ಇಂದಿನಿಂದ ಅಯ್ಯಪ್ಪ ದೇಗುಲಕ್ಕೆ ಪ್ರವೇಶ
ಆನ್ಲೈನ್ ಮೂಲಕ ಬುಕಿಂಗ್ ಮಾಡಿದವರಿಗೆ ದರ್ಶನ ಅವಕಾಶ
Team Udayavani, Nov 16, 2020, 12:51 AM IST
ಶಬರಿಮಲೆ: ಶ್ರೀ ಅಯ್ಯಪ್ಪ ದೇವರ ದರ್ಶನಕ್ಕಾಗಿ ಶಬರಿಮಲೆ ದೇಗುಲದ ದ್ವಾರವನ್ನು ರವಿವಾರ ತೆರೆಯಲಾಯಿತು.
ಶಬರಿಮಲೆ: ಶಬರಿಮಲೆಯ ಅಯ್ಯಪ್ಪ ದೇಗುಲವನ್ನು ರವಿವಾರ ತೆರೆಯಲಾಗಿದೆ. ಅರ್ಚಕ ಎ.ಕೆ. ಸುಧೀರ್ ನಂಬೂದಿರಿ ಸಂಜೆ 5 ಗಂಟೆಗೆ ದೇಗುಲದ ಬಾಗಿಲು ತೆರೆದರು. ಆದರೆ ಯಾವುದೇ ವಿಶೇಷ ಪೂಜೆಗಳು ನಡೆಯಲಿಲ್ಲ. ಸೋಮವಾರದಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಮುಂದಿನ ಎರಡು ತಿಂಗಳ ವರೆಗೆ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ಇದೆ. ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಸೇರಿದಂತೆ ಕಟ್ಟು ನಿಟ್ಟಿನ ನಿಯಮಗಳನ್ನು ಕೇರಳ ಸರಕಾರ ಮತ್ತು ದೇವಸ್ವಂ ಬೋರ್ಡ್ ಜಾರಿಗೊಳಿಸಿದೆ.
ಆನ್ಲೈನ್ ಮೂಲಕ ದರ್ಶನಕ್ಕೆ ಬುಕ್ ಮಾಡಿದವರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಪ್ರತೀ ದಿನ ಒಂದು ಸಾವಿರ ಭಕ್ತರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ನಿಳಕ್ಕಲ್ ಮತ್ತು ಪಂಪಾ ಶಿಬಿರವನ್ನು ಪ್ರವೇಶಿಸುವ 24 ತಾಸುಗಳ ಒಳಗಾಗಿ ಸೋಂಕು ಇಲ್ಲ ಎಂಬ ಬಗ್ಗೆ ಪ್ರಮಾಣ ಪತ್ರವನ್ನು ಭಕ್ತರು ಕಡ್ಡಾಯವಾಗಿ ಹೊಂದಿರಬೇಕು. ದೇಗುಲ ಆವರಣದಲ್ಲಿ ತಂಗಲು ಅವಕಾಶವೇ ಇಲ್ಲ. ತಿರುವಾಂಕೂರು ದೇವಸ್ವಂ ಮಂಡಳಿ ನೀಡಿದ ಮಾಹಿತಿ ಪ್ರಕಾರ ಪ್ರಸಕ್ತ ಸಾಲಿನಲ್ಲಿ 85 ಸಾವಿರ ಮಂದಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್