Manipur: ಮಣಿಪುರ ಶಾಂತಿಗಾಗಿ ಶಾ ಭೇಟಿಯಾದ ಐಟಿಎಲ್ಎಫ್
Team Udayavani, Aug 10, 2023, 6:39 AM IST
ಇಂಫಾಲ: ಸಂಘರ್ಷಪೀಡಿತ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಸಾಮೂಹಿಕ ಪ್ರಯತ್ನದ ಭಾಗವಾಗಿ ರಾಜ್ಯದ ವಿವಿಧ ಬುಡಕಟ್ಟು ಸಮುದಾಯಗಳ ಸದಸ್ಯರನ್ನೊಳಗೊಂಡ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ನಿಯೋಗದ ಸದಸ್ಯರು ಬುಧವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಈ ಕುರಿತು ಐಟಿಎಲ್ಎಫ್ ಕಾರ್ಯದರ್ಶಿ ಮುವಾನ್ ಮಾಹಿತಿ ನೀಡಿದ್ದು, ಅಸ್ಸಾಂ ರೈಫಲ್ಸ್ನ 27 ರೈಫಲ್ಸ್ ಕಚೇರಿ ಮೂಲಕ ಕಳೆದ ವಾರವೇ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಪತ್ರಿ ಸಲ್ಲಿಸಿದ್ದೆವು. ಅದರಂತೆ ರಾಜ್ಯದ ಜನಾಂಗೀಯ ಸಂಘರ್ಷದ ಕುರಿತ ಮಾತುಕತೆ ನಡೆಸಲು ಖುದ್ಧು ಶಾ ಅವರೇ ಆಹ್ವಾನವನ್ನೂ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿಯೋಗವು ಅವರನ್ನು ಭೇಟಿಯಾಗಿ 5 ಪ್ರಮುಖ ಬೇಡಿಕೆಗಳನ್ನು ಸಚಿವರ ಮುಂದಿಟ್ಟಿದೆ. ಅದರಲ್ಲಿ ಮಣಿಪುರದಲ್ಲಿನ ಬುಡಕಟ್ಟು ಜನಾಂಗಗಳ ಸಂಪೂರ್ಣ ಪ್ರತ್ಯೇಕತೆ ವ್ಯವಸ್ಥೆ, ಮೈತೇಯಿ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಅನುವು ಹಾಗೂ ಕುಕಿ-ಮೈತೇಯಿ ಸಂಘರ್ಷ ಪರಿಹಾರದ ವಿಚಾರವೂ ಸೇರಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ