ಸಂಪುಟ ವಿಸ್ತರಿಸದಿರಲು ವಿಜಯೇಂದ್ರರಿಗೆ ಮಂತ್ರಿ ಪಟ್ಟ ತಪ್ಪಿಸುವುದು ಕಾರಣ: ಸಿದ್ದು
Team Udayavani, Feb 6, 2023, 8:49 PM IST
ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರರಿಗೆ ಮಂತ್ರಿ ಪಟ್ಟ ತಪ್ಪಿಸುವುದಕ್ಕಾಗಿ ಸಂಪುಟವನ್ನೇ ವಿಸ್ತರಣೆ ಮಾಡಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪರಿಗೆ ಬಿಜೆಪಿ ಅನ್ಯಾಯ ಮಾಡಿತು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿ ಆರೆಸ್ಸೆಸ್ನವರು ಬಸವರಾಜ ಬೊಮ್ಮಾಯಿ ಅವರನ್ನು ಕೂರಿಸಿದರು.
ಈಗ ಬಿಎಸ್ವೈ ಹಾಗೂ ಬಸವರಾಜ ಬೊಮ್ಮಾಯಿ ನಡುವೆ ಆಗಿ ಬರುತ್ತಿಲ್ಲ. ಬಿಎಸ್ವೈ ಮಗನಿಗೆ ಮಂತ್ರಿ ಮಾಡದಿರುವ ಜತೆಗೆ, ಹೆಚ್ಚು ಲಂಚ ಸಿಗಲಿ ಎಂಬ ಕಾರಣಕ್ಕೆ ಎಲ್ಲ ಖಾತೆಗಳನ್ನು ಸಿಎಂ ತಮ್ಮ ಬಳಿಯೇ ಇಟ್ಟುಕೊಂಡರು ಎಂದರು.
ಚುನಾವಣೆ ಬಳಿಕ ಯಾರು ತೀರ್ಥಯಾತ್ರೆಗೆ ಹೋಗುತ್ತಾರೆ ಎಂಬುದು ಗೊತ್ತಾಗುತ್ತದೆ. ಅವರಿಗಿಂತ ಎಷ್ಟೋ ವರ್ಷಗಳಿಗಿಂತ ಮುಂಚೆ ರಾಜಕೀಯಕ್ಕೆ ಬಂದವನು ನಾನು. ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಕಂದಾಯ ಸಚಿವ ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ