ಭಕ್ತ ಸಾಗರದ ನಡುವೆ ಶುಕಮುನಿಸ್ವಾಮಿಗಳ ರಥೋತ್ಸವ, ತಾತನ ದರ್ಶನ ಪಡೆದ ಸಾವಿರಾರು ಭಕ್ತರು


Team Udayavani, Mar 2, 2022, 7:19 PM IST

ಭಕ್ತ ಸಾಗರದ ನಡುವೆ ಶುಕಮುನಿಸ್ವಾಮಿಗಳ ರಥೋತ್ಸವ

ದೋಟಿಹಾಳ: ಗ್ರಾಮದ ಶ್ರೀ ಅವಧೂತ ಶುಕಮುನಿಸ್ವಾಮಿಯವರ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ಸಂಜೆ 6.30ಕ್ಕೆ ಮಹಾರಥೋತ್ಸವ ಸಾವಿರಾರು ಭಕ್ತರ ಜಯಕಾರದ ಮಧ್ಯೆ ವಿಜೃಂಬಣೆಯಿಂದ ಜರುಗಿತು.

ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ನಾನಾ ತರಹದ ಹರಕೆಯನ್ನು ತಾತನ ಭಕ್ತಿಗೆ ಸಮರ್ಪಿಸಿದರು. ಜಾತ್ರೆಯ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಪಂಚಾಮೃತಾಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿದ ಧಾರ್ಮಿಕ ವಿಧಿ ವಿಧಾನಗಳನ್ನು, ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಬೆಳಿಗ್ಗೆ ರಥದ ಮುಂದೆ ಹೋಮ ಹವನಗಳು ನೆರವೇರಿದವು ಮತ್ತು ಸುತ್ತಮುತ್ತಲಿನ ಗ್ರಾಮದ ಭಕ್ತರು ಉರುಳುಸೇವೆ, ದೀಡ್ ನಮಸ್ಕಾರ ಇನ್ನಿತರ ಧಾರ್ಮಿಕ ಮಾಡುತ್ತಿದ್ದ ಕಾರ್ಯಕ್ರಮಗಳು ಮಠದ ಅಂಗಳದಲ್ಲಿ ಕಂಡು ಬಂತು.

ರಥೋತ್ಸವ ಜರುಗುವ ಮುಂಚಿತವಾಗಿ ತಾತನವರ ಪಲ್ಲಕ್ಕಿ ಗ್ರಾಮದಲ್ಲಿ ಸಂಚರಿಸಿ ರಥದ ಬೀದಿಗೆ ಬಂದಿತು. ಭಲಿ ಅನ್ನದ ಸಮರ್ಪಣೆ ಮಾಡುವ ಮುಖಾಂತರ ರಥದ ಬೀದಿಯಲ್ಲಿ ಪಲ್ಲಕ್ಕಿಯು ಸಂಚರಿಸಿತು. ನಂತರ ಸಾವಿರಾರು ಭಕ್ತರ ಜಯ ಘೋಷಣೆಗಳೊಂದಿಗೆ ಸ್ವಾಮಿಗಳ ಮಹಾರಥವನ್ನು ಎಳೆದರು.

ಮಠಕ್ಕೆ ತಾಲೂಕಿನ ರಾಜಕೀಯ ಪಕ್ಷಗಳ ಮುಖಂಡರು ಭೇಟಿ ನೀಡಿ ತಾತನ ದರ್ಶನ ಪಡೆದು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಕಮೀಟಿಯ ಅಧ್ಯಕ್ಷ ತಹಶೀಲ್ದಾರ ಎಂ.ಸಿದ್ದೇಶ, ಕಂದಾಯ ಇಲಾಖೆಯ ಸಿಬ್ಬಂದಿಗಳು, ದೋಟಿಹಾಳ, ಕೇಸೂರ ಗ್ರಾಮಗಳ ಸುತ್ತಲಿನ ಗ್ರಾಮಗಳಿಂದ 25 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು.
ಈ ರಥೋತ್ಸವ ಸಂಧರ್ಭದಲ್ಲಿ ಕುಷ್ಟಗಿ ಸಿಪಿಐಯವರು ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದರು.

ಇದನ್ನೂ ಓದಿ : 750 ಅಭ್ಯರ್ಥಿಗಳಿಗೆ ಶಿಷ್ಯವೇತನದ ಜತೆಗೆ ಕೆಪಿಎಸ್‌ಸಿ- ಯುಪಿಎಸ್‌ಸಿ ತರಬೇತಿ

ಭಕ್ತರ ಗಮನ ಸೆಳೆದ ಉದಯವಾಣಿ ವಿಶೇಷ ಪುರವಣಿ: ಕುಷ್ಟಗಿ ತಾಲೂಕಿನಲ್ಲಿ ದೊಡ್ಡ ಜಾತ್ರೆ ಎಂದೇ ಖ್ಯಾತಿ ಪಡೆದ ದೋಟಿಹಾಳ ಗ್ರಾಮದ ಅವಧೂತ ಶುಕಮುನಿಸ್ವಾಮಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತ ‘ಉದಯವಾಣಿ’ಯು ಶುಕಮುನಿಸ್ವಾಮಿಗಳ ಇತಿಹಾಸ, ಪರಂಪರೆ ಹಾಗೂ ಪಲ್ಲಕ್ಕಿಯ ಗತವೈಭವ ಕುರಿತು ಬುಧವಾರ ಹೊರ ತಂದ ವಿಶೇಷ ಪುರಾವಣಿಯನ್ನು ದೋಟಿಹಾಳ ಗ್ರಾಪಂ ಸದಸ್ಯರು ಮತ್ತು ಪಿಡಿಒ ಅವರು ಬಿಡುಗಡೆ ಮಾಡಿದರು. ಇದೇ ವೇಳೆ ಮಠಕ್ಕೆ ಆಗಮೀಸಿದ ಭಕ್ತರಿಗೆ ಕಮೀಟಿಯವರು ವಿಶೇಷ ಪುರಾವಣಿಯ ಪ್ರತಿಕೆಗಳನ್ನು ವಿತರಣೆ ಮಾಡಲಾಯಿತು. ದೂರದ ಗ್ರಾಮಗಳಿಂದ ಆಗಮಿಸಿದ ಭಕ್ತರು ಪತ್ರಿಕೆಯನ್ನು ಆಸ್ತಕಿಯಿಂದ ಓದುವದ್ದು ಮಠದ ಹತ್ತಿರ ಕಂಡುಬಂತು.

ಜಾತ್ರೆಗೆ ಆಗಮೀಸಿದ ಭಕ್ತರಿಗೆ ಹಣ್ಣು-ಹಂಪಲ, ಮಜ್ಜಿಗೆ ವಿತರಣಿ: ದೂರದ ಊರುಗಳಿಂದ ಗ್ರಾಮದ ಆರಾಧ್ಯ ದೈವ ಶ್ರೀ ಅವಧೂತ ಶುಕಮುನಿಸ್ವಾಮಿಯವರ ಜಾತ್ರೆಗೆ ಬಂದ ಯಾತ್ರಿಕರಿಗೆ ಗ್ರಾಮದ ಯುವಕರು ಮಜ್ಜಿಗೆ, ಹಣ್ಣು-ಹಂಪಲ ನೀಡಿ ಬರಮಾಡಿಕೊಂಡರು.

ಸದ್ಯ ಬಿಸಿಲಿ ಹೆಚ್ಚಾಗಿದು ಬಿಸಿನಲ್ಲಿ ಬಂದ ಭಕ್ತರಿಗೆ ಗ್ರಾಮದ ಹಣ್ಣು-ಹಂಪಲ ನೀಡಿ ಜಾತ್ರೆಗೆ ಸ್ವಾಗತ ಮಾಡಿಕೊಳ್ಳುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಯುವಕರು ಪಾತ್ರರಾದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.