ರಾಜ್ಯ ಸಾಲದ ಸುಳಿಗೆ ಸಿಲುಕುವ ಆತಂಕ: ಸಿದ್ದರಾಮಯ್ಯ


Team Udayavani, Mar 19, 2020, 9:01 PM IST

ರಾಜ್ಯ ಸಾಲದ ಸುಳಿಗೆ ಸಿಲುಕುವ ಆತಂಕ: ಸಿದ್ದರಾಮಯ್ಯ

ವಿಧಾನಸಭೆ: ರಾಜ್ಯ ಸರ್ಕಾರದ ಸಾಲ ಪ್ರಮಾಣ ಹೆಚ್ಚುತ್ತಿದ್ದು, ಇದೇ ರೀತಿ ಮುಂದುವರಿದರೆ 2023-24ರ ಹೊತ್ತಿಗೆ ರಾಜ್ಯದ ಒಟ್ಟು ಸಾಲ ಪ್ರಮಾಣ 5.65 ಕೋಟಿ ರೂ. ಏರಿಕೆಯಾಗುವ ಅಂದಾಜು ಇದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಆರ್ಥಿಕತೆಗೆ ಕತ್ತಲು ಆವರಿಸುವ ಲಕ್ಷಣ ಕಾಣುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, 2020-21ನೇ ಸಾಲಿನಲ್ಲಿ ಸಾಲ ಪ್ರಮಾಣ 3.68 ಕೋಟಿ ರೂ. ನಷ್ಟಕ್ಕೆ ಏರಿಕೆಯಾಗಲಿದೆ. ವಿತ್ತೀಯ ಶಿಸ್ತಿನ ಮಿತಿಯೊಳಗೆ ಸಾಲ ಪಡೆಯುತ್ತಿದ್ದರೂ ಒಟ್ಟು ಸಾಲ ಪ್ರಮಾಣ ಹೆಚ್ಚಾಗುತ್ತಿರುವುದು ಉತ್ತಮ ಆರ್ಥಿಕತೆಯ ಲಕ್ಷಣವಲ್ಲ. ಹಾಗಾಗಿ ಪರಿಹಾರ ಕ್ರಮಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕಿದೆ ಎಂದು ಹೇಳಿದರು.

2022-23ನೇ ಸಾಲಿನಲ್ಲಿ ಅಂದಾಜು ಆದಾಯ, ವೆಚ್ಚಕ್ಕೆ ಹೋಲಿಸಿದರೆ 30,743 ಕೋಟಿ ರೂ. ಕೊರತೆ ಉಂಟಾಗುವ ನಿರೀಕ್ಷೆ ಇದೆ. ಹಾಗೆಯೇ 2023-24ನೇ ಸಾಲಿಗೆ 46,832 ಕೋಟಿ ರೂ. ಕೊರತೆಯಾಗುವ ಅಂದಾಜು ಇದೆ. ಹೀಗೆ ಆದಾಯಕ್ಕಿಂತ ವೆಚ್ಚ ಹೆಚ್ಚಾಗುತ್ತಾ ಹೋದರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾದರೂ ಹೇಗೆ. ಇದಕ್ಕಾಗಿ ನಾವೆಲ್ಲಾ ಕಷ್ಟಪಟ್ಟು ಇಲ್ಲಿಗೆ ಬರಬೇಕೆ ಎಂದು ಮಾರ್ಮಿಕವಾಗಿ ನುಡಿದರು.

ಬದ್ಧತಾ ವೆಚ್ಚ ತಗ್ಗಿಸಿ
2020-21ನೇ ಸಾಲಿನಲ್ಲಿ 1.77 ಲಕ್ಷ ಕೋಟಿ ರೂ. ಆದಾಯ ನಿರೀಕ್ಷಿಸಿದ್ದರೆ ಅದರಲ್ಲಿ ಬದ್ಧತಾ ವೆಚ್ಚ ಪ್ರಮಾಣ 1.55 ಕೋಟಿ ರೂ.ನಷ್ಟಿರಲಿದೆ ಎಂದು ಅಂದಾಜಿಸಲಾಗಿದೆ. ಅದರಂತೆ ಒಟ್ಟು ಆದಾಯದಲ್ಲಿ ಶೇ. 90ರಷ್ಟು ಹಣ ಬದ್ಧತಾ ವೆಚ್ಚಗಳಿಗೆ ವಿನಿಯೋಗವಾಗಲಿದೆ. ಬದ್ಧತಾ ವೆಚ್ಚ ಪ್ರಮಾಣವನ್ನು ಶೇ. 75ರಷ್ಟಕ್ಕೆ ಇಳಿದರೆ 22,000 ಕೋಟಿ ರೂ.ನಷ್ಟು ಹಣ ಇತರೆ ಕಾರ್ಯಗಳಿಗೆ ಬಳಸಲು ಅವಕಾಶವಾಗಲಿದೆ. ಈ ಬಗ್ಗೆ ಗಮನ ಹರಿಸಬೇಕು. ಇಲ್ಲದಿದ್ದರೆ ಕೃಷ್ಣಾ ಮೇಲ್ದಂಡೆ ಯೋಜನೆಗೆ 10,000 ಕೋಟಿ ರೂ. ಎಲ್ಲಿಂದ ಹೊಂದಿಸುತ್ತೀರಿ. ಇತರೆ ಅಭಿವೃದ್ಧಿ ಕಾರ್ಯ ಹೇಗೆ ಕೈಗೊಳ್ಳುತ್ತೀರಿ ಎಂದು ಪ್ರಶ್ನಿಸಿದರು.

ಆಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ವಿಶ್ವ ಬ್ಯಾಂಕ್‌ನಿಂದ ಸಾಲ ತರುತ್ತೇವೆ. ಬುಧವಾರ ನಬಾರ್ಡ್‌ ಅಧಿಕಾರಿಗಳೊಂದಿಗೂ ಚರ್ಚಿಸಲಾಗಿದೆ. ಸಾಧ್ಯವಿರುವ ಕಡೆ ಸಾಲ ತರೋಣ. ನೀರಾವರಿ ಯೋಜನೆಗಳು ಸೇರಿದಂತೆ ಅಗತ್ಯವಿರುವ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮುಂದಿನ ಮೂರು ವರ್ಷದಲ್ಲಿ ಮಾಡಿ ತೋರಿಸುತ್ತೇನೆ. ಹೇಗೆ ಮಾಡುತ್ತೇವೆ ಎಂದು ಮುಂದೆ ನೋಡಿ. ಸಲಹೆಗಳಿದ್ದರೆ ಕೊಡಿ ಎಂದು ಹೇಳಿದರು. ಆಗ ಸಿದ್ದರಾಮಯ್ಯ, ನಾನೂ ಎಲ್ಲಿಯೂ ಓಡಿ ಹೋಗಲ್ಲ. ಇಲ್ಲೇ ಇರುತ್ತೇನೆ, ನೋಡುತ್ತೇನೆ. ಕಷ್ಟಪಟ್ಟು ಈ ಸ್ಥಾನಕ್ಕೆ ಬಂದಿದ್ದೀರಿ. ಉತ್ತಮವಾಗಿ ನಿಭಾಯಿಸಿ ತೋರಿಸಿ ಎಂದರು.

ಸರಿಪಡಿಸಲು ಪ್ರಯತ್ನಿಸೋಣ
ಮುಂದಿನ ದಿನಗಳಲ್ಲಿ ಕರ್ನಾಟಕದ ಆರ್ಥಿಕತೆ ಕತ್ತಲು ಆವರಿಸುವ ಲಕ್ಷಣ ಕಾಣುತ್ತಿದೆ. ಹಾಗಾಗಿ ನಾವೆಲ್ಲಾ ಪಕ್ಷಭೇದ ಮರೆತು ಸರಿಪಡಿಸಲು ಪ್ರಯತ್ನ ನಡೆಸಬೇಕಿದೆ. ಬದ್ಧತಾ ವೆಚ್ಚವನ್ನು ಶೇ. 70ಕ್ಕೆ ಇಳಿಸಬೇಕು. ಜಿಎಸ್‌ಟಿ ವ್ಯವಸ್ಥೆಯಲ್ಲಿನ ನ್ಯೂನತೆ ಸರಿಪಡಿಸಬೇಕು. ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡುವ ತೆರಿಗೆ ಪಾಲು ಭಿಕ್ಷೆಯಲ್ಲ. ಕೇಂದ್ರೀಯ ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಬೇಕು ಎಂದು ಒತ್ತಡ ಹಾಕಬೇಕು ಎಂದು ಸಲಹೆ ನೀಡಿದರು.

ಹೋರಾಟ ಮಾಡಿ
14ನೇ ಹಣಕಾಸು ಆಯೋಗದ ಶಿಫಾರಸಿನಡಿ ರಾಜ್ಯಕ್ಕೆ ನಿಗದಿಪಡಿಸಿದ್ದ ಶೇ.4.71ರಷ್ಟು ಪಾಲಿನ ಮೊತ್ತವನ್ನೇ 15ನೇ ಹಣಕಾಸು ಆಯೋಗದ ಶಿಫಾರಸಿನಡಿ ನಿಗದಿಪಡಿಸಬೇಕು ಎಂದು ಹೋರಾಟ ಮಾಡಬೇಕು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಪ್ರಶ್ನಿಸಬೇಕು. “ಏನಪ್ಪ, 15ನೇ ಹಣಕಾಸು ಆಯೋಗ ರಾಜ್ಯಕ್ಕೆ ಶಿಫಾರಸು ಮಾಡಿರುವ 5,495 ಕೋಟಿ ರೂ. ವಿಶೇಷ ಪರಿಹಾರವನ್ನು ಯಾಕಮ್ಮ ಪುನರ್‌ ಪರಿಶೀಲಿಸಿ ಅಂತಿರಿ. ವಿಶೇಷ ಪರಿಹಾರ ಕೊಡಿ’ ಎಂದು ಒತ್ತಾಯಿಸಿ. ರಾಜ್ಯದ ಹಿತದೃಷ್ಟಿಯಿಂದ ಇಂತಹ ಕ್ರಮಗಳನ್ನೆಲ್ಲಾ ಮಾಡಬೇಕಾಗುತ್ತದೆ ಎಂದು ಹೇಳಿದರು.

ಬಾಕಿ ತೆರಿಗೆ ವಸೂಲಿ ಮಾಡಿ
ವಾಣಿಜ್ಯ ತೆರಿಗೆಗೆ ಸಂಬಂಧಪಟ್ಟಂತೆ ಪ್ರಕರಣಗಳು ನ್ಯಾಯಾಲಯದಲ್ಲಿದ್ದು, 17,000 ಕೋಟಿ ರೂ. ಬಾಕಿ ತೆರಿಗೆ ವಸೂಲಿ ಮಾಡಿ. ಹಾಗೆಯೇ ಅಬಕಾರಿ ತೆರಿಗೆಯಿಂದ 762 ಕೋಟಿ ರೂ. ಬಾಕಿಯಿದ್ದು, ಸಂಗ್ರಹಿಸಿ. ತೆರಿಗೆ ಆದಾಯದ ಜತೆಗೆ ತೆರಿಗೆಯೇತರ ಆದಾಯ ಹೆಚ್ಚಳಕ್ಕೂ ಗಮನ ಹರಿಸಿ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.