ಕೋಟ್ಯಂತರ ಮನಸುಗಳ ಕನಸು ಸಾಕಾರವಾದ ದಿನ: ಸಂಸದ ಉದಾಸಿ
Team Udayavani, Aug 6, 2020, 2:09 PM IST
ಹಾನಗಲ್ಲ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಿರುವುದು ಐತಿಹಾಸಿಕ ಮತ್ತು ಭಾವಪೂರ್ಣ ಕ್ಷಣವಾಗಿದೆ. ಕೋಟ್ಯಂತರ ಮನಸುಗಳ ಕನಸು ಸಾಕಾರಗೊಂಡ ದಿನವಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಬಣ್ಣಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾಜಪ ಹಿರಿಯ ನಾಯಕ ಲಾಲ್ಕೃಷ್ಣ ಅಡ್ವಾನಿ, ಮುರಳಿ ಮನೋಹರ ಜೋಶಿ ಮತ್ತು ರಾಮ ಮಂದಿರ ನಿರ್ಮಾಣದ ನಿರಂತರ ಹೋರಾಟದಲ್ಲಿ ಭಾಗವಹಿಸಿದ ಮುಖಂಡರು, ನಾಯಕರು, ಕಾರ್ಯಕರ್ತರು, ಅಖಂಡ ನಿಷ್ಠೆ, ತ್ಯಾಗ ಬಲಿದಾನಗೈದ ಮಹನೀಯರಿಗೆ ಕೃತಜ್ಞತೆ ಸಲ್ಲಿಸಿ ದ್ದಾರೆ. ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳ ಕೀರ್ತಿ ಪತಾಕೆ ಹಾರಿಸಿರುವ
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ಸಾಧನೆ, ಇಚ್ಛಾಶಕ್ತಿಯಿಂದ ಇಡಿ ದೇಶಕ್ಕೆ ದೇಶವೇ ಸಡಗರ, ಸಂಭ್ರಮದಲ್ಲಿ
ತೊಡಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ