Supreme Court: ಆದೇಶದ ಮೂಲಕ ಶಿಶುವನ್ನು ಕೊಲ್ಲಲ್ಲುಅನುಮತಿ ನೀಡಬೇಕೇ?- ಸುಪ್ರೀಂ ಪ್ರಶ್ನೆ
Team Udayavani, Oct 12, 2023, 7:51 PM IST
ನವದೆಹಲಿ: 26 ವಾರದ ಗರ್ಭಿಣಿಯಾಗಿದ್ದ ವಿವಾಹಿತ ಮಹಿಳೆಯ ವೈದ್ಯಕೀಯ ಗರ್ಭಪಾತಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಈ ವೇಳೆ ಸಿಜೆಐ ಡಿ.ವೈ.ಚಂದ್ರಚೂಡ್, “ಅರ್ಜಿದಾರರು ನ್ಯಾಯಾಲಯದ ಆದೇಶದ ಮೂಲಕ ಶಿಶುವನ್ನು ಕೊಲ್ಲಲು ಅನುಮತಿ ಬಯಸಿದ್ದಾರೆಯೇ’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠ, ಶುಕ್ರವಾರದ ವಿಚಾರಣೆಗೂ ಮುನ್ನ ಅರ್ಜಿದಾರ ಮಹಿಳೆಯೊಂದಿಗೆ ಮಾತುಕತೆ ನಡೆಸುವಂತೆ ಅರ್ಜಿದಾರರ ಪರ ನ್ಯಾಯವಾದಿಗಳು ಹಾಗೂ ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಗೆ ನಿರ್ದೇಶಿಸಿತು. “26 ವಾರಗಳವರೆಗೂ ಮಹಿಳೆ ಏನು ಮಾಡುತ್ತಿದ್ದರು? ಆಕೆಗೆ ಈಗಾಗಲೇ 2 ಮಕ್ಕಳಿವೆ. ಈಗ ಏಕೆ ಗರ್ಭಪಾತಕ್ಕೆ ಮುಂದಾಗಿದ್ದಾರೆ’ ಎಂದು ನ್ಯಾಯಪೀಠ ಪ್ರಶ್ನಿಸಿತು.
“ವೈದ್ಯರ ವರದಿ ಪ್ರಕಾರ, ಪರಿಸ್ಥಿತಿ ತುಂಬ ಸೂಕ್ಷ್ಮವಾಗಿದೆ. ಮಗು ಹುಟ್ಟಲು ಸಿದ್ಧವಾಗಿದೆ. ಭ್ರೂಣವು ಜೀವನದ ಲಕ್ಷಣಗಳನ್ನು ತೋರಿಸುತ್ತಿದೆ. ಹೀಗಾಗಿ ಗರ್ಭಪಾತಕ್ಕೆ ಅವಕಾಶ ನೀಡಬಾರದು’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ವಾದಿಸಿದ್ದಾರೆ. ಮೂರನೇ ಬಾರಿಗೆ ಗರ್ಭ ಧರಿಸಿದ್ದ ಮಹಿಳೆಯು, ತಾನು ಖನ್ನತೆಯಿಂದ ಬಳಲುತ್ತಿದ್ದು, ಭಾವನಾತ್ಮಕವಾಗಿ, ಆರ್ಥಿಕವಾಗಿ, ಮಾನಸಿಕವಾಗಿ ಮೂರನೇ ಮಗುವನ್ನು ಬೆಳೆಸುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಗರ್ಭಪಾತಕ್ಕೆ ಅನುಮತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಈ ಪ್ರಕರಣಕ್ಕೆ ಸಂಬಂಧಸಿದಂತೆ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠದಿಂದ ಭಿನ್ನ ತೀರ್ಪು ಬಂದಿತು. ಹೀಗಾಗಿ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ