ನಿಸರ್ಗ ಪ್ರಿಯರ ನೆಚ್ಚಿನ ತಾಣ ಶಿವಗಿರಿ ಆಯುರ್ವೇದ ವನ

ವನದಲ್ಲಿವೆ ವಿವಿಧ ಮಾದರಿಯ ಆಯುರ್ವೇದಿಕ ಔಷಧಿ ಸಸ್ಯಗಳು ; ­ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಜಲಮಂದಿರ

Team Udayavani, Jul 25, 2022, 2:59 PM IST

11

ರಬಕವಿ-ಬನಹಟ್ಟಿ: ಜೈನರ ಕಾಶಿ ಎಂದೇ ಖ್ಯಾತಿ ಹೊಂದಿರುವ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟ ಅನೇಕರ ಪರಿಶ್ರಮದಿಂದ ಹಚ್ಚ ಹಸಿರಾಗಿ ಕಂಗೊಳಿಸುತ್ತಿರುವ ಭದ್ರಗಿರಿ ಬೆಟ್ಟದ ಶಿವಗಿರಿ ಆಯುರ್ವೇದ ವನ ನಿಸರ್ಗ ಪ್ರಿಯರನು ಆಕರ್ಷಿಸುತ್ತಿದೆ.

ಕಳೆದ 10 ವರ್ಷಗಳ ಹಿಂದೆ ಬೆಟ್ಟಕ್ಕೆ ಆಗಮಿಸಿದ ಜೈನ ಮುನಿ 108 ಶ್ರೀ ಕುಲರತ್ನಭೂಷಣ ಮಹಾರಾಜರು, ಜೈನ ಧರ್ಮಿಯರನ್ನು ಹಾಗೂ ಅನ್ಯ ಜಾತಿಯರನ್ನೂ ತಮ್ಮ ಪ್ರವಚನದಿಂದ ಜಾಗೃತಿಗೊಳಿಸಿದ್ದಾರೆ. ಲಕ್ಷಾಂತರ ಸಸಿಗಳನ್ನು ನೆಡುವ ದೊಡ್ಡ ಕಾಯಕಕ್ಕೆ ಮುಂದಾಗಿ ತಮ್ಮ ಪರಿಸರ ಪ್ರೇಮವನ್ನು ಭೂತಾಯಿಗೆ ಅರ್ಪಿಸಿದ್ದಾರೆ. ಅನೇಕ ಅನ್ಯ ಧರ್ಮಿಯರ ಸ್ವಾಮೀಜಿಗಳು, ಸಾಹಿತಿಗಳು, ರಾಜಕೀಯ ಮುಖಂಡರು, ರೈತ ಕುಟುಂಬಗಳು ಸೇರಿದಂತೆ ಅನೇಕ ಸಾಧಕರನ್ನು ಇಲ್ಲಿಗೆ ಆಹ್ವಾನಿಸಿ ಅವರ ಹಸ್ತದಿಂದ ಲಕ್ಷಾಂತರ ಸಸಿಗಳನ್ನು ನೆಟ್ಟಿದ್ದಾರೆ.

ಇಲ್ಲಿಗೆ ಬರುವ ಅನೇಕ ಶ್ರಾವಕ ಶ್ರಾವಕಿಯರು, ಕುಮಾರ ಕುಮಾರಿಕೆಯರು ಮಹಾರಾಜರ ಆಶೀರ್ವಾದ ಪಡೆದುಕೊಂಡು ಪ್ರತಿಯೊಬ್ಬರು ಪ್ರತಿದಿನ ಗಿಡಗಳಿಗೆ ನೀರು ಹಾಕುವ ಕಾಯಕದಲ್ಲಿ ನಿರತರಾಗುತ್ತಾರೆ. ಎರಡು ಮೂರು ಎಕರೆಯಲ್ಲಿ ಶಿವಗಿರಿ ವನ ಎಂದು ನಾಮಕರಣ ಮಾಡಿದ ಮುನಿಗಳು, ಅಲ್ಲಿ ಸಾವಿರಾರು ಆಯುರ್ವೇದ ಸಸಿ ನೆಟ್ಟಿದ್ದಾರೆ. ಈಗ ಆಳೆತ್ತರಕ್ಕೆ ಬೆಳೆದು ಆಯುರ್ವೇದ ಔಷಧಿ ನೀಡಲು ಸಿದ್ಧವಾಗಿವೆ.

ಇಲ್ಲಿ ಪೆರಲು, ಚಿಕ್ಕು, ಸಿತಾಫಲ, ಮಾವು, ಹುಣಸೆ, ಟೆಂಗು, ಸುಬಾಬುಲ, ಆಲ, ಅರಳಿಮರ, ಗುಲಗಂಜಿ, ಹನುಮ ಫಲ, ರಾಮಫಲ, ನೇರಳೆ, ಬೆಟ್ಟದ ನೆಲ್ಲಿ, ನೀಲಗಿರಿ, ಸಂಪಿಗೆ, ಬೇವು, ಗುಡ್ಡದ ತುಳಸಿ, ಹೊಂಗೆ ಸೇರಿದಂತೆ ಐದು ನೂರಕ್ಕೂ ವಿವಿಧ ಮಾದರಿಯ ಆಯುರ್ವೇದಿಕ ಔಷಧಿ ನೀಡುವ ಗಿಡಗಳು ಹೆಮ್ಮರವಾಗಿವೆ.

ಪ್ರವಾಸಿಗರು ಹಾಗೂ ಸಾವಿರಾರು ಭಕ್ತರನ್ನು ತನ್ನತ್ತ ಕೈಬೀಸಿ ಕರೆಯಲು ಇಲ್ಲಿನ ಕೆರೆಯಲ್ಲಿ ಜಲಮಂದಿರ ನಿರ್ಮಿಸಲಾಗಿದೆ. ಬೆಟ್ಟದಲ್ಲಿ ಜೈನ ಧರ್ಮಿಯರ ಸಾವಿರಾರು ವರ್ಷಗಳ ಹಿಂದಿನವು ಎನ್ನಲಾಗುವ 750 ಕ್ಕೂ ಹೆಚ್ಚು ಗುಂಪಾಗಳಿವೆ. ಸುಂದರವಾದ ಹಸಿರಿನ ತಪ್ಪಲಿನಲ್ಲಿ ನೂತನವಾಗಿ ಕೃತಕ ಮೂರ್ತಿಗಳನ್ನು ನಿರ್ಮಿಸಿದ್ದಾರೆ. ಇವೆಲ್ಲವನ್ನು ರಕ್ಷಿಸಲು ಕೃತಕವಾಗಿ ನಿರ್ಮಿಸಿದ ಭದ್ರಗಿರಿ ಮಾತೆಯ ಮೂರ್ತಿ ಸುಂದರವಾಗಿ ನಿರ್ಮಿಸಿದ್ದು, ಈ ಬೆಟ್ಟಕ್ಕೆ ಮತ್ತಷ್ಟು ಮೆರಗು ನೀಡುತ್ತಿದೆ. ಸಂಜೆ ಹಾಗೂ ಬೆಳಗ್ಗೆ ನವಿಲುಗಳು, ಹಕ್ಕಿಗಳ ಚಿಲಿಪಿಲಿ ಹಾಗೂ ಅನೇಕ ಜಾತಿಯ ಪಕ್ಷಿಗಳು ಇಲ್ಲಿ ತಂಡತಂಡವಾಗಿ ಬಂದು ನರ್ತಿಸಿ ಹೂವಿನ ಮಕರಂದ ಹಾಗೂ ಹಣ್ಣು ಹಂಪಲ ತಿಂದು ಹೋಗುವ ಸನ್ನಿವೇಶವ ನೋಡುಗರಿಗೆ ಮುದ ನೀಡುತ್ತವೆ.

ಧರ್ಮ ಜಾಗೃತಿಯೊಂದಿಗೆ ಪರಿಸರ ಬೆಳೆಸಿ ರಕ್ಷಣೆ ಮಾಡುತ್ತಿರುವ ಜೈನ ಮುನಿ ಕುಲರತ್ನಭೂಷಣ ಮಹಾರಾಜರ ಸೇವೆ ಶ್ಲಾಘನಿಯ ಎಂದು ಇಲ್ಲಿಗೆ ಆಗಮಿಸುತ್ತಿರುವ ಅನೇಕ ಜೈನ್‌ ಹಾಗೂ ಅನ್ಯ ಧರ್ಮಿಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.