Shivamogga : ಕ್ಷುಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಕೊಲೆ
Team Udayavani, Jun 5, 2023, 9:05 AM IST
ಶಿವಮೊಗ್ಗ: ಕ್ಷುಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ಗೆ ಜೂ. 4 ಭಾನುವಾರ ರಾತ್ರಿ ಡ್ರ್ಯಾಗರ್ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಬಾರ್ ವೊಂದರಲ್ಲಿ ಸಂಭವಿಸಿದೆ.
ಬಾರ್ ಕ್ಯಾಶಿಯರ್ ಸಚಿನ್ (27) ಕೊಲೆಯಾದ ವ್ಯಕ್ತಿ.
ಬಾರ್ ಬಂದ್ ಮಾಡುವ ಸಮಯವಾದರು ಆಯನೂರು ತಾಂಡಾದ ಮೂವರು ಮದ್ಯ ಸೇವಿಸುತ್ತಿದ್ದರು. ಬಾರ್ ಸಿಬ್ಬಂದಿ ಸಮಯವಾಗಿದೆ ಎಂದು ತಿಳಿಸಿದ್ದು, ಆದರೆ ತಾವು ಇನ್ನೂ ಮದ್ಯ ಸೇವಿಸಬೇಕಿದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.
ಆಗ ಬಾರ್ನ ಅಸಿಸ್ಟೆಂಟ್ ಕ್ಯಾಶಿಯರ್ ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಬರುತ್ತಿದ್ದಂತೆ ಕ್ಯಾಶಿಯರ್ ಸಚಿನ್ ವಿರುದ್ಧ ಮೂವರು ಯುವಕರು ಆಕ್ರೋಶಗೊಂಡು ಹಲ್ಲೆ ನಡೆಸಿದ್ದಾರೆ.
ಈ ಪೈಕಿ ಓರ್ವ ಯುವಕ ಬಿಯರ್ ಬಾಟಲಿಯನ್ನು ತಲೆಗೆ ಹೊಡದುಕೊಂಡು ಬಾರ್ ಸಿಬ್ಬಂದಿಗೆ ಚುಚ್ಚಲು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಅಸಿಸ್ಟೆಂಟ್ ಕ್ಯಾಶಿಯರ್ ಅರುಣ್ ಕುಮಾರ್ ಕೈಗೆ ಸಣ್ಣ ಗಾಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ವೇಳೆ ಓರ್ವ ಯುವಕ ತನ್ನ ಬಳಿ ಇದ್ದ ಡ್ರ್ಯಾಗರ್ ತೆಗೆದು ಕ್ಯಾಶಿಯರ್ ಸಚಿನ್ ಎದೆಯ ಬಲಭಾಗಕ್ಕೆ ಚುಚ್ಚಿದ್ದಾನೆ. ಗಂಭೀರ ಗಾಯಗೊಂಡಿದ್ದ ಸಚಿನ್ನನ್ನು ಬಾರ್ ಸಿಬ್ಬಂದಿ ತಕ್ಷಣ ಆಯನೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ 108 ಆಂಬುಲೆನ್ಸ್ನಲ್ಲಿ ನಂಜಪ್ಪ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಸಚಿನ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!