ಸಿದ್ದರಾಮಯ್ಯ ಮತ್ತು ನಾನು ಜೋಡೆತ್ತು ಇದ್ದಂತೆ : ಪರಮೇಶ್ವರ್
Team Udayavani, Nov 25, 2019, 8:21 PM IST
ಹುಣಸೂರು: ಸಿದ್ದರಾಮಯ್ಯ ಮತ್ತು ನಾನು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕಾಂಗ್ರೆಸ್ನ ಜೋಡೆತ್ತುಗಳು ಕೂಡ. ಆದರೆ ಮಾಧ್ಯಮಗಳಲ್ಲಿ ಯಾವುದೋ ಹಳೆಯ ಫೋಟೋಗಳನ್ನು ಹಾಕಿ, ನನಗೂ ಸಿದ್ದರಾಮಯ್ಯ ಅವರಿಗೂ ಆಗುವುದಿಲ್ಲ ಎಂದು ಬಿಂಬಿಸುತ್ತಾರೆ. ವಾಸ್ತವವಾಗಿ ನಾವಿಬ್ಬರೂ ಕಾಂಗ್ರೆಸ್ ಪಕ್ಷದಲ್ಲಿ ಜೋಡೆತ್ತುಗಳು ಎಂದು ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದರು.
ತಾಲೂಕಿನ ಕಟ್ಟೆಮಳಲವಾಡಿ ಹಾಗೂ ಬನ್ನಿಕುಪ್ಪೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ವಿಶ್ವಣ್ಣ, ದೇವರಾಜ ಅರಸರ ಗರಡಿಯಲ್ಲಿ ಬೆಳೆದು ಇದೀಗ ಸಂವಿಧಾನವನ್ನೇ ಬುಡಮೇಲು ಮಾಡುವಂತ ಹೇಳಿಕೆ ನೀಡುತ್ತಿರುವ ಬಿಜೆಪಿ ಪಕ್ಷಕ್ಕೆ ಸೇರಿದ್ದಿರಲ್ಲಾ? ನಿಮಗ್ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಎಲ್ಲ ಅಧಿಕಾರವನ್ನು ಕಲ್ಪಿಸಿತ್ತು. ಕಾಂಗ್ರೆಸ್ ಎಂದರೆ ಬಡವರ, ಶೋಷಿತರ, ಹಿಂದುಳಿದ ವರ್ಗಗಳ, ನೊಂದವರ ಪರ ಪಕ್ಷ. ಆದರೆ ಬಿಜೆಪಿ ಈಗ ದೇಶದಲ್ಲಿ ಒಡೆದಾಳುವ ನೀತಿ ಹಾಗೂ ಆಪರೇಷನ್ ಕಮಲದಿಂದ ಅಧಿಕಾರ ಹಿಡಿಯುವ ಸ್ಥಿತಿಗೆ ತಲುಪಿದೆ. ಅಂತಹ ಪಕ್ಷಕ್ಕೆ ಸೇರಿದ್ದೀರಲ್ಲಾ? ನಾಚಿಕೆಯಾಗುವುದಿಲ್ಲವಾ? ಎಂದು ತರಾಟೆಗೆ ತೆಗೆದುಕೊಂಡರು.
ಜೆಡಿಎಸ್ನಲ್ಲಿ ಎಲ್ಲ ಅಧಿಕಾರ ಅನುಭವಿಸಿ ಅವರಿಗೂ ಕೈಕೊಟ್ಟು ಈಗ ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಬರೆದಿಲ್ಲವೆಂದು ಹೇಳಿಕೊಳ್ಳುವ ಬಿಜೆಪಿ ಜತೆ ಸೇರಿಕೊಂಡಿರುವ ವಿಶ್ವನಾಥ್ ಅವರಂತಹ ಪûಾಂತರಿಗಳನ್ನು ಜನರು ಸೋಲಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ