ಸಿದ್ದಾಪುರ ಏತ ನೀರಾವರಿ ಯೋಜನೆ : ಮುಂದಿನ ಬಜೆಟ್‌ನಲ್ಲಿ ಅನುಮೋದನೆ ನಿರೀಕ್ಷೆ


Team Udayavani, Feb 27, 2022, 1:13 PM IST

ಸಿದ್ದಾಪುರ ಏತ ನೀರಾವರಿ ಯೋಜನೆ : ಮುಂದಿನ ಬಜೆಟ್‌ನಲ್ಲಿ ಅನುಮೋದನೆ ನಿರೀಕ್ಷೆ

ಕುಂದಾಪುರ: ವಾರಾಹಿ ಬಲದಂಡೆ ಹಾದುಹೋಗುವ ಅಚ್ಚುಕಟ್ಟು ಪ್ರದೇಶದ ಸಾವಿರಾರು ಹೆಕ್ಟೇರ್‌ ಪ್ರದೇಶಗಳಿಗೆ ನೀರು ಒದಗಿಸುವ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಮುಂಬರುವ ಬಜೆಟ್‌ನಲ್ಲಿ ಅನುಮೋದನೆ ಸಿಗುವ ನಿರೀಕ್ಷೆಯಿದೆ. ಈ ಸಂಬಂಧ ಈಗಾಗಲೇ ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿಯನ್ನು ಸ್ವತಃ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಹೊಳೆ ಶಂಕರನಾರಾಯಣ ಬಳಿ ವಾರಾಹಿ ನದಿಯಿಂದ ಸುಮಾರು 53.67 ಕ್ಯೂಸೆಕ್ಸ್‌ ನೀರನ್ನು ಮೇಲಕ್ಕೆತ್ತಿ ಸಿದ್ದಾಪುರ, ಆಜ್ರಿ, ಕೊಡ್ಲಾಡಿ, ಹೊಸಂಗಡಿ, ಕರ್ಕುಂಜೆ ಆಸುಪಾಸಿನ 1,200 ಹೆಕ್ಟೇರ್‌ ಭೂ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆ ಇದಾಗಿದೆ.

0.54 ಟಿಎಂಸಿ ನೀರು ಅಗತ್ಯ
ಈ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಈಗಾಗಲೇ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲಾಗಿದ್ದು, 165 ಕೋ.ರೂ. ವೆಚ್ಚದ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಗೆ 0.54 ಟಿಎಂಸಿ ನೀರಿನ ಆವಶ್ಯಕತೆಯಿದೆ. ಸಿದ್ದಾಪುರ ಗ್ರಾಮದ ಮೂಲಕ ಹಾದು ಹೋಗುವ ವಾರಾಹಿ ಕಾಲುವೆಯ ನೀರನ್ನು ಕಾಶಿಕಾಲು ಕೆರೆಗೆ ಹಾಯಿಸಿ, ಕುಬ್ಜಾ ನದಿ ಮೂಲಕ ಹರಿಸುವ ಯೋಜನೆಯಿದು.

ಸಿಎಂಗೆ ಪ್ರಸ್ತಾವನೆ ಸಲ್ಲಿಕೆ
ಈ ಸಿದ್ದಾಪುರ ಏತ ನೀರಾವರಿ ಯೋಜನೆಯನ್ನು 2019ರಲ್ಲಿ ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ ಬಳಿಕ ಮಾತ್ರ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಬಾಳ್ಕಟ್ಟು ನದಿ ನೀರು ಬಳಕೆದಾರರ ಸಮಿತಿ ಸಿದ್ದಾಪುರ, ಜಿಲ್ಲಾ ರೈತ ಸಂಘವು ಈ ಬಗ್ಗೆ ಅನೇಕ ಸಮಯದಿಂದ ಒತ್ತಾಯಿಸುತ್ತಲೇ ಇದೆ. ಈಗ ಅನುದಾನ ಬಿಡುಗಡೆಗಾಗಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿಯವರು ಈ ಬಗ್ಗೆ ಪ್ರಯತ್ನ ಮುಂದುವರಿಸಿದ್ದಾರೆ. ಫೆ.26ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಸಂಸದರು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್‌ನಲ್ಲಿ ಅನುಮೋದನೆ ಸಿಗುವ ನಿರೀಕ್ಷೆಯಿದೆ.

ಸಿಎಂಗೆ ಮನವಿ ಸಲ್ಲಿಕೆ
ಸಿದ್ದಾಪುರ ಏತ ನೀರಾವರಿ ಯೋಜನೆಗೆ ಅನುದಾನ ಬಿಡುಗಡೆ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ಮನವಿ ಸಲ್ಲಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾಗುವ ಸಾಧ್ಯತೆಯಿದೆ.
– ಬಿ.ವೈ. ರಾಘವೇಂದ್ರ, ಸಂಸದ

ಶೀಘ್ರ ಅನುಮೋದನೆ
ಸಿದ್ದಾಪುರ ಏತ ನೀರಾವರಿ ಯೋಜನೆ ಬಗ್ಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಸಂಸದರ ಗಮನಕ್ಕೂ ತರಲಾಗಿದೆ. ಈ ಸಂಬಂಧ ಸಂಸದರು ಸಿಎಂ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಆದಷ್ಟು ಬೇಗ ಅನುಮೋದನೆ ಸಿಗುವ ನಿರೀಕ್ಷೆಯಿದೆ.
– ಬಿ.ಎಂ. ಸುಕುಮಾರ್‌ ಶೆಟ್ಟಿ, ಶಾಸಕ

ಪ್ರಯೋಜನವೇನು?
ವಾರಾಹಿ ಬಲದಂಡೆ ಕಾಲುವೆ ಹಾದುಹೋಗುವ ಸಿದ್ದಾಪುರ ಸುತ್ತಮುತ್ತಲಿನ ಕೆಲವೊಂದು ಗ್ರಾಮಗಳು ಎತ್ತರದ ಪ್ರದೇಶದಲ್ಲಿ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಇದರಿಂದಾಗಿ ಈ ಎತ್ತರದ ಪ್ರದೇಶಗಳು ನೀರಾವರಿ ಸೌಲಭ್ಯದಿಂದ ವಂಚಿತರಾಗಿದ್ದು, ಇದಲ್ಲದೆ ಈ ಭಾಗದಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯು ತಲೆದೋರುತ್ತದೆ. ಇಲ್ಲಿನ 1,200 ಹೆಕ್ಟೇರ್‌ ಪ್ರದೇಶಕ್ಕೆ ವರದಾನವಾಗುವ ನಿಟ್ಟಿನಲ್ಲಿ ಸಿದ್ದಾಪುರ ಏತ ನೀರಾವರಿ ಯೋಜನೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.