ರಿಕೆ ತಯಾರಿಕೆಗಾಗಿ ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಸ್ಪಷ್ಟ ನಿರ್ದೇಶನ ಹೋಗಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.

ಪಬ್ಲಿಕ್‌ ಪರೀಕ್ಷೆ ಸಂಬಂಧ ಸರಕಾರ ದಿಂದ ಯಾವುದೇ ಆದೇಶ ಆಗಿಲ್ಲ ಮತ್ತು ಇಲಾಖೆಗೂ ಯಾವುದೇ ನಿರ್ದೇಶನ ಬಂದಿಲ್ಲ.
– ಉಮಾಶಂಕರ್‌, ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.