ಸಿದ್ದರಾಮಯ್ಯ ಮೂಲ ಕಾಂಗ್ರೆಸ್ಸಿಗರಲ್ಲ


Team Udayavani, Dec 8, 2019, 3:07 AM IST

siddarma-moola

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂಲ ಕಾಂಗ್ರೆಸ್ಸಿಗರಲ್ಲ. ಅಧಿಕಾರಕ್ಕಾಗಿ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಜಿಗಿದವರು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ಮೊಳಕಾಲ್ಮೂರು ತಾಲೂಕು ಬಾಂಡ್ರಾವಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನಲ್ಲಿ ಉಪಮುಖ್ಯಮಂತ್ರಿ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಕಾಂಗ್ರೆಸ್‌ ಸೇರಿದ್ದರು. ಮುಂದೆ ಕಾಂಗ್ರೆಸ್‌ನಿಂದ ಎಲ್ಲಿಗೆ ಜಿಗಿಯುತ್ತಾರೋ ಗೊತ್ತಿಲ್ಲ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆ ತರುವುದಾಗಿ ರಮೇಶ್‌ ಜಾರಕಿಹೊಳಿ ನೀಡಿರುವ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ಸಿಎಂ ಮಾಡ್ತೀನಿ ಅಂದ್ರೆ ಸಿದ್ದರಾಮಯ್ಯ ಯಾರ ಹಿಂದೆ ಬೇಕಾದರೂ ಹೋಗುತ್ತಾರೆ. ಏಕೆಂದರೆ ಅವರು ಕಷ್ಟ ಪಟ್ಟು ಮೇಲೆ ಬಂದ ವ್ಯಕ್ತಿ ಅಲ್ಲ. ಇರುವೆ ಕಟ್ಟಿದ ಹುತ್ತದೊಳಗೆ ಹಾವಿನಂತೆ ಬಂದು ಸೇರಿಕೊಂಡು ಹುತ್ತವನ್ನೇ ನಾಶ ಮಾಡುವ ವ್ಯಕ್ತಿ. ಅವರಿಗೆ ಸಿದ್ಧಾಂತದ ರಾಜಕಾರಣ ಗೊತ್ತಿಲ್ಲ. ಪಕ್ಷದಿಂದ ಪಕ್ಷಕ್ಕೆ ಪಕ್ಷಾಂತರ ಮಾಡುವುದಷ್ಟೇ ಗೊತ್ತಿರಬಹುದು ಎಂದು ಕುಟುಕಿದರು.

ಕಾಂಗ್ರೆಸ್ಸನ್ನೇ ಜನ ಅಟ್ಟಾಡಿಸಿ ಹೊಡೆದಿದ್ದಾರೆ: ಬಿಜೆಪಿಯವರು ಮತ್ತೆ ಆಪರೇಷನ್‌ ಕಮಲ ಮಾಡಿದರೆ ಜನ ಅಟ್ಟಾಡಿಸಿ ಹೊಡೆಯುತ್ತಾರೆ ಎನ್ನುವ ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದ ಶ್ರೀರಾಮುಲು, ಈಗಾಗಲೇ ದೇಶಾದ್ಯಂತ ಜನ ಕಾಂಗ್ರೆಸ್ಸನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಯಾವ ರಾಜ್ಯದಲ್ಲೂ ಬಹುಮತ ಇಲ್ಲದ ಸ್ಥಿತಿಗೆ ಕಾಂಗ್ರೆಸ್‌ ತಲುಪಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್‌ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದರು.

ಉಪ ಚುನಾವಣೆ ನಡೆದ ರಾಜ್ಯದ 15 ಕ್ಷೇತ್ರಗಳ ಪೈಕಿ ಏಳೆಂಟು ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. 12 ರಿಂದ 13 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದವರು ಬಿಜೆಪಿಗೆ ಹೆಚ್ಚು ಮತ ಹಾಕಿದ್ದಾರೆ ಎಂದು ಹೇಳಿದರು.

ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರದು
ಬೆೆಳಗಾವಿ: ಈ ಉಪಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ನಮ್ಮ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುತ್ತದೆ. ಸಮೀಕ್ಷೆಗಳು ಕೆಲವೊಮ್ಮೆ ಬೇರೆಯಾಗಬಹುದು. ಗೋಕಾಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಪಕ್ಷಗಳಿಗೆ ಗೆಲ್ಲುವ ಸಮಾನ ಅವಕಾಶವಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ನಿರೀಕ್ಷೆ ಪ್ರಕಾರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ.

ಜೆಡಿಎಸ್‌ ಜತೆ ಹೊಂದಾಣಿಕೆ ಬಗ್ಗೆ ಈಗಲೇ ಹೇಳಲು ಆಗುವುದಿಲ್ಲ. ಈಗಿನ ಸ್ಥಿತಿಯಲ್ಲಿ ಹೊಂದಾಣಿಕೆ ಬಹಳ ಕಷ್ಟ. ನಮ್ಮದೇನಿದ್ದರೂ ಮುಂದಿನ ಚುನಾವಣೆಗೆ ಸಿದ್ಧರಾಗುವುದು ಎಂದು ಹೇಳಿದರು. ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆದು ತರುತ್ತೇನೆ ಎಂದು ಹೇಳುವ ರಮೇಶ, ಸುದ್ದಿಯಲ್ಲಿರಲು ದಿನಾ ಒಂದು ಹೇಳಿಕೆ ಕೊಡುತ್ತಾನೆ. ಒಳ್ಳೆಯದು ಅಥವಾ ಕೆಟ್ಟದ್ದನ್ನು ನೋಡದೇ ಮಾತನಾಡುತ್ತಾನೆ. ಹೀಗಾಗಿ, ರಮೇಶನನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದು ಕಿಡಿ ಕಾರಿದರು.

ರಮೇಶ ತನ್ನ ನೆಲೆ ಬಿಟ್ಟು ಬೇರೆಯವರ ನೆಲೆ ಮೇಲೆ ಬಂದು ಕೂಡುತ್ತಾನೆ. ಬೇರೆಯವರ ಬಗ್ಗೆ ಟೀಕೆ ಮಾಡುತ್ತಾನೆ. ಸುದ್ದಿಯಲ್ಲಿರಲು ಸಂಬಂಧವಿಲ್ಲದ ಹೇಳಿಕೆಗಳನ್ನು ನೀಡುವುದು ರಮೇಶ ಕೆಲಸ ಎಂದು ಏಕವಚನದಲ್ಲಿ ಟೀಕಿಸಿದರು. ಬಿಜೆಪಿ ಗರ್ಭಗುಡಿ ಇದ್ದ ಹಾಗೆ. ಒಳಗೆ ಮಂಗಳಾರತಿ ಮಾಡುವುದಕ್ಕೆ ಪೂಜಾರಿಗಳು ಇರುತ್ತಾರೆ.

ಹೊರಗಿನಿಂದ ಬಂದು ತೀರ್ಥ ಪ್ರಸಾದ ತೆಗೆದುಕೊಂಡು ಹೋಗುವವರು ಬೇರೆ. ಅಲ್ಲಿ ರಮೇಶನದ್ದು ಇದೇ ವ್ಯವಸ್ಥೆಯಾಗಿದೆ ಎಂದರು.  ರಮೇಶ ಬಿಜೆಪಿಯಲ್ಲಿ ಮೂರನೇ ಸ್ಥಾನದಲ್ಲಿ ಇರುತ್ತಾನೆ. ಇನ್ನು ಬಿಜೆಪಿಗೆ ಹೋಗಿರುವ 15 ಶಾಸಕರ ಆಸೆಗಳನ್ನು ಪೂರೈಸುವುದು ಯಡಿಯೂರಪ್ಪ ಅಲ್ಲ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಸೇರಿ ಯಾರಿಂದಲೂ ಸಾಧ್ಯವಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಖರ್ಗೆ ಸಿಎಂ ಆಗಬೇಕು ಎಂದು ಹೇಳಿರುವ ಮಾಜಿ ಪ್ರಧಾನಿ ದೇವೇಗೌಡರ ರಾಜಕೀಯ ನಡೆಯನ್ನು ಇದುವರೆಗೆ ಯಾರಿಗೂ ಕಂಡು ಹಿಡಿಯಲು ಆಗಿಲ್ಲ. ಆದರೆ, ದೇವೇಗೌಡರು ಯಾವಾಗಲೂ ಬಿಜೆಪಿಗೆ ವಿರೋಧವಾಗಿರುತ್ತಾರೆ ಎಂಬುದು ನಮ್ಮ ಆಶಯ ಎಂದು ಮಾರ್ಮಿಕವಾಗಿ ಹೇಳಿದರು.

ನನಗೂ ಸಚಿವ ಸ್ಥಾನ ಬೇಕು
ಹೊನ್ನಾಳಿ: “ನಾನೇನು ರಾಜಕೀಯ ಸನ್ಯಾಸಿಯಲ್ಲ. ಉಪ ಚುನಾವಣೆ ಫಲಿತಾಂಶದ ನಂತರ ನಡೆಯುವ ಸಂಪುಟ ಪುನರ್‌ ರಚನೆ ವೇಳೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುವೆ’ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರಿಗೆ ಮೊದಲು ಸಚಿವ ಸ್ಥಾನ ನೀಡಲಿ.

ನಂತರ, ನನಗೂ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡುತ್ತೇನೆ ಎಂದರು. ಪಕ್ಷ ಸಂಘಟನೆಯಲ್ಲಿ ಸಂಪೂರ್ಣ ತೊಡಗಿಸಿಕೊಂಡಿರುವುದಲ್ಲದೆ ಮುಖ್ಯಮಂತ್ರಿಗಳು ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿರುವೆ. ಹೀಗಾಗಿ, ತಮಗೆ ಸಚಿವ ಸ್ಥಾನ ನೀಡುತ್ತಾರೆಂಬ ವಿಶ್ವಾಸವಿದೆ ಎಂದರು.

ಪೂರ್ಣಾವಧಿ ಸರ್ಕಾರ: ಉಪಚುನಾವಣೆಯಲ್ಲಿ 10 ರಿಂದ 12 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೂ ಮೂರೂವರೆ ವರ್ಷ ಅಧಿ ಕಾರ ನಡೆಸುತ್ತಾರೆ. ವಿಪಕ್ಷಗಳ ಲೆಕ್ಕಾಚಾರವನ್ನು ರಾಜ್ಯದ ಜನತೆ ಈಗಾಗಲೇ ಉಲ್ಟಾ ಮಾಡಿದ್ದಾರೆ. ಮೂರೂವರೆ ವರ್ಷ ವಿಪಕ್ಷ ಸ್ಥಾನದಲ್ಲಿದ್ದು, ಆಡಳಿತ ಪಕ್ಷದ ತಪ್ಪು-ಒಪ್ಪುಗಳನ್ನು ತಿಳಿಸುವುದನ್ನು ಬಿಟ್ಟು ಅಧಿಕಾರದ ಹಗಲು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.