ಅಭಿವೃದ್ಧಿ ಕಾರ್ಯ ಶೀಘ್ರ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಸಂಸದರ ಸೂಚನೆ
Team Udayavani, Aug 13, 2020, 11:38 AM IST
ಗದಗ: ನಗರಸಭೆ ವ್ಯಾಪ್ತಿಯಲ್ಲಿ ಕೈಗೊಂಡ ನೀರು ಸರಬರಾಜು ಹಾಗೂ ಒಳಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಸಂಸದ ಶಿವಕುಮಾರ್ ಉದಾಸಿ
ಅಧಿಕಾರಿಗಳಿಗೆ ಸೂಚಿಸಿದರು.
ಗದಗ-ಬೆಟಗೇರಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೃತ್ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಸ್ಟಿಪಿಯಲ್ಲಿ ಮಲೀನ ನೀರು ಸಂಗ್ರಹವಾಗದಂತೆ ಕ್ರಮ ಕೈಗೊಳ್ಳಬೇಕು. ಪಂಪಿಂಗ್ ಯಂತ್ರ ಸ್ಥಗಿತಗೊಳ್ಳದಂತೆ ನಿಗಾವಹಿಸಬೇಕು. ಸೀವೇಜ್ಗೆ ನೀರು ಸರಿಯಾಗಿ ಹರಿದು ಹೋಗುವಂತೆ ಚರಂಡಿಗಳ ಮುಖ್ಯ
ಕೊಳವೆ ಮಾರ್ಗಗಳನ್ನು ಪುನಶ್ಚೇತನಗೊಳಿಸಬೇಕು. ಈಗಿರುವ ಸೀವರ್ ನೆಟ್ವರ್ಕ್ನ್ನು ಪುನರುಜ್ಜೀವನಗೊಳಿಸಬೇಕು ಎಂದರು.
ನಿಗದಿತ ಅವ ಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ನಗರದಲ್ಲಿ ಪ್ರತಿ ಮನೆಗೂ ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸಬೇಕು. ಇನ್ನುಳಿದ 25 ಕಿ.ಮೀ. ಪೈಪ್ಲೈನ್ ಕಾಮಗಾರಿಯನ್ನು ವಿಳಂಬ
ಮಾಡಬಾರದು ಎಂದು ಸೂಚಿಸಿದರು.
ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಮಾತನಾಡಿ, ಹಮ್ಮಿಗಿ ಬ್ಯಾರೆಜ್ನಿಂದ ಡಂಬಳವರೆಗೆ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಸುಮಾರು 65 ಕಿ.ಮೀ.ವರೆಗೆ ಪೈಪ್ಲೈನ್ ಅಳವಡಿಸಲಾಗಿದೆ. ನಗರದ ಒಳಚರಂಡಿ ಯೋಜನೆಯ ಮೊದಲ ಹಂತದ ಸುಮಾರು 15 ಕೋಟಿ ರೂ. ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಅಮೃತ್ ಯೋಜನೆಯಡಿ ಎರಡನೇ ಹಂತದ ಒಳಚರಂಡಿ
ಯೋಜನೆಯ ದುರಸ್ತಿ ಹಾಗೂ ನಿರ್ವಹಣೆಗಾಗಿ 158 ಕೋಟಿ ರೂ. ಮೀಸಲಿಡಲಾಗಿದ್ದು, ಕಾಮಗಾರಿ ಅಂತಿಮ ಹಂತದಲ್ಲಿದೆ. ಅಮೃತ್ ಯೋಜನೆಯ ಹೆಚ್ಚುವರಿ ಅನುದಾನದಡಿ ಹಾಲಿ ಸೀವರ್ ನೆಟ್ ವರ್ಕ್ ಪುನರುಜ್ಜೀವನಗೊಳಿಸಲು 2 ಕೋಟಿ ರೂ.
ಅನುದಾನದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದರು.
2015-16ನೇ ಸಾಲಿನಿಂದ 2018-19ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಗಳಡಿ ಒಟ್ಟು 6,939 ಮನೆಗಳ ನಿರ್ಮಾಣ ಗುರಿ
ನಿಗದಿಪಡಿಸಲಾಗಿದ್ದು, ಅದರಲ್ಲಿ 944 ಮನೆಗಳು ಪೂರ್ಣಗೊಂಡಿವೆ. ಅದರಂತೆ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗುಂಪು ವಸತಿ ಯೋಜನೆಯಡಿ 3,994 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪೌರಾಯುಕ್ತ ಮನ್ಸೂರ್ ಅಲಿ ತಿಳಿಸಿದರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಆಯುಕ್ತ ರಮೇಶ ಹಾಗೂ ವಿವಿಧ ಇಲಾಖೆಯ ಅಧಿ ಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!