ಡಿಕೆಶಿ ಬಂಧನಕ್ಕೆ ಸಿದ್ದರಾಮಯ್ಯ ಕಾರಣ


Team Udayavani, Sep 9, 2019, 3:09 AM IST

dk-bandhana

ವಿಜಯಪುರ/ಬಾಗಲಕೋಟೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿದೆ. ನಮಗೆ ಸಿದ್ದರಾಮಯ್ಯ ಮೇಲೆ ಸಂಶಯ ಇದೆ. ಡಿಕೆಶಿ ಮೇಲೆ ಪ್ರಕರಣ ದಾಖಲಾಗಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್‌ ಗಂಭೀರ ಆರೋಪ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಡಿಕೆಶಿ ರಾಜಕೀಯವಾಗಿ ಬೆಳೆಯುತ್ತಾರೆಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಶಿವಕುಮಾರ್‌ ಅವರನ್ನು ರಾಜ್ಯ ಸರ್ಕಾರ ಬಂಧಿಸಿಲ್ಲ. ಯಾವುದೇ ಲೋಕಾಯುಕ್ತ ಅಧಿಕಾರಿಗಳು ಒಳಗೆ ಹಾಕಿಲ್ಲ. 2017ರಲ್ಲಿ ಐಟಿ ದಾಳಿಯಾದಾಗ ಕಾಂಗ್ರೆಸ್‌ ಸರ್ಕಾರವೇ ಇತ್ತು. ಆಗ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು.

ಮನಸ್ಸು ಮಾಡಿದ್ದರೆ ಆಗ ಸಿದ್ದರಾಮಯ್ಯನವರು ದಾಳಿಯನ್ನು ನಿಲ್ಲಿಸಬೇಕಿತ್ತು ಎಂದರು. ಶಿವಕುಮಾರ್‌ ಅವರ ಮನೆ, ಕಚೇರಿಗಳ ಮೇಲೆ 2017ರಲ್ಲಿಯೇ ದಾಳಿಯಾಗಿತ್ತು. ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ. ರಾಜಕೀಯ ದ್ವೇಷ ಮಾಡುವುದಿದ್ದರೆ ವಿಧಾನಸಭೆ ಚುನಾವಣೆಗೂ ಮುಂಚೆಯೇ ಮಾಡಬಹುದಿತ್ತು. ಚುನಾವಣೆಗೂ ಮುಂಚೆಯೇ ಡಿಕೆಶಿಯವರನ್ನು ಜೈಲಿಗೆ ಹಾಕಬಹುದಿತ್ತು ಎಂದರು.

ಐಟಿ, ಇ.ಡಿ.ಯವರು ದಾಖಲೆ ನೋಡಿಕೊಂಡು ಪ್ರಕರಣ ದಾಖಲಿಸುತ್ತಾರೆ. ಅವು ಸ್ವಾಯತ್ತ ಸಂಸ್ಥೆಗಳು. ಬಿಜೆಪಿ ಹುಟ್ಟು ಹಾಕಿದ ಸಂಸ್ಥೆಗಳಲ್ಲ. ಡಿಕೆಶಿ ಭ್ರಷ್ಟಾಚಾರ ಆರೋಪದಲ್ಲಿ ಒಳಗೆ ಹೋಗಿದ್ದಾರೆ. ಕಾಂಗ್ರೆಸ್‌ನವರಿಗೆ ಈಗ ಮುಖ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ, ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

17 ಸ್ಥಾನದಲ್ಲೂ ನಮ್ಮದೇ ಗೆಲುವು: ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಮರು ಚುನಾವಣೆ ಎದುರಿಸಲು ನಾವು ಸಜ್ಜಾಗಿದ್ದೇವೆ. ರಾಜಕೀಯ ಪಕ್ಷಗಳಿಗೆ ಚುನಾವಣೆ ಎಂಬುದು ಒಂದು ಯುದ್ಧ ಇದ್ದಂತೆ. ರಣರಂಗದಲ್ಲಿ ತಂತ್ರಗಾರಿಕೆ ಇದ್ದದ್ದೇ. 17 ಕ್ಷೇತ್ರಗಳಲ್ಲೂ ತಂತ್ರಗಾರಿಕೆ ಮೂಲಕ ನಾವು ಗೆಲ್ಲುತ್ತೇವೆ ಎಂದರು.

ಬಿಎಸ್‌ವೈ ಜತೆ ಭಿನ್ನಾಭಿಪ್ರಾಯ ಇಲ್ಲ: “ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಸಿಎಂ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಮತ ವ್ಯಕ್ತವಾಗಿಲ್ಲ. ಯಡಿಯೂರಪ್ಪ ನನಗೆ ಮಾರ್ಗದರ್ಶಕರು. ಪಕ್ಷ ಸಂಘಟಿಸುವ ಕುರಿತು ಉತ್ತಮ ಚರ್ಚೆಯಾಗಿದೆ. ನಮ್ಮ ಕಡೆ ಕಾಫಿ ಪ್ಲ್ರಾಂಟರ್‌ ಥರ ನ್ಯೂಸ್‌ ಪ್ಲ್ಯಾಂಟರ್‌ ಈ ಸುದ್ದಿಯನ್ನು ಸೃಷ್ಟಿಸಿದ್ದಾರೆ’ ಎಂದರು.

ಈಶ್ವರಪ್ಪ ಹೇಳಿಕೆಗೆ ಸಮರ್ಥನೆ: ಪ್ರವಾಹ ಸಂತ್ರಸ್ತರಿಗೆ ಹತ್ತು ಸಾವಿರ ರೂ.ಪರಿಹಾರ ಕೊಟ್ಟಿದ್ದೆ ಜಾಸ್ತಿ ಎಂದಿರುವ ಈಶ್ವರಪ್ಪನವರ ಭಾವನೆಯಲ್ಲಿ ವ್ಯತ್ಯಾಸವಿರಬಹುದು. ಹತ್ತು ಸಾವಿರ ಕೊಟ್ಟಿದ್ದೇವೆ ಎಂಬ ಕಲ್ಪನೆಯಲ್ಲಿ ಅವರು ಹಾಗೆ ಹೇಳಿರಬೇಕು. ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಪ್ರವಾಹ ಬಂದ ಬಳಿಕ ಸಿಎಂ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡಿದ್ದಾರೆ. ಯಾವ ಸಿಎಂ ಕೂಡ ಈ ರೀತಿ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡಲಿಲ್ಲ.

ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಹತ್ತು ಸಾವಿರ ರೂ. ನೀಡಲಾಗಿದೆ. ಹಿಂದೆ, ಪ್ರವಾಹ ಬಂದಾಗ ಯಾವ ಮುಖ್ಯಮಂತ್ರಿಯೂ ಈ ರೀತಿ ನೆರವು ನೀಡಿರಲಿಲ್ಲ. ಹಿಂದಿನ ಸರ್ಕಾರ ಮನೆ ಕಟ್ಟಿಸಿಕೊಳ್ಳಲು ಕೇವಲ 92 ಸಾವಿರ ರೂ.ಕೊಟ್ಟಿದೆ. ನಾವು ಮನೆ ಬಿದ್ದವರಿಗೆ ಐದು ಲಕ್ಷ ರೂ. ಘೋಷಣೆ ಮಾಡಿದ್ದೇವೆ. ಈಗಾಗಲೇ ಅಮಿತ್‌ ಶಾ ಬಂದಿದ್ದಾರೆ. ಸರ್ವೇ ಪ್ರಕಾರ ಹಣ ಬಿಡುಗಡೆ ಮಾಡಲಾಗುತ್ತದೆ. ವರದಿ ನಂತರ ಎಷ್ಟು ಅನುದಾನ ಬೇಕಾಗುತ್ತೋ, ಅಷ್ಟನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ ಎಂದರು.

ಶಾಸಕ ಯತ್ನಾಳ್‌ ಟೀಕೆಯನ್ನು ಮಾರ್ಗದರ್ಶನ ಎಂದು ಪರಿಗಣಿಸುತ್ತೇನೆ. ಅವರು ಹೇಳಿದಂತೆ ನಾನು ಮಂಗಳೂರು, ಉಡುಪಿಯಲ್ಲಿ ಸಕ್ರಿಯನಾಗಿದ್ದೆ. ಕೇರಳ ಬಿಜೆಪಿ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಪಕ್ಷ ನನಗೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದು, ಇನ್ನು ಮುಂದೆ ರಾಜ್ಯಾದ್ಯಂತ ಸಂಚರಿಸಿ, ಪಕ್ಷ ಸಂಘಟಿಸುತ್ತೇನೆ.
-ನಳೀನ್‌ಕುಮಾರ ಕಟೀಲ್‌, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.