ಮೈ ಮರೆತು ದಂಗಾದ ಕಾಂಗ್ರೆಸ್‌ ನಾಯಕರು


Team Udayavani, Jul 2, 2019, 3:07 AM IST

congress-logo

ಬೆಂಗಳೂರು: ಇಬ್ಬರು ಪಕ್ಷೇತರರನ್ನು ಸಂಪುಟಕ್ಕೆ ಸೇರಿಸಿಕೊಂಡು ಸರ್ಕಾರ ಭದ್ರಪಡಿಸಿದ್ದೇವೆ ಎಂದು ಹೆಮ್ಮೆಯಿಂದ ಮೈ ಮರೆತು ತಿರುಗಾಡುತ್ತಿದ್ದ ಕಾಂಗ್ರೆಸ್‌ ನಾಯಕರಿಗೆ ಅಪಶಕುನ ಶುರುವಾದಂತಿದೆ. ಇದರ ಬೆನ್ನಲ್ಲೇ ಪಕ್ಷದಲ್ಲಿಯೇ ಅನುಮಾನದ ಹೊಗೆಯೂ ಆಡುತ್ತಿದೆ.

ಪಕ್ಷದಲ್ಲಿ ಕಳೆದ ಆರು ತಿಂಗಳಿನಿಂದ ಬಂಡಾಯ ಶಾಸಕರು ಮೇಲಿಂದ ಮೇಲೆ ರಾಜೀನಾಮೆ ಎಚ್ಚರಿಕೆ ನೀಡುತ್ತಿದ್ದರೂ, ಅತೃಪ್ತರನ್ನು ಕಡೆಗಣಿಸಿ, ಪಕ್ಷೇತರ ಶಾಸಕರಿಗೆ ಮಣೆ ಹಾಕಿದ್ದು, ಅತೃಪ್ತ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗುವಂತೆ ಮಾಡಿತ್ತು.

ಆದರೆ, ತಕ್ಷಣವೇ ನಾಯಕರ ತಂತ್ರಕ್ಕೆ ಪ್ರತಿ ತಂತ್ರ ರೂಪಿಸದೇ ತೆರೆ ಮರೆಯಲ್ಲಿಯೇ ಕಾರ್ಯತಂತ್ರ ರೂಪಿಸಿರುವ ಅತೃಪ್ತ ಶಾಸಕರು ರಾಜಿನಾಮೆ ಪರ್ವ ಆರಂಭಿಸಿರುವುದು, ಮೈತ್ರಿ ಸರ್ಕಾರದ ಭವಿಷ್ಯವನ್ನು ಡೋಲಾಯಮಾನದಲ್ಲಿ ಇಡುವಂತೆ ಮಾಡಿದೆ.

5 ತಿಂಗಳ ಹಿಂದೆ ಬಜೆಟ್‌ ಅಧಿವೇಶನದ ಸಂದರ್ಭದಲ್ಲಿಯೇ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಶಾಸಕರು ಪಕ್ಷದ ನಾಯಕರ ವಿರುದ್ಧ ಬಂಡಾಯವೆದ್ದು ರಾಜೀನಾಮೆ ನೀಡಲು ಮುಂದಾಗಿದ್ದರು. ಆಗ ಮೇಲಿಂದ ಮೇಲೆ ವಿಪ್‌ ಜಾರಿ ಮಾಡಿ, ಬಜೆಟ್‌ ಅನುಮೋದನೆಯ ದಿನ ಅಧಿವೇಶನಕ್ಕೆ ಹಾಜರಾಗುವಂತೆ ಮಾಡುವಲ್ಲಿ ಮೈತ್ರಿ ಪಕ್ಷಗಳ ನಾಯಕರು ಯಶಸ್ವಿಯಾಗಿದ್ದರು.

ಆ ನಂತರ ರಮೇಶ್‌ ಜಾರಕಿಹೊಳಿ ಜೊತೆಗೆ ಗುರುತಿಸಿಕೊಳ್ಳುವ ಶಾಸಕರನ್ನು ಪ್ರತ್ಯೇಕವಾಗಿ ಕರೆದು ಅವರ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡುತ್ತ ಕಾಲ ಹರಣ ಮಾಡುತ್ತ ಬಂದರು. ಇದಾದ ನಂತರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಹೀನಾಯ ಸೋಲು ಕಂಡಾಗ ಸರ್ಕಾರ ಪತನವಾಗುವ ಭೀತಿಯಿಂದ ಸಂಪುಟ ಪುನಾರಚನೆಯ ಪ್ರಯತ್ನಕ್ಕೆ ಕೈ ಹಾಕಿ,

ಇಬ್ಬರು ಪಕ್ಷೇತರರನ್ನು ಮಾತ್ರ ಸೇರಿಸಿಕೊಂಡು ಬಿಜೆಪಿಯ ಆಪರೇಷನ್‌ ಕಮಲಕ್ಕೆ ಬ್ರೇಕ್‌ ಹಾಕಿದ್ದೇವೆ ಎಂದು ರಾಜಕೀಯ ಜಾಣ್ಮೆ ಪ್ರದರ್ಶನ ಮಾಡಿದ್ದೇವೆಂದು ಬೆನ್ನು ತಟ್ಟಿಕೊಂಡಿದ್ದರು. ಕಾಂಗ್ರೆಸ್‌ ನಾಯಕರ ಈ ನಡೆ ಅತೃಪ್ತ ಶಾಸಕರಲ್ಲಿ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು.

ಹೀಗಾಗಿ ಪಕ್ಷದ ನಾಯಕರ ವಿರುದ್ಧ ಸಿಡಿದೇಳಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದರು. ಬಂಡಾಯಗಾರರು ರಾಜೀನಾಮೆಗೆ ನಿರ್ಧರಿಸುವ ಮೊದಲೇ ಆನಂದ್‌ಸಿಂಗ್‌ ರಾಜಿನಾಮೆ ನೀಡುವ ಮೂಲಕ ಕೈ ನಾಯಕರಿಗೆ ಶಾಕ್‌ ನೀಡಿದ್ದು, ಇದು ಕಾಂಗ್ರೆಸ್‌ ಪಾಳಯದಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ.

ಕನಿಷ್ಠ ಆರು ತಿಂಗಳು ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದುಕೊಂಡಿದ್ದ ಕಾಂಗ್ರೆಸ್‌ ನಾಯಕರಿಗೆ ದಿಢೀರ್‌ ಬೆಳವಣಿಗೆ ಮಳೆಗಾಲದ ಅಧಿವೇಶನಕ್ಕೂ ಮುನ್ನವೇ ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆಯಾ ಎಂಬ ಚರ್ಚೆಗೆ ಗ್ರಾಸವಾಗಿದೆ. ಆದರೆ, ಬಿಜೆಪಿಗೆ ಬೇಕಾದಷ್ಟು ಶಾಸಕರು ರಾಜೀನಾಮೆ ನೀಡುವುದಿಲ್ಲ ಎನ್ನುವ ಸಮಾಧಾನದ ನಡುವೆಯೇ ಕೈ ನಾಯಕರು ಅತೃಪ್ತರನ್ನು ಉಳಿಸಿಕೊಳ್ಳುವ ಕಸರತ್ತು ಆರಂಭಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಬಿಟ್ಟರೆ ಬೇರೆ ಯಾರಿಗೂ ಮೈತ್ರಿ ಸರ್ಕಾರ ಮುಂದುವರೆಯುವುದು ಬೇಕಾಗಿಲ್ಲ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ. ಸರ್ಕಾರ ಮುಂದುವರೆಸಿದಷ್ಟು ಪಕ್ಷಕ್ಕೆ ಹಾನಿಯೇ ಹೆಚ್ಚು ಎಂಬ ಅಭಿಪ್ರಾಯ ಬಹುತೇಕ ನಾಯಕರಲ್ಲಿ ಮೂಡಿದ್ದು,

ಇತ್ತೀಚೆಗೆ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿಯೂ ಈ ರೀತಿಯ ಅಭಿಪ್ರಾಯ ವ್ಯಕ್ತವಾಗಿತ್ತು. ಅದೇ ಕಾರಣಕ್ಕೆ ಶಾಸಕರ ರಾಜಿನಾಮೆ ಪರ್ವಕ್ಕೆ ಚಾಲನೆ ದೊರೆತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಸಮಸ್ಯೆ ಎದುರಾಗಿದ್ದು, ಸಿದ್ದರಾಮಯ್ಯ ಮತ್ತೆ ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಅದರ ಒಂದು ಭಾಗವಾಗಿಯೇ ಶಾಸಕರ ರಾಜಿನಾಮೆ ಪರ್ವ ಆರಂಭವಾಗಿದೆ ಎನ್ನಲಾಗಿದ್ದು, ಅತೃಪ್ತರನ್ನು ಉಳಿಸಿಕೊಳ್ಳುವ ನೆಪದಲ್ಲಿ ಸಿದ್ದರಾಮಯ್ಯ ಎಲ್ಲವನ್ನೂ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.