ಸಿದ್ದಾಪುರ ಗ್ರಾಮ ಪಂಚಾಯತಿಯಿಂದ ಕಲುಷಿತ ನೀರು ಸರಬರಾಜು: ಯುವ ಕಾಂಗ್ರೆಸ್‌ನಿಂದ ಮುತ್ತಿಗೆ


Team Udayavani, Jun 8, 2020, 12:59 PM IST

ಸಿದ್ದಾಪುರ ಗ್ರಾಮ ಪಂಚಾಯತಿನಿಂದ ಕಲುಷಿತ ನೀರು ಸರಬರಾಜು: ಯುವ ಕಾಂಗ್ರೆಸ್‌ನಿಂದ ಮುತ್ತಿಗೆ

ಸಿದ್ದಾಪುರ: ಸಿದ್ದಾಪುರ ಗ್ರಾ.ಪಂ. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ನೀಡುವ ಬದಲು ವಾರಾಹಿ ಕಾಲುವೆಯ ಕಲುಷಿತ ನೀರನ್ನು ಟ್ಯಾಂಕರ್‌ ಮೂಲಕ ತುಂಬಿಸಿ ಸರಬರಾಜು ಮಾಡುವ ಬಗ್ಗೆ ವಂಡ್ಸೆ ಬ್ಲಾಕ್‌ ಯುವ ಕಾಂಗ್ರೆಸ್‌ ನೇತೃತ್ವದಲ್ಲಿ ಕುಡಿಯುವ ನೀರು ಬಳಕೆದಾರರು ಪಂಚಾಯತ್‌ಗೆ ಮುತ್ತಿಗೆ ಹಾಕಿದ ಘಟನೆಯು ಸೋಮವಾರ ನಡೆಯಿತು.

ಕಲುಷಿತ ನೀರನ್ನು ಗ್ರಾಮಸ್ಥರಿಗೆ ಕೊಡುತ್ತಿರುವ ಗುತ್ತಿಗೆದಾರ ಹಾಗೂ ಅದರ ನಿರ್ವಹಣೆ ಮಾಡುತ್ತಿರುವ ಗ್ರಾ.ಪಂ. ಸದಸ್ಯ ಶೇಖರ ಕುಲಾಲ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಟೆಂಡರ್‌ನ್ನು ರದ್ದು ಮಾಡುವುದರ ಜತೆಯಲ್ಲಿ ಬಿಲ್‌ನ್ನು ತಡೆಹಿಡಿಯಬೇಕು. ಈ ರೀತಿಯಲ್ಲಿ ಗುತ್ತಿಗೆದಾರರು ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುತ್ತಿದ್ದರೂ, ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು. ಗುತ್ತಿಗೆದಾರರಿಂದ ಟ್ಯಾಂಕರ್‌ ಚಾಲಕನಿಗೆ ಜೀವ ಬೆದರಿಕೆ ಬರುತ್ತಿರುವುದರಿಂದ ಚಾಲಕನಿಗೆ ರಕ್ಷಣೆ ಕೊಡಬೇಕು ಎಂದು ಹೇಳಿದರು. ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಂಚಾಯತ್‌ ಎದುರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಇರುವ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಪಡೆದ ಗುತ್ತಿಗೆದಾರರು, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಬದಲಿಗೆ ವಾರಾಹಿ ಕಾಲುವೆಯ ಕಲುಷಿತ ನೀರನ್ನು ಟ್ಯಾಂಕರ್‌ ಮೂಲಕ ಸರಬರಾಜು ಮಾಡುತ್ತಿದ್ದರು. ಇದನ್ನು ಖಂಡಿಸಿದ ನೀರು ಬಳಕೆದಾರರು ತಮ್ಮ ಮೊಬೈಲ್‌ ಮೂಲಕ ಕಾರೆಬೈಲು ಬಳಿ ವಾರಾಹಿ ಕಾಲುವೆಯ ಕಲುಷಿತ ನೀರನ್ನು ಟ್ಯಾಂಕರ್‌ ಮೂಲಕ ತುಂಬಿಸುತ್ತಿರುವ ಚಿತ್ರವನ್ನು ಸೆರೆಹಿಡಿದರು. ಜತೆಯಲ್ಲಿ ವೀಡಿಯೋ ಮಾಡಿದ್ದರು. ಗುತ್ತಿಗೆದಾರರು ಕಲುಷಿತ ನೀರನ್ನು ಜನರಿಗೆ ಕೊಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಾರಾಹಿ ಕಾಲುವೆಯ ಕಲುಷಿತ ನೀರನ್ನು ಗ್ರಾಮಸ್ಥರಿಗೆ ಕುಡಿಯಲು ನೀಡಿರುವ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ಬಿಲ್‌ನ್ನು ತಡೆಹಿಡಿಯುವಂತೆ ಸಂಬಂಧಪಟ್ಟ ಮೇಲಿನ ಅಧಿಕಾರಿಗಳಿಗೆ ಪತ್ರ ಬರೆಯುತ್ತೇವೆ ಎಂದು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್‌ ಅವರು ಹೇಳಿದರು. ಕುಡಿಯುವ ನೀರಿನ ಬಳಕೆದಾರರ ದೂರಿನ ಮನವಿಯನ್ನು ಸ್ವೀಕರಿಸಿ, ಸಂಬಂಧಪಟ್ಟವರಿಗೆ ಕಳುಹಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ ಪೂಜಾರಿ, ವಂಡ್ಸೆ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ತಾ.ಪಂ. ಸದಸ್ಯ ಎಸ್‌.ಕೆ. ವಾಸುದೇವ ಪೈ, ಗ್ರಾ.ಪಂ. ಸದಸ್ಯರಾದ ಮಂಜುನಾಥ ಕುಲಾಲ, ಕೆ. ಸತೀಶಕುಮಾರ ಸೆಟ್ಟಿ ಕಡ್ರಿ, ಮಾಜಿ ಸದಸ್ಯ ಎಚ್‌. ಸುಧಾಕರ ಶೆಟ್ಟಿ, ಕೆಪಿಸಿಸಿ ಸೋಷಿಯಲ್‌ ಮೀಡಿಯಾ ಉಡುಪಿ ಜಿಲ್ಲಾ ಸಂಚಾಲಕ ದಿನೇಶ ನಾಯ್ಕ ಹಳ್ಳಿಹೊಳೆ, ಬೈಂದೂರು ವಿಧಾನ ಪರಿಷತ್‌ನ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸುದರ್ಶನ ಶೆಟ್ಟಿ ಬಾಳೆಬೇರು, ಜಯಕರ್ನಾಟಕ ಸಿದ್ದಾಪುರ ಘಟಕದ ಅಧ್ಯಕ್ಷ ರಾಘವೇಂದ್ರ ಕೊಠಾರಿ, ಕೃಷ್ಣ ಪೂಜಾರಿ, ಪ್ರಕಾಶ ಶೆಟ್ಟಿ ಹರ್ಕೆಬಾಳು, ಶಶಿಧರ ಜನ್ಸಾಲೆ, ರಾಘು ಜನ್ಸಾಲೆ, ರಮೇಶ ಜನ್ಸಾಲೆ, ಟ್ಯಾಂಕರ್‌ ಚಾಲಕ ಪುಂಡಲಿಕ ಮತ್ತು ಕುಡಿಯುವ ನೀರಿನ ಬಳಕೆದಾರರು ಭಾಗವಹಿಸಿದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.