ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ
Team Udayavani, Mar 11, 2023, 2:22 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯ ಕುರ್ಕಾಲು ಮತ್ತು ಬಂಟಕಲ್ಲಿನಲ್ಲಿ 2020ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಾಗಲಕೋಟೆಯ ಬಿಲ್ಕೆನೂರು ಜುಮ್ಮಾ ಮಸೀದಿ ಬಳಿಯ ನಿವಾಸಿ ವಿಜಯ ಹುಲಗಪ್ಪ ವಡ್ಡರ್ ಪ್ರೊಕ್ಲಮೇಶನ್ ವಾರೆಂಟ್ ಅಸಾಮಿಯನ್ನು ಶಿರ್ವ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ. (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಅನಿಲ್ ಕುಮಾರ್ ಟಿ. ನಾಯ್ಕ(ತನಿಖೆ) ಅವರ ಮಾರ್ಗದರ್ಶನದಂತೆ ಎಎಸ್ಐ ವಿವೇಕಾನಂದ ಮತ್ತು ಪಿಸಿಗಳಾದ ರಘು ಮತ್ತು ಮಂಜುನಾಥ ನಾಯ್ಕ ಮಾ. 10 ರಂದು ಕಾರವಾರದಲ್ಲಿ ಬಂಧಿಸಿ ಕರೆತಂದಿದ್ದಾರೆ.
ಹೆಡ್ಕಾನ್ಸ್ಟೇಬಲ್ ಭಾಸ್ಕರ್ ಮತ್ತು ಪಿಸಿ ವಿನೋದ್ ಆರೋಪಿಯನ್ನು ಮಾ. 11 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಮಾ. 13 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಈತನ ಮೇಲೆ ಶಿರ್ವ, ಕಾಪು, ವೇಣೂರು, ಮೂಡುಬಿದಿರೆ, ಕಾವೂರು, ಅಂಕೋಲಾ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್